ರೇಷ್ಮೆ ಬೆಳೆಗಾರರು ನರೇಗಾ ಸದ್ಬಳಕೆ ಮಾಡಿಕೊಳ್ಳಿ

ವೈಯಕ್ತಿಕ ಅಭಿವೃದ್ಧಿ ಕಾರ್ಯಗಳ ಜತೆ ಕಾರ್ಮಿಕರಿಗೂ ಕೂಲಿ ಸಿಗುತ್ತೆ: ಉಪನಿರ್ದೇಶಕ ಪ್ರಭಾಕರ್‌ ಸಲಹೆ

Team Udayavani, Jun 9, 2019, 1:16 PM IST

kolar-tdy-2..

ಬಂಗಾರಪೇಟೆ: ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕವಾಗಿ ರೇಷ್ಮೆ ಕೃಷಿ ಅಭಿವೃದ್ಧಿ ಪಡಿಸಿಕೊಳ್ಳಲು ಹಾಗೂ ಸ್ಥಳೀಯ ಕೂಲಿಕಾರ್ಮಿಕರಿಗೆ ಉದ್ಯೋಗ ನೀಡಲು ಬೆಳೆಗಾರರು ಈ ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಂ.ಕೆ.ಪ್ರಭಾಕರ್‌ ಸಲಹೆ ನೀಡಿದರು.

ತಾಲೂಕಿನ ಕುಪ್ಪನಹಳ್ಳಿ ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಕೇಂದ್ರ ರೇಷ್ಮೆ ಮಂಡಳಿ ಹಮ್ಮಿಕೊಂಡಿದ್ದ ಕ್ಷೇತ್ರೋತ್ಸವ ಹಾಗೂ ರೇಷ್ಮೆ ಬೆಳೆಗಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2 ಮತ್ತು 3ನೇ ವರ್ಷ ಹಿಪ್ಪುನೇರಳೆ ತೋಟಗಳಿಗೆ ನರೇಗಾ ಯೋಜನೆಯಡಿ ಸೌಲಭ್ಯವಿದ್ದು, ರೈತರು ತಮ್ಮ ತೋಟಗಳಿಗೆ ಹೆಚ್ಚಿನ ರೀತಿಯಲ್ಲಿ ಕೊಟ್ಟಿಗೆ ಗೊಬ್ಬರ ನೀಡಿ ನಿರ್ವಹಣೆ ಮಾಡಿದಲ್ಲಿ ದ್ವಿತಳಿ ರೇಷ್ಮೆ ಗೂಡನ್ನು ಉತ್ಪಾದನೆ ಮಾಡುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದೆಂದು ಸಲಹೆ ನೀಡಿದರು.

ರೈತರ ಜತೆ ಚರ್ಚೆ:ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿಗಳಾದ ಡಾ.ಹರಿರಾಜು ಮತ್ತು ಡಾ.ಶಿವಶಂಕರ್‌ ಮಾತನಾಡಿ, ಗುಣಮಟ್ಟದ ದ್ವಿತಳಿ ಗೂಡುಗಳನ್ನು ಬೆಳೆಯುವುದರ ಮಹತ್ವ, ಬೆಳೆದ ನಂತರ ಆ ಗೂಡುಗಳನ್ನು ನಿರ್ವಹಣೆ ಮಾಡುವುದು, ಮಾರುಕಟ್ಟೆ ಮಾಡುವ ರೀತಿ, ಗುಣಮಟ್ಟದ ರೇಷ್ಮೆಗೆ ಇರುವ ಬೇಡಿಕೆ, ಅದಕ್ಕೆ ಇಲಾಖೆ ಮತ್ತು ಕೇಂದ್ರ ರೇಷ್ಮೆ ಮಂಡಳಿ ತೆಗೆದುಕೊಂಡಿರುವ ಕ್ರಮಗಳು ಮತ್ತು ದೊರೆಯುವ ಸೌಲಭ್ಯಗಳ ಬಗ್ಗೆ ವಿವರವಾಗಿ ರೈತರೊಂದಿಗೆ ಚರ್ಚೆ ಮಾಡಿದರು.

ರೈತರಿಂದ ಮಾಹಿತಿ: ಕೋಲಾರ ಟಮಕದ ತೋಟಗಾರಿಕಾ ಮಹಾವಿದ್ಯಾಲಯ ಉಪನ್ಯಾಸಕ ಡಾ.ನೂರುಲ್ಲಾ ಮತ್ತು ಡಾ.ಶಶಿಧರ್‌ ಮಾತನಾಡಿ, ಹಿಪ್ಪುನೇರಳೆ ತೋಟಗಳಲ್ಲಿ ಬೇರು ಕೊಳೆ ರೋಗ, ಬೇರು ಗಂಟು ರೋಗ, ಕಾಂಡ ಕೊಳೆ ರೋಗಗಳು ಹೆಚ್ಚಾಗಿ ಕಾಣುತ್ತಿದ್ದು, ಅದರ ನಿಯಂತ್ರಣ ಕ್ರಮಗಳ ಬಗ್ಗೆ ಮತ್ತು ಪೋಷಕಾಂಶಗಳ ನಿರ್ವಹಣೆ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ವರದಾನ: ಮೈರಾಡ ಸಂಸ್ಥೆಯಿಂದ ಆಗಮಿಸಿದ್ದ ವೆಂಕಟರೆಡ್ಡಿ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳು, ಅವುಗಳ ಸ್ಥಾಪನೆ ಮಾಡುವ ವಿಧಾನ ಮತ್ತು ಉದ್ದೇಶ, ಅದರಿಂದ ರೈತರಿಗೆ ಆಗುವ ಉಪಯೋಗಗಳು, ಸಿಗುವ ಸೌಲಭ್ಯಗಳ ಬಗ್ಗೆ ವರವಾಗಿದೆ ಎಂದು ಹೇಳಿದರು

ನಿರ್ವಹಣೆ ಮಾಡಿ: ನೆಟಾಫಿಮ್‌ ಕಂಪನಿ ತಜ್ಞರಾದ ಆಂಜಿನಪ್ಪ ಮಾತನಾಡಿ, ಹನಿನೀರಾವರಿ ಅಳವಡಿಕೆ ವಿಧಾನಗಳು, ಅವುಗಳ ನಿರ್ವಹಣೆ ಮಾಡುವ ವಿಧಾನ, ರೈತರು ಮಾಡುವ ಅನೇಕ ತಪ್ಪುಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಿದಲ್ಲಿ ಬಹಳ ವರ್ಷಗಳು ಬಾಳಿಕೆ ಬರುವುದೆಂದು ರೈತರಿಗೆ ಸಲಹೆ ನೀಡಿದರು.

ಕ್ಲಸ್ಟರ್‌ ವಿಜ್ಞಾನಿಗಳಾದ ಡಾ.ಮೋರಿಸನ್‌ ಮಾತನಾಡಿ, ಇತ್ತೀಚೆಗೆ ಅತಿ ಹೆಚ್ಚಿನ ಶೀತಾಂಶ ಮತ್ತು ವಾತಾವರಣದಲ್ಲಿನ ಏರುಪೇರುಗಳಿಂದ ದ್ವಿತಳಿ ಬೆಳೆಗಳಿಗೆ ತೊಂದರೆ ಆಗುತ್ತಿದ್ದು, ರೈತರು ತಮ್ಮ ಮನೆಗಳಲ್ಲಿ ಚೆನ್ನಾಗಿ ಗಾಳಿ ಬಿಡುವುದು, ತೆಳುವಾಗಿಡುವುದು, ಸುಣ್ಣ ಹೆಚ್ಚಾಗಿ ಬಳಕೆ ಮಾಡುವುದು, ಗುಣಮಟ್ಟದ ಸೊಪ್ಪು ನೀಡುವ ಬಗ್ಗೆ ಸಲಹೆ ನೀಡಿದರು.

ಭಾಗವಹಿಸಿ: ರೇಷ್ಮೆ ಸಹಾಯಕ ನಿರ್ದೇಶಕ ಶ್ರೀನಿವಾಸ ಮಾತನಾಡಿ, ಪ್ರತಿಯೊಬ್ಬ ರೈತ ಕಾರ್ಯಕ್ರಮದಲ್ಲಿ ಸಕಾಲಕ್ಕೆ ಹಾಜರಾದ್ರೆ ತಜ್ಞರು ನೀಡುವ ಮಾಹಿತಿ ಪಡೆದು, ತಾವು ಉತ್ತಮ ಬೆಳೆ ಬೆಳೆಯುವ ಮೂಲಕ ಖರ್ಚಿನಲ್ಲಿ ಹೆಚ್ಚು ಲಾಭಗಳಿಸಬಹುದೆಂದು ಕಿವಿಮಾತು ಹೇಳಿದರು. ರೇಷ್ಮೆ ವಿಸ್ತರಣಾಧಿಕಾರಿಗಳಾದ ಜಯ ಶ್ರೀನಿವಾಸಲು, ಜಿ.ಶ್ರೀನಿವಾಸ, ಕೇಂದ್ರ ಮತ್ತು ರೇಷ್ಮೆ ಇಲಾಖೆ ಸಿಬ್ಬಂದಿ, 170ಕ್ಕೂ ಹೆಚ್ಚಿನ ರೈತರು, ಚಾಕಿ ಕೇಂದ್ರದ ಮಾಲಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.