ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?


Team Udayavani, May 29, 2023, 3:07 PM IST

ಮಂತ್ರಿಗಿರಿ ಸಿಗದ ಜಿಲ್ಲೆಗೆ ಉಸ್ತುವಾರಿ ಯಾರು?

ಕೋಲಾರ: ಮಂತ್ರಿಸ್ಥಾನ ಸಿಗದ ಕೋಲಾರ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆಯನ್ನು ಯಾರಿಗೆ ನೀಡುತ್ತಾರೆ ಎನ್ನುವುದು ಸದ್ಯದ ಕುತೂಹಲವಾಗಿದೆ. ಸಿದ್ದರಾಮಯ್ಯ ನೇತೃತ್ವದ ಎರಡನೇ ಅವಧಿಯ ಕಾಂಗ್ರೆಸ್‌ ಸರ್ಕಾರದಲ್ಲಿ ಬಹುತೇಕ ಮಂತ್ರಿಸ್ಥಾನಗಳು ಭರ್ತಿಯಾಗಿವೆ. ಆದರೆ, ಈ ಬಾರಿಯೂ ಕೋಲಾರ ಜಿಲ್ಲೆಯ ನಾಲ್ವರು ಕಾಂಗ್ರೆಸ್‌ ಶಾಸಕರ ಪೈಕಿ ಯಾರಿಗೂ ಮಂತ್ರಿಯಾಗುವ ಸೌಭಾಗ್ಯ ಸಿಕ್ಕಿಲ್ಲ.

ಇದೀಗ ರಾಜ್ಯದಲ್ಲಿರುವ 34 ಮಂತ್ರಿಗಳಲ್ಲಿ ಯಾರು ಕೋಲಾರ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ಸಿಗುತ್ತದೆ ಎನ್ನುವುದು ಲೆಕ್ಕಾಚಾರ ಆರಂಭವಾಗಿದೆ.

ಕೋಲಾರ ಜಿಲ್ಲೆಗೆ ಸತತ ಅನ್ಯಾಯ: ಬೆಂಗಳೂರು ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಅತಿ ಹತ್ತಿರವಿರುವ ಗಡಿ ಜಿಲ್ಲೆ ಕೋಲಾರವನ್ನು ಯಾವುದೇ ಸರ್ಕಾರ ಬಂದರೂ ಕಡೆಗಣಿಸುತ್ತಲೇ ಇವೆ. ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿ ಯಾವುದೇ ಸರ್ಕಾರ ಬಜೆಟ್‌ ಮಂಡಿಸಿದಾಗಲೂ ಕೋಲಾರ ಜಿಲ್ಲೆಯ ಪ್ರಸ್ತಾಪವಿರುವುದಿಲ್ಲ. ಕೋಲಾರಜಿಲ್ಲೆಗೆ ಮಂತ್ರಿ ಮಾಡದೆ ತಿಂಗಳುಗಳನ್ನೇ ಕಳೆಯಲಾಗುತ್ತದೆ. ಸರ್ಕಾರಗಳ ಈ ನಿರ್ಲಕ್ಷ್ಯವನ್ನು ಕೋಲಾರ ಜಿಲ್ಲೆಯ ಜನರು ಗಂಭೀರವಾಗಿಯೇ ಗಮನಿಸುತ್ತಲೂ ಇದ್ದಾರೆ. ಇದೇ ಕಾರಣಕ್ಕಾಗಿಯೇ ಹೊರಗಿನವರಾದರೂ ಸಿದ್ದರಾಮಯ್ಯರನ್ನೇ ಕೋಲಾರದಿಂದ ಆಯ್ಕೆ ಮಾಡಿ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಲು ಕೋಲಾರ ವಿಧಾನಸಭಾ ಕ್ಷೇತ್ರದ ಜನ ನಿರ್ಧರಿಸಿದ್ದರು. ಆದರೆ, ರಾಜಕೀಯ ಕಾರಣಗಳಿಂದಾಗಿ ಇದುಸಾಧ್ಯವಾಗಲಿಲ್ಲ. ಈಗ 135 ಸ್ಥಾನಗಳ ಭರ್ಜರಿ ಬಹುಮತದಲ್ಲಿ ಆರರ ಪೈಕಿ ನಾಲ್ವರು ಶಾಸಕರನ್ನು ಗೆಲ್ಲಿಸಿಕೊಟ್ಟರೂ, ಕಾಂಗ್ರೆಸ್‌ ಸರ್ಕಾರದಲ್ಲಿ ಮಂತ್ರಿಯಾಗುವ ಅವಕಾಶ ಕೋಲಾರ ಜಿಲ್ಲೆಯ ಯಾರಿಗೂ ಸಿಕ್ಕಿಲ್ಲದಿರುವುದು ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಪಕ್ಷದಲ್ಲಿನ ಗುಂಪುಗಾರಿಕೆ ಕಾರಣ: ಕೋಲಾರ ಜಿಲ್ಲೆಯನ್ನು ಸದ್ಯದ ಮಂತ್ರಿಮಂಡಲದಲ್ಲಿ ಕಡೆಗಣಿಸಲ್ಪಡಲು ಕೋಲಾರ ಜಿಲ್ಲೆಯ ಕಾಂಗ್ರೆಸ್‌ ಪಕ್ಷದಲ್ಲಿರುವ ಗುಂಪುಗಾರಿಕೆ ಕಾರಣ ಎನ್ನಲಾಗುತ್ತಿದೆ. ಕೋಲಾರ ಜಿಲ್ಲೆಯಲ್ಲಿ ರಮೇಶ್‌ಕುಮಾರ್‌ ಮತ್ತು ಕೆ.ಎಚ್‌.ಮುನಿಯಪ್ಪ ನಡುವಿನ ಗುಂಪುಗಳ ಭಿನ್ನಮತ ನಿರಂತರವಾಗಿ ನಡೆಯುತ್ತಿದೆ. ಯಾವುದೇ ಚುನಾವಣೆ ಎದುರಾದರೂ ಕಾಂಗ್ರೆಸ್ಸಿಗರು ವಿರೋಧಿಗಳಾದ ಜೆಡಿಎಸ್‌, ಬಿಜೆಪಿಯನ್ನು ಎದುರಿಸುವುದಕ್ಕಿಂತಲೂ ಮುಂಚಿತವಾಗಿ ತಮ್ಮದೇ ಪಕ್ಷದ ಒಂದು ಗುಂಪನ್ನು ಜಯಿಸಿ ಟಿಕೆಟ್‌ ಗಿಟ್ಟಿಸಿಕೊಳ್ಳಬೇಕು. ಗೆಲ್ಲಬೇಕು ಎಂಬಂತ ಪರಿಸ್ಥಿತಿ ಇತ್ತೀಚಿನ ಎಲ್ಲಾ ಚುನಾವಣೆಗಳಲ್ಲಿ ನಡೆದು ಬಂದಿದೆ.

ಮುಖಂಡರಲ್ಲಿ ಹೊಂದಾಣಿಕೆ ಕೊರತೆ: ಇದೀಗ ಕೋಲಾರ ಜಿಲ್ಲೆಯಲ್ಲಿ ಮೂರು ಬಾರಿ, ಎರಡು ಬಾರಿ ಗೆದ್ದವರು, ಹಿರಿಯಶಾಸಕ, ಮಹಿಳಾ ಶಾಸಕಿ, ಅಲೆಮಾರಿ ಜನಾಂಗದ ಶಾಸಕ ಹೀಗೆ ಆಯ್ಕೆ ಮಾಡಿಕೊಳ್ಳಲು ಅನೇಕ ಆಯ್ಕೆಗಳಿದ್ದರೂ, ಯಾರನ್ನು ಆಯ್ಕೆ ಮಾಡಿಕೊಳ್ಳದಿರಲು ಕಾಂಗ್ರೆಸ್‌ ಪಕ್ಷದಲ್ಲಿ ಮುಖಂಡರ ನಡುವೆ ಇರುವ ಪರಸ್ಪರ ಕಾಲೆಳೆದುಕೊಳ್ಳುವ ಗುಣವೇ ಕಾರಣ ಎನ್ನಲಾಗುತ್ತಿದೆ. ಗುಂಪುಗಾರಿಕೆಯ ಲಾಭವನ್ನು ಪಡೆದುಕೊಂಡಿರುವ ಕಾಂಗ್ರೆಸ್‌ ಹೈಕಮಾಂಡ್‌ ಕೋಲಾರ ಜಿಲ್ಲೆಯ ಯಾರನ್ನು ಆಯ್ಕೆ ಮಾಡಿಕೊಳ್ಳದೆ ಕಡೆಗಣಿಸುವ ಮೂಲಕ ಎರಡೂ ಗುಂಪುಗಳಿಗೆ ತಾವು ಮಂತ್ರಿಯಾ ಗಲಿಲ್ಲ ಎಂಬ ಅಸಮಾಧಾನಕ್ಕಿಂತಲೂ ಯಾರೂ ಆಗಿಲ್ಲವಲ್ಲ ಎಂಬ ಸಮಾಧಾನ ಮೂಡಿಸಿಬಿಟ್ಟಿದೆ.

ಉಸ್ತುವಾರಿ ಹೊಣೆ ಯಾರಿಗೆ?: ಮಂತ್ರಿ ಮಂಡಲದಲ್ಲಂತು ಸ್ಥಾನ ಸಿಗಲಿಲ್ಲ. ಇದೀಗ ಕೋಲಾರ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆಯನ್ನು ಯಾರು ಹೊತ್ತುಕೊಳ್ಳುತ್ತಾರೆ ಎನ್ನುವುದು ಸದ್ಯದ ಕುತೂಹಲಕ್ಕೆ ಕಾರಣವಾಗಿದೆ. ಕೋಲಾರ ಮೂಲದ ಕೆ.ಎಚ್‌.ಮುನಿಯಪ್ಪ ಹಾಗೂ ಕೃಷ್ಣಬೈರೇಗೌಡ ಉಸ್ತುವಾರಿ ಹೊಣೆ ಹೊತ್ತುಕೊಳ್ಳುವ ನೆಚ್ಚಿನ ಮಂತ್ರಿಗಳಾಗಿದ್ದಾರೆ. ಆದರೆ,ಕೆ.ಎಚ್‌.ಮುನಿಯಪ್ಪರ ಆಯ್ಕೆಗೆ ರಮೇಶ್‌ ಕುಮಾರ್‌ ಬಣ ಒಪ್ಪಿಗೆ ನೀಡುವುದು ಅನುಮಾನವೇ. ಆದರೂ, ಕೆ.ಎಚ್‌.ಮುನಿಯಪ್ಪ ಬೆಂಬಲಿಗರು ಈಗಾಗಲೇ ಕೋಲಾರದ ಉಸ್ತುವಾರಿ ಹೊಣೆಗಾರಿಕೆಯನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹಾಗೆಯೇ ಕೋಲಾರದವರಾದರೂ ಕೋಲಾರ ಗುಂಪುಗಾರಿಕೆ ರಾಜಕೀಯದಿಂದ ದೂರವೇ ಉಳಿದಿರುವ ಕೃಷ್ಣಬೈರೇಗೌಡ ಕೋಲಾರದ ಉಸ್ತುವಾರಿ ಹೊತ್ತುಕೊಳ್ಳುತ್ತಾರೆ ಎಂದು ಖಚಿತವಾಗಿ ನಿರೀಕ್ಷಿಸಲು ಸಾಧ್ಯವಿಲ್ಲ. ಏಕೆಂದರೆ ಹಿಂದೊಮ್ಮೆ ಇಂತದ್ದೇ ಅವಕಾಶ ಬಂದಾಗ ಕೃಷ್ಣಬೈರೇಗೌಡರು ನಿರಾಕರಿಸಿ ಬೆಂಗಳೂರಿಗೆ ಸೀಮಿತರಾಗಿದ್ದರು.

ಇಬ್ಬರಲ್ಲಿ ಒಬ್ಬರಿಗೆಅಥವಾ ಮೂರನೇ ಮಂತ್ರಿಗೆ : ಕೋಲಾರ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆಯು ಗುಂಪುಗಾರಿಕೆ ರಾಜಕೀಯದ ನಡುವೆಯೂ ಸಿಗುಂತಾದರೆ ಕೆ.ಎಚ್‌.ಮುನಿಯಪ್ಪ ಅಥವಾ ಕೃಷ್ಣಬೈರೇಗೌಡ ಇಬ್ಬರಲ್ಲಿ ಒಬ್ಬರಿಗೆ ಸಿಗಬೇಕಾಗುತ್ತದೆ. ಆದರೆ, ಗುಂಪುಗಾರಿಕೆಯ ಒತ್ತಡ ಹೆಚ್ಚಾದಾಗ ಮಂತ್ರಿ ಭಾಗ್ಯ ಇಲ್ಲದಂತೆ ಮಾಡಿದ ಕಾಂಗ್ರೆಸ್‌ ಹಿರಿಯ ಮುಖಂಡರು ಕೋಲಾರ ಮೂಲದ ಈ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಆಯ್ಕೆ ಮಾಡುವ ಅವಕಾಶ ಇದ್ದೇ ಇರುತ್ತದೆ. ಈ ಹಿಂದೆಯೂ ಹೀಗೆಯೇ ಯು.ಟಿ.ಖಾದರ್‌, ರಾಮಲಿಂಗಾರೆಡ್ಡಿ, ಅರವಿಂದ ಲಿಂಬಾವಳಿ, ಮುನಿರತ್ನ ಕೋಲಾರದ ಉಸ್ತುವಾರಿ ಹೊಣೆಗಾರಿಕೆಯನ್ನು ಹೊತ್ತುಕೊಂಡಿದ್ದರು.

ಒಮ್ಮತದಿಂದ ಪ್ರಯತ್ನಿಸಿದರೆ ಫ‌ಲ: ಕೋಲಾರ ಜಿಲ್ಲೆಯ ಶಾಸಕರಾಗಿದ್ದರೂ ಕಾಂಗ್ರೆಸ್‌ ಗುಂಪುಗಾರಿ ಕೆಯ ಕಾರಣದಿಂದಾಗಿ ಎಸ್‌.ಎನ್‌.ನಾರಾಯಣ ಸ್ವಾಮಿ, ರೂಪಕಲಾ, ಕೆ.ವೈ.ನಂಜೇಗೌಡ ಮತ್ತು ಕೊತ್ತೂರು ಮಂಜುನಾಥ್‌ ಮಂತ್ರಿಯಾಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಕೋಲಾರ ಮೂಲಕ ಕೆ.ಎಚ್‌.ಮುನಿಯಪ್ಪ ಅಥವಾ ಕೃಷ್ಣಬೈರೇಗೌಡರಲ್ಲಿ ಒಬ್ಬರು ಕೋಲಾರದ ಉಸ್ತುವಾರಿ ಹೊಣೆಗಾರಿಕೆ ಹೊತ್ತುಕೊಳ್ಳುವಂತೆಮಾಡಲು ಕಾಂಗ್ರೆಸ್‌ ಮುಖಂಡರು ಗುಂಪುಗಾರಿಕೆಯನ್ನು ಬಿಟ್ಟು ಒಮ್ಮತದಿಂದ ಪ್ರಯತ್ನಿಸಿದರೆ ಫ‌ಲ ಸಿಗುತ್ತದೆ. ಇಲ್ಲವಾದರೆ ಕೋಲಾರ ಜಿಲ್ಲೆಗೆ ಸಂಬಂಧ ಪಡದ ಮಂತ್ರಿ ಉಸ್ತುವಾರಿ ಹೊಣೆಗಾರಿಕೆಯನ್ನು ಹೊತ್ತುಕೊಳ್ಳುವುದು ನಿಶ್ಚಿತವಾಗುತ್ತದೆ. ರಾಜಕೀಯವಾಗಿ ಪ್ರಭಾವಿ ಮುಖಂಡರನ್ನು ಹೊಂದಿರುವ ಕೋಲಾರ ಜಿಲ್ಲೆಗೆ ಇಂತ ದುಸ್ಥಿತಿ ಬಂದಿದ್ದೇಕೆ ಎಂಬುದರ ಅವಲೋಕನ ಆಗದಿದ್ದರೆ ಈ ರೀತಿಯ ಅನ್ಯಾಯ ನಿರಂತರಎನ್ನುವ ಭಾವನೆ ಸಾರ್ವಜನಿಕರಲ್ಲಿದೆ.

ಕೋಲಾರದ ಮಂತ್ರಿಗಳು: ಸದ್ಯದ ಸಿದ್ದರಾಮಯ್ಯಸಂಪುಟದಲ್ಲಿ ಕೋಲಾರ ಜಿಲ್ಲೆಯ ಯಾವುದೇ ಶಾಸಕರು ಮಂತ್ರಿಯಾಗಿಲ್ಲವಾದರೂ, ಕೋಲಾರ ಮೂಲದ ಇಬ್ಬರು ಶಾಸಕರಾಗಿದ್ದಾರೆ. 28 ವರ್ಷ ಕೋಲಾರ ‌ಲೋಕ ಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದ ಹಿರಿಯ ಕೆ.ಎಚ್‌.ಮುನಿಯಪ್ಪ ಹಾಗೂ ಕೋಲಾರ ಕ್ಷೇತ್ರದವರೇ ಆದ ಕೃಷ್ಣಬೈರೇಗೌಡ ಮಂತ್ರಿ ಮಂಡಲದಲ್ಲಿ ಸ್ಥಾನಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದವರೇ ಆದ ಕೆ.ವಿ.ಪ್ರಭಾಕರ ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಕಾರರಾಗಿ ಸಂಪುಟ ದರ್ಜೆ ಸ್ಥಾನಮಾನ ಗಿಟ್ಟಿಸಿಕೊಂಡಿರುವುದು ಕೊಂಚ ಸಮಾಧಾನಕ ವಿಷಯವಾಗಿದೆ.

ಬೈರೇಗೌಡ, ಆಲಂಗೂರು ಶ್ರೀನಿವಾಸ್‌, ಕೆ.ಶ್ರೀನಿವಾಸಗೌಡ, ರಮೇಶ್‌ಕುಮಾರ್‌ ನಂತರ ಕೋಲಾರ ಮೂಲದ ಯಾರಿಗೂ ಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಈ ಬಾರಿ ನಾಲ್ವರು ಶಾಸಕರಲ್ಲಿ ಯಾರಿಗಾದರೂ ಮಂತ್ರಿ ಸ್ಥಾನ ಕೊಡಲೇಬೇಕೆಂದು ಒತ್ತಾಯ ಮಾಡಿದ್ದೆವು. ಆದರೆ ಕೋಲಾರ ಜಿಲ್ಲೆಗೆ ಮಂತ್ರಿ ಸಿಗುವ ಅವಕಾಶದಲ್ಲಿ ಅನ್ಯಾಯವಾಗಿದೆ. ನಮಗೆ ಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ ಎಂಬ ಬೇಸರ ಇಲ್ಲದಿದ್ದರೂ, ಕೋಲಾರ ಜಿಲ್ಲೆಯ ಹಿತದೃಷ್ಟಿಯಿಂದ ಆಗಿರುವ ಅನ್ಯಾಯವನ್ನು ಖಂಡಿಸುತ್ತೇನೆ. – ಕೊತ್ತೂರು ಮಂಜುನಾಥ್‌, ಶಾಸಕರು, ಕೋಲಾರ.

 – ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.