13ಕ್ಕೆ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ
Team Udayavani, Sep 27, 2019, 4:34 PM IST
ಮಾಲೂರು: ಪ್ರಸಕ್ತ ವರ್ಷದಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಅಚರಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ವಿ.ನಾಗರಾಜು ಸಮ್ಮುಖದಲ್ಲಿ ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಅ.13ರಂದು ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿಗಳ ಭಾವಚಿತ್ರದ ಅದ್ಧೂರಿ ಮೆರವಣಿಗೆ ಹಾಗೂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.
ಅಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವುದರ ಜೊತೆಗೆ ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಆವರಣದಿಂದ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.
ಸಭೆ ಆರಂಭದಲ್ಲಿ ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಹೀಗಾಗಿ ಇತರೆ ಸಮುದಾಯಗಳ ಮಹನೀಯರ ಜಯಂತಿ ಸರಳವಾಗಿ ಆಚರಿಸಲಾಗಿದೆ. ಅದೇರೀತಿ ವಾಲ್ಮೀಕಿ ಜಯಂತಿಯನ್ನೂ ಆಚರಿಸಲು ಸೂಚಿಸುತ್ತಿದ್ದಂತೆ ಸಭೆಯಲ್ಲಿನ ಸಮುದಾಯ ಮುಖಂಡರು, ಅದ್ಧೂರಿಯಾಗಿ ಅಚರಣೆ ಮಾಡುವಂತೆ ಪಟ್ಟು ಹಿಡಿದ ಕಾರಣ, ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಅಚರಿಸುವಂತೆ ಶಾಸಕರು ಸೂಚಿಸಿದರು. ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬದಿಯಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುತ್ತಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಪುನಾರಂಭಿಸಲು ಸೂಚನೆ ನೀಡುವಂತೆ ಶಾಸಕರಿಗೆ ಸಮಾಜದ ಮುಖಂಡರು ಮನವಿ ಮಾಡಿದರು.
ಸಭೆಯಲ್ಲಿ ಜಿಪಂ ಸದಸ್ಯ ಎಚ್.ವಿ.ಶ್ರೀನಿವಾಸ್, ಅಂಜನಿಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಮುನಿಯಪ್ಪ, ವಾಲ್ಮೀಕಿ ಮುಖಂಡ ಅಬ್ಬಯ್ಯಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ