105 ಗ್ರಾಮದಲ್ಲಿ ನೀರಿಗೆ ಸಮಸ್ಯೆ
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಡೀಸಿ ಜೆ.ಮಂಜುನಾಥ್
Team Udayavani, Jun 19, 2019, 12:07 PM IST
ಕೋಲಾರ ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಂಜುನಾಥ್ ಮಾತನಾಡಿದರು.
ಕೋಲಾರ: ಜಿಲ್ಲೆಯ 105 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಪೈಕಿ 45 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಹಾಗೂ 60 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ ಎಂದು ಜಿಲ್ಲಾಧಿಕಾರಿ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಟ್ಯಾಂಕರ್ ಬಿಲ್ಗಳನ್ನು ಸಕಾಲದಲ್ಲಿ ಸಲ್ಲಿಸಿ, ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರದಂತೆ ಜಾಗೃತಿಯನ್ನು ವಹಿಸಬೇಕು ಎಂದು ಸೂಚಿಸಿದರು.
ಮೇವಿನ ಸಮಸ್ಯೆ ಇಲ್ಲ: ಇತ್ತೀಚೆಗೆ ಮಳೆಯಾಗಿದ್ದು ಜಾನುವಾರುಗಳಿಗೆ ಒಂದಷ್ಟು ಮೇವು ಲಭ್ಯವಾಗುವಂತಾಗಿದೆ. ಮೇವಿನ ಸಮಸ್ಯೆ ಎದುರಾಗಬಾರದೆಂದು ಮಿನಿಕಿಟ್ಗಳನ್ನು ವಿತರಿಸಲಾಗುತ್ತಿತ್ತು. ಅದರಂತೆ ಮೇವಿನ ಸಂಸ್ಕರಿಸಿ ಇಡಲಾಗಿತ್ತು. ಇನ್ನೂ 13 ವಾರಕ್ಕೆ ಆಗುವಷ್ಟು ಮೇವಿನ ಲಭ್ಯತೆ ಇದೆ. ಹಾಗಾಗಿ ಯಾವುದೇ ರೀತಿಯ ಮೇವಿನ ಸಮಸ್ಯೆ ಇಲ್ಲವೆಂದು ಹೇಳಿದರು.
ಉದ್ಯೋಗ ಕೊಡಿಸಿ: ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಮೂಲಕ ಯುವ ಜನತೆಗೆ ತರಬೇತಿಯನ್ನು ನೀಡಲಾಗುತ್ತಿದೆ. ತರಬೇತಿ ಪಡೆದುಕೊಂಡವರಿಗೆ ಉದ್ಯೋಗಗಳನ್ನು ಕೊಡಿಸುವ ಕೆಲಸವನ್ನೂ ಆಯಾ ಸಂಸ್ಥೆಗಳು ಮಾಡಬೇಕಾಗಿದ್ದು ಇದನ್ನು ಸೂಕ್ತವಾಗಿ ಮಾಡಲಾಗುತ್ತಿದೆಯೇ ಎಂಬ ಕುರಿತು ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಖಲೆ ಸ್ವೀಕರಿಸಿ: ರೈತರ ಹಿತದೃಷ್ಟಿಯನ್ನು ಮನಗಂಡು ಸರ್ಕಾರ ಸಾಲಮನ್ನಾ ಮಾಡಲಾಗಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಬಹುತೇಕ ರೈತರ ಸಾಲಮನ್ನಾ ಆಗಿದೆ. ಕೆಲವು ರೈತರ ಸಾಲಮನ್ನಾ ಮಾಡಲು ಅವರು ಪಡಿತರ ಚೀಟಿ ಮತ್ತು ಆಧಾರ್ ನೀಡಿರುವುದಿಲ್ಲ. ಹಾಗಾಗಿ ಬಾಕಿ ಇರುವ ರೈತರ ಸಾಲಮನ್ನಾವನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯ ಪಡೆದುಕೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ನೋಂದಣಿ ಮಾಡಿಸಿ: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಯಿಸಲು ಕಾರ್ಯಾದೇಶ ನೀಡಲಾಗಿದೆ. ಇನ್ನೂ ಕೆಲಸ ಮಾಡದೆ ಇರುವವರಿಗೆ ನೋಟಿಸ್ ನೀಡಿ, ಸಕಾಲ ಯೋಜನೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ನೋಂದಣಿ ಬಗ್ಗೆ ಎಲ್ಲಾ ರೈತರಿಗೆ ಮಾಹಿತಿಯನ್ನು ನೀಡಿ ನೋಂದಣಿ ಮಾಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು ಇಲಾಖಾವಾರು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಯೋಗ ದಿನಾಚರಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್