ಕಾಡಾನೆ ದಾಳಿ: ನಷ್ಟ ಪರಿಹಾರಕ್ಕೆ  ಒತ್ತಾಯ


Team Udayavani, Apr 26, 2023, 4:21 PM IST

tdy-19

ಬಂಗಾರಪೇಟೆ: ಕಾಡಾನೆಗಳ ಹಾವಳಿಯಿಂದ ನಾಶವಾಗಿರುವ ಪ್ರತಿ ಎಕರೆಗೆ 10 ಲಕ್ಷ ಪರಿಹಾರ ನೀಡುವ ಜತೆಗೆ ಗಡಿಭಾಗದ ರೈತರ ಸಮಸ್ಯೆಗೆ ಸ್ಪಂದಿಸದ ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ನೊಂದ ರೈತರಿಗೆ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಕರೆ ನೀಡಿದರು.

ತಾಲೂಕಿನ ಗಡಿಭಾಗದ ಸಾಕಾರಸನಹಳ್ಳಿ ಗ್ರಾಮದಲ್ಲಿ ನೊಂದ ರೈತರ ತೋಟಗಳಿಗೆ ಭೇಟಿ ನೀಡಿ ಮಾತನಾಡಿ, ಗಡಿಭಾಗದ ರೈತರ ಸಮಸ್ಯೆಗಳಿಗೆ ಸ್ಪಂದಿಸದೆ ಮತ ಕೇಳಲು ಬರುವ, ಮೂರು ಪಕ್ಷದ ಅಭ್ಯರ್ಥಿಗಳಿಗೆ ನೊಂದ ರೈತರಿಂದ ಕಾಡಾನೆ ಲದ್ದಿ ಚಳುವಳಿ ಮಾಡುವ ಮೂಲಕ, ನ್ಯಾಯ ಪಡೆದುಕೊಳ್ಳುವ ಎಚ್ಚರಿಕೆಯನ್ನು ಅರಣ್ಯ ಅಧಿಕಾರಿಗಳಿಗೆ ನೀಡಿದರು.

ಕಾಡಾನೆ ದಾಳಿ ತಪ್ಪಿಸುವಲ್ಲಿ ಅಧಿಕಾರಿಗಳು, ಪ್ರತಿನಿಧಿಗಳು ವಿಫ‌ಲ: ಕಾಡಾನೆಗಳು ಗಡಿಭಾಗದ ಸಾಕರಸನಹಳ್ಳಿ, ದೋಣಿಮಡಗು ವ್ಯಾಪ್ತಿಯಲ್ಲಿ ಕಳೆದ ರಾತ್ರಿ ರೈತರ ತೋಟಗಳಿಗೆ ನುಗ್ಗಿ ,ಹತ್ತಾರು ವರ್ಷಗಳಿಂದ ಜೀವನ ನಿರ್ವಹಣೆಗೆ ಆಧಾರವಾಗಿದ್ದ ವೀಳ್ಯದಎಲೆ ತೋಟ ಹಾಗೂ ಟೊಮೇಟೊ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ರೈತರ ಬದುಕನ್ನು ಕಸಿಯುತ್ತಿರುವ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕೊಡುವಲ್ಲಿ ಅರಣ್ಯ ಇಲಾಖೆ ಹಾಗೂ ಜನ ಪ್ರತಿನಿಧಿಗಳು ವಿಫ‌ಲವಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.

ಪ್ರತಿ ವರ್ಷ ರೈತರ ನಿದ್ದೆಗೆಡಿಸುತ್ತಿರುವ ಕಾಡಾನೆಗಳು ಲಕ್ಷಾಂತರ ರೂ. ಬಂಡವಾಳ ಹಾಕಿ ಬೆಳೆದಂತಹ ಬೆಳೆ ಸಮೃದ್ಧವಾಗಿ ಬಂದು ಕೈಗೆ ಸಿಕ್ಕಿ ಉತ್ತಮ ಲಾಭ ಬರುವ ಸಮಯಕ್ಕೆ ಕಾಡಾನೆಗಳು ಎಲ್ಲವನ್ನು ಹಾಳು ಮಾಡಿವೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಜನ ಪ್ರತಿನಿಧಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ವಿಫ‌ಲವಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಯಾವ ಮುಖ ನೋಡಿ ಮತ ಹಾಕಬೇಕು: ರೈತ ನಾಗರಾಜ ಮಾತನಾಡಿ, ಐದು ವರ್ಷಗಳಿಂದ ನಾಪತ್ತೆಯಾಗಿರುವ ಜನಪ್ರತಿನಿಧಿಗಳು 6 ತಿಂಗಳಿಂದ ಕಾಲಕ್ಕೆ ಚಕ್ರ ಕಟ್ಟಿಕೊಂಡು ಹಳ್ಳಿಗಳಿಗೆ ರಾತ್ರಿ ಹಗಲು ಸುತ್ತಾಡಿ, ನಿಮ್ಮ ಕೈಕಾಲಿಗೆ ಬೀಳುತ್ತಿದ್ದಾರೆ. ನಿಮ್ಮ ಸಮಸ್ಯೆಗೆ ಸ್ಪಂದಿಸುತ್ತೇವೆ. ಈ ಬಾರಿ ನಮ್ಮನ್ನು ಆಶೀರ್ವಾದಿಸಿ ಎಂದು ಬೇಡಿಕೊಳ್ಳುವ ಜನಪ್ರತಿನಿಧಿ ಗಳು ಹತ್ತಾರು ವರ್ಷಗಳಿಂದ ಕಾಡಾನೆಗಳ ಹಾವಳಿಯಿಂದ ರೈತರ ಪ್ರಾಣ ಹಾಗೂ ಬೆಳೆ ನಾಶವಾಗುತ್ತಿದ್ದರೂ ಸ್ಪಂದಿಸಿಲ್ಲ. ಈಗ ರೈತರು ಯಾವ ಮುಖನೋಡಿ ಮತ ಹಾಕಬೇಕು ಎಂದು ಪ್ರಶ್ನೆ ಮಾಡಿದರು.

ನೆಪಮಾತ್ರಕ್ಕೆ ಬೆಳೆ ಪರಿಶೀಲನೆ: ರೈತ ಸೀತಬೈರಪ್ಪ ಮಾತನಾಡಿ, ಕಾಡಾನೆಗಳಿಂದ ಬೆಳೆ ನಷ್ಟವಾಗಿದೆ ಎಂದು ಸಂಬಂಧಪಟ್ಟ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದರೆ ನೆಪಮಾತ್ರಕ್ಕೆ ಬೆಳೆ ಪರಿಶೀಲನೆ ಮಾಡಿ ಪೋಟೋ ಹಿಡಿದುಕೊಂಡು ಸರ್ಕಾರಕ್ಕೆ ಕಳುಹಿಸುತ್ತೇವೆಂದು ಉಡಾಫೆ ಉತ್ತರ ನೀಡುತ್ತಾರೆ. ಕೋಟ್ಯಾಂತರ ರೂಪಾಯಿ ಜನರ ತೆರಿಗೆ ಹಣದಲ್ಲಿ ಕಾಡಾನೆಗಳ ಹಾವಳಿ ನಿಯಂತ್ರಣ ಮಾಡಲು ಅಳವಡಿಸಿರುವ ಸೋಲಾರ್‌ ತಂತಿ ಸಮರ್ಪಕವಾಗಿ ನಿರ್ವಹಣೆ ಇಲ್ಲದೆ ಹಾಳಾಗಿದ್ದು, ಅದನ್ನು ನಿರ್ವಹಣೆ ಮಾಡುವ ಕೆಲಸಗಾರರು ಇಲ್ಲದೆ ಅನಾಥವಾಗಿ ಬಿದ್ದರೂ, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಅರಣ್ಯ ಅಧಿಕಾರಿಗಳು ವಿಫ‌ಲವಾಗಿದ್ದಾರೆಂದು ಆರೋಪ ಮಾಡಿದರು.

ನಷ್ಟ ಪರಿಹಾರಕ್ಕೆ ಒತ್ತಾಯ: ರೈತ ಸಂಘದ ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ಯಾವುದೇ ಜನ ಪ್ರತಿನಿಧಿ ವ್ಯವಸಾಯ ಮಾಡಿ ಅದರ ಕಷ್ಟ ಅನುಭವಿಸಿದರೆ, ಆಗ ಗೊತ್ತಾಗುತ್ತದೆ ರೈತರ ಅನ್ನದ ಬೆಲೆ. ವ್ಯವಸಾಯದ ಗಂದ ಗಾಳಿಗೊತ್ತಿಲ್ಲದ ಜನಪ್ರತಿನಿಧಿಗಳಿಗೆ ಹಾಗೂ ಅರಣ್ಯ ಅಧಿಕಾರಿಗಳಿಗೆ ರೈತರ ಬಗ್ಗೆ ಗೌರವ ಇದ್ದರೆ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರೂ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. 24 ಗಂಟೆಯಲ್ಲಿ ಕಾಡಾನೆಗಳ ಹಾವಳಿಯಿಂದ ನಷ್ಟವಾಗಿರುವ ಪ್ರತಿ ಎಕರೆಗೆ 10 ಲಕ್ಷ ಪರಿಹಾರ ನೀಡಿ, ಹದಗೆಟ್ಟಿರುವ ಸೋಲಾರ್‌ ತಂತಿ ಸರಿಪಡಿಸಬೇಕೆಂದು ರೈತರು ಒತ್ತಾಯಿಸಿದರು.

ರೈತರ ನಿಯೋಗದಲ್ಲಿ ತಾಲೂಕು ಅಧ್ಯಕ್ಷ ಕದರಿನತ್ತ ಅಪ್ರೋಜಿರಾವ್‌, ಯಾರಂಘಟ್ಟ ಗಿರೀಶ್‌, ರಾಮಸಾಗರ ವೇಣು, ವಿಶ್ವ, ಮುನಿರಾಜು, ಮುಂತಾದವರು ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.