ವಾಸ್ತುದೋಷ?: ಕಚೇರಿ ಬಾಗಿಲ ದಿಕ್ಕು ಬದಲು


Team Udayavani, Nov 13, 2019, 3:43 PM IST

kolar-tdy-1

ಮುಳಬಾಗಿಲು: ಸಾಮಾನ್ಯವಾಗಿ ಜನಪ್ರತಿನಿಧಿಗಳು ತಮ್ಮ ಸರ್ಕಾರಿ ಕಚೇರಿಗಳನ್ನು ವಾಸ್ತು  ರೀತಿ ಬದಲಾಯಿಸಿಕೊಳ್ಳುವುದನ್ನು ನೋಡಿ ದ್ದೇವೆ. ಆದರೆ, ನಗರದಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ವಾಸ್ತು ದೋಷವೆಂದು ದಕ್ಷಿಣ ದಿಕ್ಕಿಗೆ ಇದ್ದ ತಮ್ಮ ಕಚೇರಿ ಬಾಗಿಲನ್ನು ಮುಚ್ಚಿ, ಪೂರ್ವಕ್ಕೆ ನಿರ್ಮಿಸಿರುವ ಘಟನೆ ನಡೆದಿದೆ.

ಸರ್ಕಾರ ಕೃಷಿ ಕ್ಷೇತ್ರ ಅಭಿವೃದ್ಧಿ ಪಡಿಸಲು, ಅಗತ್ಯ ಯೋಜನೆ ಅನುಷ್ಠಾನ, ಕೃಷಿಗೆ ಸಂಬಂಧಿಸಿದಂತೆ ಸಲಹೆ ಸೂಚನೆ ನೀಡಲು ನಗರದಲ್ಲಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ನಿರ್ಮಿಸಲಾಗಿತ್ತು. ಅಂತೆಯೇ 1988ರ ಜೂ.16 ರಂದು ಅಂದಿನ ಕೃಷಿ ಸಚಿವ ಆರ್‌. ವಿ.ದೇಶಪಾಂಡೆ, ಶಾಸಕ ಆರ್‌. ವೆಂಕಟರಾಮಯ್ಯ ಉದ್ಘಾಟನೆ ಮಾಡಿದ್ದರು.

ರೈತರ ಸೇವೆಗೆ ಬಳಕೆ: ಅಂದಿನಿಂದ ತಾಲೂಕಿನ ಆವಣಿ, ದುಗ್ಗಸಂದ್ರ, ಬೈರಕೂರು, ತಾಯಲೂರು, ಕಸಬಾ ಹೋಬಳಿಗಳ 350 ಹಳ್ಳಿಗಳ ರೈತರಿಗೆ ಬೆಳೆಗೆ ಸಂಬಂಧಿಸಿದಂತೆ ಮಾಹಿತಿ, ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕ, ಕೃಷಿ ಸಲಕರಣೆಗಳ ವಿತರಣೆ, ಯೋಜನೆಗಳ ಅನುಷ್ಠಾನ, ನಿರ್ವಹಣೆ ಕಾರ್ಯಕ್ರಮವನ್ನು ಈ ಕಚೇರಿಯಿಂದ ಅಧಿಕಾರಿಗಳು ಮಾಡುತ್ತಿದ್ದರು.

31 ವರ್ಷಗಳಿಂದ ಸೇವೆ: ಇಂತಹ ಕಚೇರಿಯಲ್ಲಿ 31 ವರ್ಷಗಳಿಂದ ಹಲವು ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರು ಸೇವೆ ಸಲ್ಲಿಸಿದ್ದಾರೆ. ಅದರಂತೆ ವರ್ಷದಿಂದ ಎಡಿಎ ಆಗಿ ಇದೇ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಮರನಾರಾಯಣರೆಡ್ಡಿ, ಮೂರುನಾಲ್ಕು ದಿನಗಳಿಂದ ತಮ್ಮ ಈ ಕೃಷಿ ಇಲಾಖೆ ಕಚೇರಿ ವಾಸ್ತು ದೋಷವೆಂದು ದಕ್ಷಿಣ ದಿಕ್ಕಿಗೆ ಇದ್ದ ಬಾಗಿಲನ್ನು ಮುಚ್ಚಿ, ಪೂರ್ವ ದಿಕ್ಕಿಗೆ ಇದ್ದ ಗೋಡೆ ಹೊಡೆದು ಹೊಸದಾಗಿ ನಿರ್ಮಿಸಿದ್ದಾರೆ ಎಂದು ರೈತರು ಆರೋಪಿಸುತ್ತಾರೆ.

31 ವರ್ಷಗಳಿಂದ ಯಾವ ಅಧಿಕಾರಿಗಳಿಗೂ ಕಂಡು ಬರದ ಈ ವಾಸ್ತುದೋಷವು, ಈಗ ಎಡಿಎಗೆ ಏಕೆ ಕಂಡು ಬಂತು? ಅಲ್ಲದೆ, ಸರ್ಕಾರಿ ಅಧಿಕಾರಿಯಾಗಿ ಸರ್ಕಾರದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಣೆ ಮಾಡಬೇಕೇ ವಿನಃ, ವಾಸ್ತು ದೋಷ, ಯಾರೋ ಹೇಳಿದ ಮಾತು ನಂಬಿಕೊಂಡು ಸಾರ್ವಜನಿಕರ ಸ್ವತ್ತಾದ ಸರ್ಕಾರಿ ಕಚೇರಿಯನ್ನೇ ತಮಗೆ ಬಂದಂತೆ ಬದಲಿಕೊಳ್ಳುವುದು ಸರಿಯಲ್ಲ ಎಂಬುದು ರೈತರ ಆರೋಪ.

ಮೇಲಧಿಕಾರಿಗಳ ಅನುಮತಿ ಇಲ್ಲದೇ ಮೂರು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ಸರ್ಕಾರಿ ಕೃಷಿ ಇಲಾಖೆ ಕಚೇರಿ ವಾಸ್ತುದೋಷವೋ ? ಅಥವಾ ಮಲಮೂತ್ರ ವಿಸರ್ಜನೆಯೋ? ಒಟ್ಟಿನಲ್ಲಿ ದುರಸ್ತಿ ಮಾಡಿಸುತ್ತಿರುವುದಕ್ಕೆ ರೈತರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.