ಸಮಾಜಕ್ಕೆ ವಾಲ್ಮೀಕಿ, ಅಂಬೇಡ್ಕರ್ ಕೊಡುಗೆ ಅಪಾರವಾದದ್ದು
Team Udayavani, Mar 9, 2020, 3:00 AM IST
ಮಾಸ್ತಿ: ಜಿಲ್ಲೆಯಲ್ಲಿ ವಾಲ್ಮೀಕಿ ಸಮಾಜದವರು ಹೆಚ್ಚಿರುವ 2ನೇ ತಾಲೂಕು ಮಾಲೂರು. ಕಷ್ಟ ಜೀವಿಗಳು, ನಂಬಿಕೆಗೆ ಅರ್ಹರಾದ ತಾವುಗಳು. ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರ ಹಿಂದುಳಿದಿದ್ದು, ಸರ್ಕಾರದ ಸೌಲಭ್ಯ ಬಳಸಿಕೊಂಡು ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಸಲಹೆ ನೀಡಿದರು.
ಹೋಬಳಿಯ ದೊಡ್ಡಇಗ್ಗಲೂರು ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಿತಿಯ ಕೆಆರ್ಐಡಿಎಲ್ ಯೋಜನೆಯ 10 ಲಕ್ಷ ರೂ.ನಲ್ಲಿ ನಿರ್ಮಿಸಿರುವ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟಿಸಿ ಮಾತನಾಡಿದರು. ವಾಲ್ಮೀಕಿ ಮಹರ್ಷಿಗಳು ಸಮಾಜಕ್ಕೆ ರಾಮಾಯಣ ನೀಡಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ನೀಡಿದ್ದಾರೆ. ಇತಿಹಾಸಕ್ಕೆ ಇವರ ಕೊಡುಗೆ ಅಪಾರವಾದದು ಎಂದು ಹೇಳಿದರು.
313 ಕೋಟಿ ರೂ. ಅನುದಾನ: ವಾಲ್ಮೀಕಿ ನಾಯಕ ಪರಿಷತ್ ರಾಜ್ಯಾಧ್ಯಕ್ಷ ಬಿ.ವಿ.ಬಸವರಾಜ್ ನಾಯಕ್ ಮಾತನಾಡಿ, ಸಮಾಜದಲ್ಲಿ ತೀರ ಹಿಂದುಳಿದಿರುವ ವಾಲ್ಮೀಕಿ ನಾಯಕ ಸಮುದಾಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಪರಿಶಿಷ್ಟ ವರ್ಗಗಳ ಕಲ್ಯಾಣ ಸಮಿತಿ ಸಚಿವಾಲಯ ಹಾಗೂ ನಿಗಮ ಮಂಡಳಿ ಸ್ಥಾಪಿಸಿ 313 ಕೋಟಿ ರೂ. ಅನುದಾನ ನೀಡಿದೆ ಎಂದು ಹೇಳಿದರು.
26,930 ಕೋಟಿ ರೂ. ನಿಗದಿ: 2011ರ ಜನಗಣತಿಯಂತೆ ಶೇ.21 ಇರುವ ಸಮುದಾಯದ ಅಭಿವೃದ್ಧಿಗೆ ಸರ್ಕಾರ ವಿವಿಧ ಇಲಾಖೆಗಳಿಗೆ ನೀಡುವ ಅನುದಾನವನ್ನು ಪ್ರತಿ ವರ್ಷ ಮಾ.30 ಒಳಗೆ ಖರ್ಚು ಮಾಡಬೇಕಿದೆ. ಪ್ರಸ್ತುತ ಬಜೆಟ್ನಲ್ಲಿ ಸಿಎಂ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ 26,930 ಕೋಟಿ ರೂ. ನಿಗದಿ ಪಡಿಸಿದ್ದಾರೆ. ಅದೇ ರೀತಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದವರಿಗೆ 1ಲಕ್ಷ ರೂ. ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ವಸತಿ ಶಾಲೆ ಕೊಡಿ: ವಾಲ್ಮೀಕಿ ನಾಯಕ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ವೆಂಕಟರಾಂ ಮಾತನಾಡಿ, ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆ ಮಂಜೂರು ಮಾಡಲು ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು. ತಾಲೂಕಿನ ಮಾಸ್ತಿ ಮತ್ತು ದಿನ್ನಹಳ್ಳಿ ಭಾಗದಲ್ಲಿ ಸಮಾಜವರು ಹೆಚ್ಚಾಗಿದ್ದು, ಈ ಭಾಗದಲ್ಲಿ ಶೈಕ್ಷಣಿಕ ಪ್ರಗತಿಗಾಗಿ ವಸತಿ ಶಾಲೆ ಅಗತ್ಯವಾಗಿದೆ ಎಂದು ಹೇಳಿದರು.
ರಾಜೇನಹಳ್ಳಿ ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ, ಸದಸ್ಯ ಮುನೇಗೌಡ, ಕೆಡಿಪಿ ಮಾಜಿ ಸದಸ್ಯ ಎಂ.ವಿಜಯನರಸಿಂಹ, ವಾಲ್ಮೀಕಿ ನಾಯಕ ಸಂಘದ ತಾಲೂಕು ಅಧ್ಯಕ್ಷ ಅಬ್ಬಯ್ಯಪ್ಪ, ವಾಲ್ಮೀಕಿ ನಾಯಕ ಪರಿಷತ್ ತಾಲೂಕು ಅಧ್ಯಕ್ಷ ಟಿ.ಕೆ.ನಾಗರಾಜ್, ಮುಖಂಡ ಅಂಜನಿಸೋಮಣ್ಣ, ಸಮುದಾಯದ ಮುಖಂಡ ಟಿ.ಗುಂಡಪ್ಪ, ನಲ್ಲಾಂಡಹಳ್ಳಿ ನಾಗರಾಜ್, ಪಿಡಿಒ ಸೋಮೇಶ್, ಸಂಪತ್, ಮುನಿಯಪ್ಪ, ಲಕ್ಕಪ್ಪ, ಗಿರಿಯಪ್ಪ, ಶ್ರೀನಿವಾಸ್, ಮಾರ್ಕಂಡಪ್ಪ, ವೆಂಕಟೇಶ್ ಇತರರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ
ಉತ್ತರಪತ್ರಿಕೆ ಮರುಎಣಿಕೆ ಲೋಪ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ
ಮುಂದುವರಿದ ಖಾತೆ ಸಂಗೀತ ಕುರ್ಚಿ: ಮತ್ತೆ ಸಚಿವರ ಖಾತೆ ಬದಲಾವಣೆಗೆ ಮುಂದಾದ ಸಿಎಂ!
ದೆಹಲಿ: ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದರ ಮೇಲೆ ಹಲ್ಲೆ, ಕಾರು ಜಖಂ
ವಿಟ್ಲ: ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು