ಬಂಗಾರಪೇಟೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ


Team Udayavani, Sep 18, 2022, 1:59 PM IST

ಬಂಗಾರಪೇಟೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

ಬಂಗಾರಪೇಟೆ: ಸಮಾಜದ ವಿವಿಧ ವರ್ಗದ ಜನರ ಮತ ಪಡೆದುಕೊಂಡ ಕೆಲವು ಜನಪ್ರತಿನಿಧಿಗಳು, ಗೆದ್ದ ನಂತರ ಎಲ್ಲಾ ವರ್ಗದ ಜನರನ್ನು ಮರತೆ ಹೋಗಿದ್ದು, ಮುಂದಿನ ದಿನಗಳಲ್ಲಿ ಜನರು ತಕ್ಕಪಾಠ ಕಲಿಸಬೇಕಾಗಿದೆ ಎಂದು ಸಂಸದ ಎಸ್‌. ಮುನಿಸ್ವಾಮಿ ಹೇಳಿದರು.

ಪಟ್ಟಣದ ವಿಶ್ವಕರ್ಮ ದೇಗುಲದಲ್ಲಿ ನಡೆದ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಿಂದ ಈ ಕ್ಷೇತ್ರದಲ್ಲಿ ತಮ್ಮ ಸ್ವಾರ್ಥಕ್ಕಾಗಿ ಮತ ಪಡೆದು ರಾಜಕಾರಣಿಯಾಗಿ ಬಡವರಿಗೆ ಸರ್ಕಾರಿ ಜಮೀನು ಮಾಡಿಕೊಡದೇ ತನ್ನ ಸ್ವಂತಕ್ಕಾಗಿ ಮಾಡಿಕೊಂಡು ಮೆರೆಯುತ್ತಿದ್ದಾರೆ ಎನ್ನುವುದು ಎಲ್ಲರ ಕಣ್ಣುಮುಂದೆ ಇದೆ ಎಂದು ಕಾಂಗ್ರೆಸ್‌ ಶಾಸಕರ ವಿರುದ್ಧ ಪರೋಕ್ಷವಾಗಿ ತಿರುಗೇಟು ನೀಡಿದರು.

ತಾಲೂಕಿನಲ್ಲಿ ಹೆಚ್ಚಾಗಿ ಸರ್ಕಾರಿ ಜಮೀನು ಗೋಮಾಳವಿದೆ. ಸಮಾಜದಲ್ಲಿರುವ ಎಲ್ಲ ಸಮಾಜಗಳಿಗೆ ತಲಾ ಐದಾರು ಎಕರೆ ಜಮೀನು ಮಂಜೂರು ಮಾಡಿಸಿದರೆ ಆ ಜನಾಂಗವು ಹೆಚ್ಚಾಗಿ ಋಣಿಯಾಗಿರುತ್ತಾರೆ. ಇಂದಿನ ಜನಪ್ರತಿನಿಧಿ ಈ ಒಳ್ಳೆಯ ಕೆಲಸವನ್ನು ಮಾಡದೇ ಯಾವ ರೀತಿ ಸರ್ಕಾರದ ಜಮೀನು ಕಬಳಿಸಿದ್ದಾರೆ ಎನ್ನುವುದು ಗೊತ್ತಿದೆ. ಇಂತಹ ಭ್ರಷ್ಟ ರಾಜಕಾರಣಿ ತಪ್ಪದೇ ಮನೆಗೆ ಕಳುಹಿಸುವ ಕೆಲಸ ಮಾಡಬೇಕು ಎಂದರು.

ವಿಶ್ವಕರ್ಮ ಜನಾಂಗಕ್ಕೆ ಬಿಎಸ್‌ವೈ ಶಕ್ತಿ ತುಂಬಿದ್ದಾರೆ: ರಾಜ್ಯದಲ್ಲಿ ವಿಶ್ವಕರ್ಮ ಜನಾಂಗವನ್ನು ಹಲವಾರು ವರ್ಷ ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್‌ ಬಳಸಿಕೊಂಡಿದ್ದನ್ನು ತಾವೆಲ್ಲರೂ ನೋಡಿದ್ದೀರಿ. ವಿಶ್ವಕರ್ಮ ಜನಾಂಗದ ಕೆಲವು ಮುಖಂಡರಿಗೆ ರಾಜಕೀಯ ಭವಿಷ್ಯದ ಆಮಿಷವೊಡ್ಡಿ ಅವರಿಂದ ರಾಜಕೀಯ ಅಧಿಕಾರ ಪಡೆದು ಮೋಸ ಮಾಡಿದ್ದ ವೇಳೆ ಬಿ.ಎಸ್‌.ಯಡಿಯೂರಪ್ಪ ಅವರು ವಿಶ್ವಕರ್ಮ ನಿಗಮ ಸ್ಥಾಪನೆ ಮಾಡಿ ಅನುದಾನ ಮಂಜೂರು ಮಾಡಿಸಿ ಜನಾಂಗದ ಏಳಿಗೆಗೆ ಶ್ರಮಿಸಿ ವಿಶ್ವಕರ್ಮ ಜನಾಂಗಕ್ಕೆ ಶಕ್ತಿ ತುಂಬಿದ್ದಾರೆಂದು ಹೇಳಿದರು.

ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ, ಪುರಸಭೆ ಸದಸ್ಯ ಕಪಾಲಿ ಶಂಕರ್‌, ಸಂಘದ ಅಧ್ಯಕ್ಷ ಆರ್‌.ಶಶಿಕುಮಾರ್‌, ಕಾರ್ಯದರ್ಶಿ ಗಿರಿಶೇಖರ್‌, ಖಜಾಂಚಿ ಆರ್‌.ಶ್ರೀನಿವಾಸ್‌, ಉಪಾಧ್ಯಕ್ಷ ಬುದ್ದಾಚಾರಿ, ನಾಗರಾಜ್‌, ತಿರುಮಲಚಾರಿ, ಅನಿಲ್‌ಕುಮಾರ್‌, ವೆಂಕಟರಾಮಾಚಾರಿ, ನವೀನ್‌, ಮಾರುತಿರಾಜ್‌, ಹರೀಶ್‌, ನರೇಶ್‌, ಎಸ್‌. ವೆಂಕಟೇಶ್‌, ರಾಘವೇಂದ್ರಾಚಾರಿ ಇದ್ದರು.

ಟಾಪ್ ನ್ಯೂಸ್

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.