ಅವೈಜ್ಞಾನಿಕ ಕಾಮಗಾರಿ:ಕಿರಿಕಿರಿ


Team Udayavani, Nov 27, 2017, 4:09 PM IST

kol-2.jpg

ಬಂಗಾರಪೇಟೆ: ಪ್ರತಿಷ್ಠಿತ ಎತ್ತಿನಹೊಳೆ ನೀರಾವರಿ ಯೋಜನೆಯ ಎಸ್‌ಸಿಪಿ ಅನುದಾನದಡಿ ತಾಲೂಕಿನ ಎಸ್ಸಿ, ಎಸ್ಟಿ ಕಾಲೋನಿಗಳಲ್ಲಿ ಮಂಜೂರಾಗಿರುವ ಸಿಮೆಂಟ್‌ ರಸ್ತೆಗಳ ಅನುದಾನ ಅಭಿವೃದ್ಧಿ ಕಾಣದೇ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ(ಕೆಆರ್‌ ಐಡಿಎಲ್‌) ಎಂಜಿನಿಯರ್‌ಗಳ ಜೇಬು ಸೇರುತ್ತಿದೆ. ಅಲ್ಲದೇ, ಕೆಆರ್‌ಐಡಿಎಲ್‌ ಎಂಜಿನಿಯರ್‌ಗಳ ಅವೈಜ್ಞಾನಿಕ ಕಾಮಗಾರಿಯಿಂದ ಗ್ರಾಮಸ್ಥರು ಕಿರಿಕಿರಿ ನುಭವಿಸುವಂತಾಗಿದೆ.

ಎತ್ತಿನಹೊಳೆ ನೀರಾವರಿ ಯೋಜನೆ ವಿಶ್ವೇಶ್ವರಯ್ಯ ಜಲ ನಿಗಮದ ಮೂಲಕ ಪ್ರತಿ ವರ್ಷ 3 ರಿಂದ 4 ಕೋಟಿ ರೂ.
ಅನುದಾನ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗುತ್ತದೆ. ಬಂಗಾರಪೇಟೆ ಕ್ಷೇತ್ರಕ್ಕೆ 2016-17ನೇ ಸಾಲಿಗೆ ಮಂಜೂರಾಗಿದ್ದ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಕೆಆರ್‌ಐಡಿಎಲ್‌ ಸಂಸ್ಥೆಗೆ ವಹಿಸಲಾಗಿತ್ತು. ಆದರೆ, ಕಳಪೆ ಕಾಮಗಾರಿಯಿಂದ ಅನುದಾನ ಪೋಲಾಗುತ್ತಿದೆ.

ಬಂಗಾರಪೇಟೆ ತಾಲೂಕಿನ ಕೇತ ಗಾನಹಳ್ಳಿ ಗ್ರಾಪಂ ವ್ಯಾಪ್ತಿಯ ಮಾಕಾರ ಹಳ್ಳಿ ಗ್ರಾಮದಲ್ಲಿ 10 ಲಕ್ಷ ರೂ. ಅನುದಾನವನ್ನು ಮೀಸಲಿಟ್ಟಿದ್ದು, ಇದರಲ್ಲಿ ಚರಂಡಿ, ಸಿಮೆಂಟ್‌ ರಸ್ತೆ ಮತ್ತು ಮೋರಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಅಂದಾಜು ಪಟ್ಟಿ ತಯಾರಿಸಿದ್ದರೂ ಕೇವಲ ಶೇ.40 ರಷ್ಟು ಮಾತ್ರ ಚರಂಡಿ ಮತ್ತು ಸಿಮೆಂಟ್‌ ನಿರ್ಮಾಣ ಮಾಡಿ ಮೋರಿ ನಿರ್ಮಾಣ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ.

ದುರ್ವಾಸನೆಯಿಂದ ಕಿರಿಕಿರಿ: ತಾಲೂಕಿನ ಮಾಕಾರಹಳ್ಳಿ ಗ್ರಾಮದಲ್ಲಿ ಚರಂಡಿ ನಿರ್ಮಾಣ ಮಾಡಿದ್ದು, ಕಾಮಗಾರಿಯನ್ನು ಗ್ರಾಮದ ಮುಖ್ಯ ಸರ್ಕಲ್‌ಗೆ ಸ್ಥಗಿತಗೊಳಿಸಲಾಗಿದೆ. ಕೊಳಚೆ ನೀರು ಚರಂಡಿಯಲ್ಲಿ ಜಮಾವಣೆಯಾಗಿ ರಸ್ತೆ ಮೇಲೆ ಹರಿಯುತ್ತಿದೆ.ಇದರಿಂದ ಸಾರ್ವಜನಿಕರು ದುರ್ವಾಸನೆಯ ತೊದರೆಯಾಗುತ್ತಿದೆ. 

ಎಂಜಿನಿಯರ್‌ ಬೇಜವಾಬ್ದಾರಿ ಉತ್ತರ: ರಸ್ತೆಗೆ ಚರಂಡಿ ನೀರನ್ನು ಅವೈಜ್ಞಾನಿಕವಾಗಿ ಬಿಟ್ಟಿರುವುದರಿಂದ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಜೂನಿಯರ್‌ ಎಂಜಿನಿಯರ್‌ರನ್ನು ಪ್ರಶ್ನಿಸಿದರೆ ಬೇಜವಾಬ್ದಾರಿಉತ್ತರ ನೀಡುತ್ತಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆಆರ್‌ಡಿಎಲ್‌ ಸಂಸ್ಥೆಯಿಂದ ನಿರ್ವಹಣೆ ಮಾಡಿರುವ ಕಾಮಗಾರಿ ಸಿಮೆಂಟ್‌ ರಸ್ತೆ ಎದ್ದು ಹೋಗುತ್ತಿದೆ. ಚರಂಡಿಯಲ್ಲಿ ಸಿಮೆಂಟ್‌ ಉದುರುತ್ತಿದೆ. ಗ್ರಾಮದಲ್ಲಿ ಕೆಲವು ಕಡೆ ಮಾತ್ರ ಚರಂಡಿ ಕಾಮಗಾರಿ ಮಾಡಿ ಒಂದು ಚರಂಡಿಯಿಂದ ಮತ್ತೂಂದು ಚರಂಡಿಗೆ ಲಿಂಕ್‌ ಕೊಡದ್ದರಿಂದ ಕೊಳಚೆ ನೀರು ದುರ್ವಾಸನೆ ಬೀರುತ್ತಿದೆ.

ಎತ್ತಿನಹೊಳೆ ಯೋಜನೆ ಅಧಿಕಾರಿಗಳು ಈ ಕಾಮಗಾರಿಗಳನ್ನು ನಿರ್ವಹಣೆ ಮಾಡದೇ ಕೆಆರ್‌ಐಡಿಎಲ್‌ ಸಂಸ್ಥೆಗೆ ನೀಡಿರುವುದರಿಂದ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ತೀರಾ ಕಳಪೆಯಾಗಿವೆ. ಕಾಮಗಾರಿಯ
ಅಂದಾಜು ಪಟ್ಟಿಯಂತೆ ಕೆಲಸ ಮಾಡದೇ ಕೇವಲ ಅಂದಾಜು ಪಟ್ಟಿಯ ಶೇ.40 ಮಾತ್ರ ಕಾಮಗಾರಿ ಮಾಡಿ ಸರ್ಕಾರದ
ಬೊಕ್ಕಸಕ್ಕೆಗೆ ನಷ್ಟವುಂಟು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಡೀಸಿ ಕ್ರಮ ಕೈಗೊಳ್ಳಲಿ: ಎತ್ತಿನಹೊಳೆ ಯೋಜನೆ ಮೂಲಕ ಮಾಕಾರಹಳ್ಳಿ ಗ್ರಾಮದಲ್ಲಿ ಚರಂಡಿ, ಸಿಮೆಂಟ್‌ ರಸ್ತೆ
ಹಾಗೂ ಎರಡೂ ಕಡೆ ಮೋರಿಗಳನ್ನು ನಿರ್ಮಾಣ ಮಾಡುವ ಬಗ್ಗೆ ಕೆಆರ್‌ ಐಡಿಎಲ್‌ ಅಧಿಕಾರಿಗಳು ಗ್ರಾಮಕ್ಕೆ ಬಂದು
ಅಳತೆ ಮಾಡಿಕೊಂಡು ಹೋಗಿದ್ದರು. ನಂತರ ಗುರುತು ಮಾಡಿದ್ದ ಸ್ಥಳದವರೆಗೂ ಕೆಲಸ ಮಾಡದೇ ಅಲ್ಲಲ್ಲಿ ಅಲ್ಪಸ್ವಲ್ಪ ಕೆಲಸ ಮಾಡಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀರಾ ತೊಂದರೆಯಾಗಿದೆ.

ನಡು ರಸ್ತೆಯಲ್ಲಿ ಚರಂಡಿ ನೀರು ಬಿಟ್ಟಿರುವುದರಿಂದ ದುರ್ವಾಸನೆ ಬೀರುತ್ತಿದೆ. ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಕೇತಗಾನಹಳ್ಳಿ ಗ್ರಾಪಂ ಸದಸ್ಯೆ ಮಾಕಾರಹಳ್ಳಿ ಗ್ರಾಮದ ರತ್ನಮ್ಮ ನಾರಾಯಣಪ್ಪ ಮನವಿ ಮಾಡಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಬಿಟ್ಟು ಉಳಿದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಎತ್ತಿನಹೊಳೆ ಯೋಜನೆಯ ಎಸ್‌ ಸಿಪಿ ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ ಸಂಸ್ಥೆಗೆ ವಹಿಸಲಾಗಿದೆ. 2016-17ನೇ ಸಾಲಿನಲ್ಲಿ ಕೈಗೊಂಡಿರುವ ಕಾಮಗಾರಿಗಳ ವರದಿಯನ್ನು ಇನ್ನೂ ನೀಡಿಲ್ಲ. ಕೆಆರ್‌ ಐಡಿಎಲ್‌ ಸಂಸ್ಥೆಯಿಂದ ವರದಿ ಬಂದ ನಂತರ ಇಲಾಖೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. 
ಶ್ರೀಕಾಂತ್‌, ಎಇ, ಎತ್ತಿನಹೊಳೆ ಯೋಜನೆ

ಬಂಗಾರಪೇಟೆ ತಾಲೂಕಿನ ಮಾಕಾರಹಳ್ಳಿ ಗ್ರಾಮದಲ್ಲಿ ಅಂದಾಜು ಪಟ್ಟಿಯಂತೆ ಕೆಲಸ ನಿರ್ವಹಿಸುವಂತೆ ಸಂಬಂಧಪಟ್ಟ ಕಿರಿಯ ಅಭಿಯಂತರರಿಗೆ ವಹಿಸಲಾಗಿತ್ತು. ಗ್ರಾಮಸ್ಥರಿಗೆ ಸಮರ್ಪಕವಾಗಿ ಕೆಲಸ ಮಾಡದಿದ್ದಲ್ಲಿ ಕೂಡಲೇ ಎಇಇ ಅಧಿಕಾರಿಗಳನ್ನು ಪರಿಶೀಲನೆ ನಡೆಸಲು ಕಳುಹಿಸಿ ಕ್ರಮಕೈಗೊಳ್ಳಲಾಗುವುದು.
ಆರ್‌.ವಿ.ಮಂಜುನಾಥ್‌, ಇಇ, ಕೆಆರ್‌ಐಡಿಎಲ್‌, ಕೋಲಾರ.

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.