ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ: ಗ್ರಾಮಸ್ಥರ ಒತ್ತಾಯ


Team Udayavani, Feb 22, 2021, 2:57 PM IST

ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ: ಗ್ರಾಮಸ್ಥರ ಒತ್ತಾಯ

ಮಾಸ್ತಿ: ನೆರೆಯ ತಮಿಳುನಾಡು ಗಡಿಗೆ ಹೊಂದಿ ಕೊಂಡಿರುವ ಮಾಸ್ತಿ ಹೋಬಳಿಯ ಗೊಡಗಹಳ್ಳಿ ಗ್ರಾಮದಲ್ಲಿ ಮಾಲೂರು ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹಲವಾರು ಸಮಸ್ಯೆಗಳು ಅನಾವರಣಗೊಂಡ ಪ್ರಸಂಗ ನಡೆಯಿತು.

ತಹಶೀಲ್ದಾರ್‌ ಎಂ.ಮಂಜುನಾಥ್‌ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಹದಗೆಟ್ಟ ರಸ್ತೆ, ಕೆಲವು ಮೂಲ ಸೌಲಭ್ಯ ಕೊರತೆಸೇರಿದಂತೆ ಹಲವಾರು ಸಮಸ್ಯೆಗಳ ಜೊತೆಗೆ ಕಾಡುಪ್ರಾಣಿಗಳ ಹಾವಳಿಯಿಂದ ಆತಂಕದಲ್ಲೇ ಜೀವನ ನಡೆಸುತ್ತಿರುವ ಗ್ರಾಮಸ್ಥರು, ತಾವು ಎದುರಿಸುತ್ತಿ ರುವ ಸಮಸ್ಯೆಗಳ ಕುರಿತು ಅಧಿಕಾರಿಗಳ ಮುಂದೆಅನಾವರಣಗೊಳಿಸುವ ಮೂಲಕ ಗಮನ ಸೆಳೆದರು.

ಇಂದಿಗೂ ಬಸ್‌ ಸೌಕರ್ಯ ಕೇಳುವ ದುಸ್ಥಿತಿ:  ದಿನ್ನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ಮಮತಾರೆಡ್ಡಿ ಮಾತನಾಡಿ, ಕಾಡಾನೆ, ಕರಡಿ, ಚಿರತೆ ಸೇರಿದಂತೆ ಮತ್ತಿತರ ಕಾಡು ಪ್ರಾಣಿಗಳ ಹಾವಳಿ ಈ ಭಾಗದಲ್ಲಿ ಸಾಮಾನ್ಯವಾಗಿದೆ. ಆನೆ ಕಾರಿಡಾರ್‌ ನಿರ್ಮಾಣ ಮತ್ತಿತರ ಮೂಲಕ ಶಾಶ್ವತ ಪರಿಹಾರ ಕೈಗೊಳ್ಳುವುದಾಗಿ ಹೇಳಲಾಗುತ್ತಿದೆಯಾದರೂ, ಅನುಷ್ಠಾನಕ್ಕೆ ಬಂದಿಲ್ಲ. ಬಸ್‌ ವ್ಯವಸ್ಥೆಗಾಗಿ ಕೇಳುವ ದುಸ್ಥಿತಿ ಬಂದೊದಗಿದೆ ಎಂದರು.

ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಗಡಿ ಗ್ರಾಮವಾದ ಗೊಡಗಹಳ್ಳಿ ಗ್ರಾಮಕ್ಕೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಸರ್ಕಾರದಿಂದ ರೈತರು, ಬಡ ಜನತೆಗೆ ಸಿಗುವಸವಲತ್ತುಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಶಾಸಕ ಕೆ.ವೈ.ನಂಜೇಗೌಡ ತಾಕೀತು ಮಾಡಿದರು. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮಧ್ಯಾಹ್ನದ ನಂತರ ಆಗಮಿಸಿ ಗೊಡಗಹಳ್ಳಿಯಲ್ಲಿ ಸಂಚರಿಸಿ,ಸಮಸ್ಯೆಗಳನ್ನು ಆಲಿಸಿ ನಂತರ ಮಾತನಾಡಿದ ಅವರು, ಗೊಡಗಹಳ್ಳಿಯಲ್ಲಿ ಕಾಡಾನೆಗಳು ಸೇರಿದಂತೆ ಕಾಡು ಪ್ರಾಣಿಗಳಿಂದ ಆಗುವ ಅನಾಹುತಗಳನ್ನು ತಪ್ಪಿಸಲು ಸರ್ಕಾರಕ್ಕೆ ಸಮರ್ಪಕವಾದ ಮಾಹಿತಿ ನೀಡಿ ಸಹಕರಿಸುವಂತೆ ಸ್ಥಳದಲ್ಲಿದ್ದ ಅರಣ್ಯಾಧಿಕಾರಿ ಸುಧಾಕರ ಅವರಿಗೆ ಸೂಚನೆ ನೀಡಿದಕ್ಕೆ, ಕಾಡಾನೆಗಳ ಹಾವಳಿ ತಪ್ಪಿಸಲು ಬ್ಯಾರಿಕೇಡ್‌ ನಿರ್ಮಾಣಕ್ಕೆ ಪ್ರಸ್ತಾವನೆ ಅರಣ್ಯ ಇಲಾಖೆಗೆ ಸಲ್ಲಿಸಲಾಗಿದೆ. ಕೋವಿಡ್‌ಕಾರಣದಿಂದಾಗಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಉತ್ತರ ನೀಡಿದರು.

ತಹಶೀಲ್ದಾರ್‌ ಎಂ.ಮಂಜುನಾಥ್‌, ತಾಪಂ ಇಒ ಕೃಷ್ಣಪ್ಪ, ಜಿಪಂ ಸದಸ್ಯ ಎಚ್‌.ವಿ.ಶ್ರೀನಿವಾಸ್‌, ಗ್ರಾಪಂ ಅಧ್ಯಕ್ಷೆ ಉಮಾ ಜಲಂಧರ್‌, ಉಪಾಧ್ಯಕ್ಷೆಸುಧಾ, ತಾಲೂಕು ವೈದ್ಯಾಧಿಕಾರಿ ಡಾ.ಪ್ರಸನ್ನ,ಡಿಸಿಸಿ ಬ್ಯಾಂಕ್‌ ನಿರ್ದೇಶಕ ಚನ್ನರಾಯಪ್ಪ, ಸಹಾಯಕ ಕೃಷಿ ನಿರ್ದೇಶಕ ಚಂದ್ರಪ್ಪ, ಬಿಇಒಕೃಷ್ಣಮೂರ್ತಿ, ಜಿಪಂ ಎಇಇ ವೆಂಕಟೇಶ್‌, ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಹಾವು ಪ್ರತ್ಯಕ್ಷ: ಶಾಸಕ ಕೆ.ವೈ.ನಂಜೇಗೌಡ ಅವರು ಗ್ರಾಮದಲ್ಲಿ ಸಂಚರಿಸಿ, ಕಾರ್ಯಕ್ರಮದ ವೇದಿಕೆಯಲ್ಲಿ ಕುಳಿತು ಮಾತನಾಡುತ್ತಿದ್ದಂತೆಸ್ಥಳದಲ್ಲಿ ಹಾವು ಪ್ರತ್ಯಕ್ಷಗೊಂಡು ನೆರೆದಿದ್ದವರಲ್ಲಿಆತಂಕಕ್ಕೆ ಕಾರಣವಾಯಿತು. ಅರಣ್ಯ ಅಧಿಕಾರಿಗಳು ಹಾವು ಹಿಡಿದು ಹೊರಗೆ ಬಿಟ್ಟ ಪ್ರಸಂಗ ನಡೆಯಿತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.