ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ


Team Udayavani, Nov 18, 2020, 4:11 PM IST

ಅಕ್ರಮ ಮದ್ಯದಂಗಡಿ ತೆರವಿಗೆ ಒತ್ತಾಯ

ಮುಳಬಾಗಿಲು: ಭೂ ಪರಿವರ್ತನೆ ಇಲ್ಲದೇ ಅಕ್ರಮವಾಗಿ ಮದ್ಯದ ಅಂಗಡಿಗಳನ್ನು ತಾಲೂಕಿನ ಆಂಧ್ರ ಪ್ರದೇಶದ ಗಡಿ ಗ್ರಾಮಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಖೀಲ ಭಾರತ ಕಿಸಾನ್‌ ಮಂಚ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ಆರೋಪಿಸಿದರು.

ಮಂಗಳವಾರ ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳ ಜನರು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್‌ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.

ರೈತರ ಜಮೀನುಗಳಿಗೆ ಹಾನಿ: ಇತ್ತೀಚೆಗೆ ಜಿಲ್ಲೆಯ ಕೆಲವು ಪ್ರಭಾವಿ ವ್ಯಕ್ತಿಗಳು ಕೋಲಾರದ ತಮ್ಮ ಬಾರ್‌ಗಳನ್ನು ಮುಳಬಾಗಿಲು ತಾಲೂಕಿನ ಹೆಬ್ಬಣಿ ಗ್ರಾಪಂ ವ್ಯಾಪ್ತಿಯ ಕಿರಮಣಿಮಿಟ್ಟ, ಎಂ.ಗೊಲ್ಲಹಳ್ಳಿ ಗ್ರಾಮದ ಆಂಧ್ರದ ಗಡಿ, ಹೆ.ಬೈಪನಹಳ್ಳಿ ಗ್ರಾಮದ ಆಂಧ್ರದ ಗಡಿಗಳಲ್ಲಿ ಕೃಷಿ ಜಮೀನುಗಳಲ್ಲಿ ಭೂ ಪರಿವರ್ತನೆ ಮಾಡದೇ ಬಾರ್‌ ಲೈಸೆನ್ಸ್‌ಗಳನ್ನು ವರ್ಗಾವಣೆ ಮಾಡಿಸಿ ಬಾರ್‌ಗಳನ್ನು ನಿರ್ಮಿಸಿ ಮದ್ಯದ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ಅಕ್ರಮವಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸುತ್ತಲಿನ ಹಳ್ಳಿಗಳಿಗೆ ಮತ್ತು ಅಲ್ಲಿನ ರೈತರ ಜಮೀನುಗಳಿಗೆ ಹೆಚ್ಚು ಹಾನಿಯನ್ನು ಉಂಟು ಮಾಡುತ್ತಿದ್ದಾರೆಂದು ಆರೋಪಿಸಿದರು.

ಸದರಿಬಾರ್‌ಮಾಲೀಕರುಹೆಬ್ಬಣಿ ಗ್ರಾಮ ಪಂಚಾಯಿತಿಯಲ್ಲಿ ಉಪಾಹಾರ ಮಂದಿರಕ್ಕೆಂದು ಪರವಾನಿಗೆ ಪಡೆದು ಬಾರ್‌ಗಳನ್ನು ನಿರ್ಮಿಸಿ ಕೊಂಡಿದ್ದಾರೆ. ಈಗಾಗಲೇ ಗ್ರಾ.ಪಂ. ವ್ಯಾಪ್ತಿಯ13 ಹಳ್ಳಿಗಳಲ್ಲಿ2 ಸಾವಿರ ಕುಟುಂಬಗಳಲ್ಲಿ ಸುಮಾರು 15 ಸಾವಿರ ಜನಸಂಖ್ಯೆ ವಾಸವಾಗಿದ್ದು, ಅದಕ್ಕೆ ತಕ್ಕಂತೆ ಹಲವು ವರ್ಷಗಳ ಹಿಂದೆಯೇ ಮೂರು ಬಾರ್‌ಗಳನ್ನು ತೆರೆಯಲಾಗಿದ್ದರೂ ಇಷ್ಟು ಜನರ ಆರೋಗ್ಯ ಕಾಪಾಡಲು ಒಂದೇ ಒಂದು ಪ್ರಾಥಮಿಕ ಆರೋಗ್ಯಕೇಂದ್ರ ಇದೆ. ಸದರಿ ವ್ಯಾಪ್ತಿಯಲ್ಲಿಯೇ 400 ಕುಟುಂಬಕ್ಕೆ ಒಂದು ಬಾರ್‌ನಂತೆ ಈಗಿರುವ ಮೂರು ಬಾರ್‌ಗಳು ಸಾಲದೆಂಬಂತೆ ಮತ್ತೆ ಮೂರು ಬಾರ್‌ಗಳನ್ನು ತೆರೆದು ಜನರ ಆರೋಗ್ಯ ಹಾಳು ಮಾಡುತ್ತಾ ಹಣ ಮಾಡಲು ಹೊರ ಟಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರಲ್ಲದೇ ತಹಶೀಲ್ದಾರ್‌ ರಾಜಶೇಖರ್‌ ಮತ್ತು ಅಬಕಾರಿ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಕಿಸಾನ್‌ ಮಂಚ್‌ ಜಿಲ್ಲಾಧ್ಯಕ್ಷ ಮಲ್ಲೆಕುಪ್ಪ ಅಂಬರೀಶ್‌, ಸೌಟೂರು ವೆಂಕಟರಾಮಪ್ಪ, ವಕೀಲ ಸದಾ ಶಿವ, ಕಸುವುಗಾನಹಳ್ಳಿ ವೆಂಕಟರಾಮ್‌, ಜಯ ರಾಮ್‌, ಅಮರ ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಾರ್‌ಗಳಿಗೆಬೀಗ :  ಮುಖಂಡರ ಪ್ರತಿಭಟನೆಗೆ ಬೆಚ್ಚಿ ಬಿದ್ದ ಅಧಿಕಾರಿಗಳು, ಸದರಿ ಜಮೀನು ಕಂದಾಯ ಇಲಾಖೆ ಪಿ.ನಂಬರ್‌ ಆಗಿದ್ದು, ಭೂ ಪರಿವರ್ತನೆ ಮಾಡಿಸದೇ ಹೇಗೆ ಬಾರ್‌ ನಿರ್ಮಿಸಿದ್ದೀರಿ ಕೂಡಲೇ ಮುಚ್ಚುವಂತೆ ಅಬಕಾರಿ ನಿರೀಕ್ಷಕ ಚಿರಂಜೀವಿಗೆ ತಹಶೀಲ್ದಾರ್‌ ರಾಜಶೇಖರ್‌ ಸೂಚಿಸಿದರಲ್ಲದೇ ಬಾರ್‌ಗಳಿಗೆ ಬೀಗ ಜಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.