ನಗರದಲ್ಲಿ ಹೆಜ್ಜೆ ಇಟ್ಟಲ್ಲೆಲ್ಲಾ ಸಮಸ್ಯೆಗಳೇ


Team Udayavani, Sep 18, 2019, 12:33 PM IST

kolar-tdy-1

ನಗರದಲ್ಲಿ ಮಂಗಳವಾರ ಮುಂಜಾನೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ನಗರ ಸಂಚಾರ ನಡೆಸುವ ಮೂಲಕ ಸಮಸ್ಯೆಗಳನ್ನು ಖುದ್ದು ಪರಿಶೀಲಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.

ಕೋಲಾರ: ರಸ್ತೆ ತುಂಬ ಗುಂಡಿ, ಬದಿಯಲ್ಲಿ ಕಸದ ರಾಶಿ, ಅದಕ್ಕೆ ಬೆಂಕಿ ಇಟ್ಟು ಬೂದಿ ಮಾಡಿರುವುದು, ಅಮೃತ ಯೋಜನೆಯ ಕಳಪೆ ಕಾಮಗಾರಿ, ಯುಜಿಡಿ ಅವ್ಯವಸ್ಥೆ ಹೀಗೆ.. ಹೆಜ್ಜೆ ಇಟ್ಟಲೆಲ್ಲಾ ಸಮಸ್ಯೆಗಳೇ, ಸಾರ್ವಜನಿಕರಿಂದ ದೂರುಗಳ ಸುರಿಮಳೆ…ಇವು ಮಂಗಳವಾರ ಮುಂಜಾನೆ ನಗರ ಸಂಚಾರ ನಡೆಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ರ ಅನುಭವಕ್ಕೆ ಬಂದ ವಿಚಾರಗಳು.

ನಗರಸಭೆ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಮಂಗಳವಾರ ಮುಂಜಾನೆ ದಿಢೀರ್‌ ಎಂದು ಏಕಾಂಗಿಯಾಗಿ ನಗರದಲ್ಲಿ ಸಂಚಾರ ಆರಂಭಿಸಿ ಸಮಸ್ಯೆಗಳ ಖದ್ದು ಪರಿಶೀಲನೆ ನಡೆಸಲು ಮುಂದಾದರು. ಜಿಲ್ಲಾಧಿಕಾರಿ ಹೀಗೆ ನಗರ ಸಂಚಾರ ನಡೆಸುತ್ತಿರುವುದು ತಿಳಿಯುತ್ತಿದ್ದಂತೆಯೇ ನಗರಸಭೆ, ಕೆಯುಡಬ್ಲ್ಯೂ ಎಸ್‌ ಮತ್ತು ಅಮೃತ ಯೋಜನೆಯ ಅಧಿಕಾರಿಗಳು ಅವರ ಜೊತೆ ಸೇರಿಕೊಂಡರು.

ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ: ಮನೆಯಿಂದ ಮೆಕ್ಕೆ ವೃತ್ತ ಹಳೇ ಬಸ್‌ ನಿಲ್ದಾಣ, ಸರ್ವಜ್ಞ ಉದ್ಯಾನ, ಕಾಳಮ್ಮ ಗುಡಿ ರಸ್ತೆ, ಹೊಸ ಬಸ್‌ ನಿಲ್ದಾಣ ವೃತ್ತ, ಬೋವಿ ಕಾಲೋನಿ, ಹವೇಲಿ ಮೊಹಲ್ಲಾ, ಎಂ.ಬಿ.ರಸ್ತೆ, ಅಮ್ಮವಾರಿಪೇಟೆ ರಸ್ತೆ, ಮತ್ತೆ ಹಳೇ ಬಸ್‌ ನಿಲ್ದಾಣಕ್ಕೆ ಎರಡು ಗಂಟೆ ಕಾಲ ಸಂಚರಿಸಿ, ಅಲ್ಲಿನ ಇಂದಿರಾ ಕ್ಯಾಂಟೀನ್‌ನಲ್ಲಿ ತಿಂಡಿ ಸೇವಿಸಿ ಸಂಚಾರದುದ್ದಕ್ಕೂ ಸಾರ್ವಜನಿಕರಿಂದ ಅಹವಾಲು ಆಲಿಸಿದರು.

ಸಮಸ್ಯೆಗಳ ಆಲಿಕೆ: ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯಿಂದ ನಡೆಯುತ್ತಿರುವ ಕಾಮಗಾರಿಗಳು, ಅಮೃತ ಯೋಜನೆಯ ಒಳಚರಂಡಿ ಮಂಡಳಿ ಕಾಮಗಾರಿ, ನಗರೋತ್ಥಾನ, ಅಮೃತ ಯೋಜನೆಯ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳು ಪ್ರಮುಖವಾಗಿ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾರ್ಗದುದ್ದಕ್ಕೂ ಸಾರ್ವಜನಿಕರಿಂದ ಕುಡಿಯುವ ನೀರು, ಸ್ವಚ್ಛತೆ, ಕಸ ವಿಲೇವಾರಿ ಮತ್ತಿತರ ವಿಷಯಗಳ ಕುರಿತಂತೆ ಅಹವಾಲುಗಳನ್ನು ಸಮಾಧಾನದಿಂದ ಆಲಿಸಿದರು.

ಕಸ ವಿಲೇವಾರಿ ಮಾಡಿ: ಸರ್ವಜ್ಞ ಉದ್ಯಾನದಲ್ಲಿನ ಅವ್ಯವಸ್ಥೆ, ಅಲ್ಲಿ ನಿರ್ಮಾಣವಾಗುತ್ತಿರುವ ಬೃಹತ್‌ ಟ್ಯಾಂಕ್‌ ಕಾಮಗಾರಿ ಪರಿಶೀಲಿಸಿ, ರಸ್ತೆ ಬದಿ, ಪಾರ್ಕ್‌ ನ ಸುತ್ತಮುತ್ತಲೂ ಸುರಿದಿದ್ದ ಕಸದ ರಾಶಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಮೃತ ಯೋಜನೆಯಡಿ ಪಾರ್ಕ್‌ನಲ್ಲಿ ಅಳವಡಿಸಿರುವ ಕ್ರೀಡಾ ಮತ್ತು ಕುಳಿತುಕೊಳ್ಳುವ ಸಾಧನಗಳು ಕಳಪೆಯಾಗಿ, ಕಿತ್ತು ಹೋಗಿರುವುದನ್ನು ಗಮನಿಸಿ ಕೂಡಲೇ ಬದಲಾಯಿಸುವಂತೆ ಸೂಚಿಸಿದರು.

ಎರಡು ಗಂಟೆಗಳ ಕಾಲ ನಗರವನ್ನು ಸುತ್ತಾಡಿದ ನಂತರ ಹಳೇ ಬಸ್‌ ನಿಲ್ದಾಣದ ಇಂದಿರಾ ಕ್ಯಾಂಟೀನ್‌ಗೆ ಆಗಮಿಸಿದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಖುದ್ದು ಸಾಲಿನಲ್ಲಿ ನಿಂತು ಟೋಕನ್‌ ಖರೀದಿಸಿ ಇಡ್ಲಿ ಪಡೆದುಕೊಂಡು ಅಲ್ಲಿಯೇ ಸೇವಿಸಿ ರುಚಿಯ ತಪಾಸಣೆ ನಡೆಸಿದರು.

ಮಂಗಳವಾರ ಮುಂಜಾನೆ ನಗರದಲ್ಲಿ ಸುತ್ತಾಡಿದ ನಂತರ ಜಿಲ್ಲಾಧಿಕಾರಿ ತಾವು ಗಮನಿಸಿದ, ಸಾರ್ವಜನಿಕರಿಂದ ಆಲಿಸಿದ ಅಹವಾಲುಗಳನ್ನು ಪರಿಹರಿಸುವ ಸಲುವಾಗಿ ಅಧಿಕಾರಿಗಳ ಸಭೆ ಕರೆದು ಪರಿಶೀಲಿಸುವುದಾಗಿ ವಿವರಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಯೋಜನಾಧಿಕಾರಿ ರಂಗಸ್ವಾಮಿ, ನಗರಸಭೆ ಸಮುದಾಯ ಸಂಘಟನಾಧಿಕಾರಿ ಶಿವಪ್ರಕಾಶ್‌, ಕೆಯುಡಬ್ಲ್ಯುಎಸ್‌ ಮತ್ತು ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.