ನಗರದಲ್ಲಿ ಹೆಜ್ಜೆ ಇಟ್ಟಲ್ಲೆಲ್ಲಾ ಸಮಸ್ಯೆಗಳೇ


Team Udayavani, Sep 18, 2019, 12:33 PM IST

kolar-tdy-1

ನಗರದಲ್ಲಿ ಮಂಗಳವಾರ ಮುಂಜಾನೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ನಗರ ಸಂಚಾರ ನಡೆಸುವ ಮೂಲಕ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.

ಕೋಲಾರ: ರಸ್ತೆ ತುಂಬ ಗುಂಡಿ, ಬದಿಯಲ್ಲಿ ಕಸದ ರಾಶಿ, ಅದಕ್ಕೆ ಬೆಂಕಿ ಇಟ್ಟು ಬೂದಿ ಮಾಡಿರುವುದು, ಅಮೃತ ಯೋಜನೆಯ ಕಳಪೆ ಕಾಮಗಾರಿ, ಯುಜಿಡಿ ಅವ್ಯವಸ್ಥೆ ಹೀಗೆ.. ಹೆಜ್ಜೆ ಇಟ್ಟಲೆಲ್ಲಾ ಸಮಸ್ಯೆಗಳೇ, ಸಾರ್ವಜನಿಕರಿಂದ ದೂರುಗಳ ಸುರಿಮಳೆ…ಇವು ಮಂಗಳವಾರ ಮುಂಜಾನೆ ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರ ಅನುಭವಕ್ಕೆ ಬಂದ ವಿಚಾರಗಳು.

ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಮಂಗಳವಾರ ಮುಂಜಾನೆ ದಿಢೀರ್‌ ಎಂದು ಏಕಾಂಗಿಯಾಗಿ ನಗರದಲ್ಲಿ ಸಂಚಾರ ಆರಂಭಿಸಿ ಸಮಸ್ಯೆಗಳ ಖದ್ದು ಪರಿಶೀಲನೆ ನಡೆಸಲು ಮುಂದಾದರು. ಜಿಲ್ಲಾಧಿಕಾರಿ ಹೀಗೆ ನಗರ ಸಂಚಾರ ನಡೆಸುತ್ತಿರುವುದು ತಿಳಿಯುತ್ತಿದ್ದಂತೆಯೇ ನಗರಸಭೆ, ಕೆಯುಡಬ್ಲ್ಯೂ ಎಸ್‌ ಮತ್ತು ಅಮೃತ ಯೋಜನೆಯ ಅಧಿಕಾರಿಗಳು ಅವರ ಜೊತೆ ಸೇರಿಕೊಂಡರು.

ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ: ಮನೆಯಿಂದ ಮೆಕ್ಕೆ ವೃತ್ತ ಹಳೇ ಬಸ್‌ ನಿಲ್ದಾಣ, ಸರ್ವಜ್ಞ ಉದ್ಯಾನ, ಕಾಳಮ್ಮ ಗುಡಿ ರಸ್ತೆ, ಹೊಸ ಬಸ್‌ ನಿಲ್ದಾಣ ವೃತ್ತ, ಬೋವಿ ಕಾಲೋನಿ, ಹವೇಲಿ ಮೊಹಲ್ಲಾ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ ರಸ್ತೆ, ಮತ್ತೆ ಹಳೇ ಬಸ್‌ ನಿಲ್ದಾಣಕ್ಕೆ ಎರಡು ಗಂಟೆ ಕಾಲ ಸಂಚರಿಸಿ, ಅಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ಸೇವಿಸಿ ಸಂಚಾರದುದ್ದಕ್ಕೂ ಸಾರ್ವಜನಿಕರಿಂದ ಅಹವಾಲು ಆಲಿಸಿದರು.

ಸಮಸ್ಯೆಗಳ ಆಲಿಕೆ: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳು, ಅಮೃತ ಯೋಜನೆಯ ಒಳಚರಂಡಿ ಮಂಡಳಿ ಕಾಮಗಾರಿ, ನಗರೋತ್ಥಾನ, ಅಮೃತ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ಪ್ರಮುಖವಾಗಿ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾರ್ಗದುದ್ದಕ್ಕೂ ಸಾರ್ವಜನಿಕರಿಂದ ಕುಡಿಯುವ ನೀರು, ಸ್ವಚ್ಛತೆ, ಕಸ ವಿಲೇವಾರಿ ಮತ್ತಿತರ ವಿಷಯಗಳ ಕುರಿತಂತೆ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದರು.

ಕಸ ವಿಲೇವಾರಿ ಮಾಡಿ: ಸರ್ವಜ್ಞ ಉದ್ಯಾನದಲ್ಲಿನ ಅವ್ಯವಸ್ಥೆ, ಅಲ್ಲಿ ನಿರ್ಮಾಣವಾಗುತ್ತಿರುವ ಬೃಹತ್‌ ಟ್ಯಾಂಕ್‌ ಕಾಮಗಾರಿ ಪರಿಶೀಲಿಸಿ, ರಸ್ತೆ ಬದಿ, ಪಾರ್ಕ್‌ ನ ಸುತ್ತಮುತ್ತಲೂ ಸುರಿದಿದ್ದ ಕಸದ ರಾಶಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಮೃತ ಯೋಜನೆಯಡಿ ಪಾರ್ಕ್‌ನಲ್ಲಿ ಅಳವಡಿಸಿರುವ ಕ್ರೀಡಾ ಮತ್ತು ಕುಳಿತುಕೊಳ್ಳುವ ಸಾಧನಗಳು ಕಳಪೆಯಾಗಿ, ಕಿತ್ತು ಹೋಗಿರುವುದನ್ನು ಗಮನಿಸಿ ಕೂಡಲೇ ಬದಲಾಯಿಸುವಂತೆ ಸೂಚಿಸಿದರು.

ಎರಡು ಗಂಟೆಗಳ ಕಾಲ ನಗರವನ್ನು ಸುತ್ತಾಡಿದ ನಂತರ ಹಳೇ ಬಸ್‌ ನಿಲ್ದಾಣದ ಇಂದಿರಾ ಕ್ಯಾಂಟೀನ್‌ಗೆ ಆಗಮಿಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಖುದ್ದು ಸಾಲಿನಲ್ಲಿ ನಿಂತು ಟೋಕನ್‌ ಖರೀದಿಸಿ ಇಡ್ಲಿ ಪಡೆದುಕೊಂಡು ಅಲ್ಲಿಯೇ ಸೇವಿಸಿ ರುಚಿಯ ತಪಾಸಣೆ ನಡೆಸಿದರು.

ಮಂಗಳವಾರ ಮುಂಜಾನೆ ನಗರದಲ್ಲಿ ಸುತ್ತಾಡಿದ ನಂತರ ಜಿಲ್ಲಾಧಿಕಾರಿ ತಾವು ಗಮನಿಸಿದ, ಸಾರ್ವಜನಿಕರಿಂದ ಆಲಿಸಿದ ಅಹವಾಲುಗಳನ್ನು ಪರಿಹರಿಸುವ ಸಲುವಾಗಿ ಅಧಿಕಾರಿಗಳ ಸಭೆ ಕರೆದು ಪರಿಶೀಲಿಸುವುದಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಯೋಜನಾಧಿಕಾರಿ ರಂಗಸ್ವಾಮಿ, ನಗರಸಭೆ ಸಮುದಾಯ ಸಂಘಟನಾಧಿಕಾರಿ ಶಿವಪ್ರಕಾಶ್‌, ಕೆಯುಡಬ್ಲ್ಯುಎಸ್‌ ಮತ್ತು ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.