ಸಾರಿಗೆ ಬಸ್ ಸಂಚಾರ ಆರಂಭ: ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ
ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರಿಗೆ ಅನುಕೂಲ
Team Udayavani, May 6, 2020, 2:37 PM IST
ಸಾಂದರ್ಭಿಕ ಚಿತ್ರ
ಶ್ರೀನಿವಾಸಪುರ: ಲಾಕ್ಡೌನ್ ಸಡಿಲಗೊಂಡ ಪರಿಣಾಮ ಕೆ.ಎಸ್.ಅರ್.ಸಿ ಬಸ್ ಸಂಚಾರ ಮಂಗಳವಾರದಿಂದ ಆರಂಭವಾಗಿದ್ದು, ಸರ್ಕಾರಿ ಕಚೇರಿಗಳಲ್ಲಿನ ಕೆಲಸ ಮಾಡುವವರಿಗೆ ಅನುಕೂಲವಾಗಿದೆ. ಪಟ್ಟಣದ ಕೆಎಸ್ಅರ್ಟಿಸಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ 7ರಿಂದ 10 ಗಂಟೆಯ ತನಕ ತರಕಾರಿ ಮಾರಾಟ ಮಾಡಲು ತಾಲೂಕು ಆಡಳಿತ ಅನುಮತಿ ನೀಡಿತ್ತು. ಬಸ್ ಸಂಚಾರ ಆರಂಭವಾದ ಹಿನ್ನೆಲೆಯಲ್ಲಿ ನಿಲ್ದಾಣದ ಹಿಂದೆ ಅನುವು ಮಾಡಿಕೊಡಲಾಗಿದೆ. ಲಾಕ್ಡೌನ್ ಸಡಿಲಗೊಂಡ ಪರಿಣಾಮ ಸರ್ಕಾರಿ ನೌಕರರು ಕಚೇರಿಗಳಿಗೆ ಬರಲು 5 ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7ಕ್ಕೆ, ಸಂಜೆ 5ಕ್ಕೆ ಈ ಬಸ್ಗಳು ಸಂಚರಿಸುತ್ತವೆ. ಸರ್ಕಾರಿ ನೌಕರಿಗೆ ಮಾತ್ರವಲ್ಲದೇ ಸಾರ್ವಜನಿ ಕರಿಗೂ ಪ್ರಯಾಣ ಕಲ್ಪಿಸಲಾಗಿದ್ದರೂ ಕಡ್ಡಾಯವಾಗಿ ಕೆಲವು ನಿಯಮಗಳನ್ನು ಪಾಲಿಸಬೇಕು.
ಪ್ರಯಾಣಿಕರು ಮೊದಲು ಥರ್ಮಲ್ ಸ್ಕ್ರೀನಿಂಗ್ಗೆ ಒಳಗಾಗಬೇಕು. ನಂತರ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ರಾಜ್ಯ ರಸ್ತೆ ಸಾರಿಗೆ ಅಧಿಕಾರಿಗಳು ಪರಿಶೀಲನೆ ಮಾಡಿದ ನಂತರವೇ ಪ್ರಯಾಣಿಕ ಬಸ್ ಏರಲು ಕ್ರಮಗಳನ್ನು ಕೈಗೊಳ್ಳಲಾಗಿದೆ.
ಜಿಲ್ಲೆಯವರಿಗಾಗಿ ಮಾತ್ರ ಈ ಬಸ್ಗಳಲ್ಲಿ ಸಂಚರಿಸಲು ಅವಕಾಶವಿದ್ದು, ಅವರು ಆಧಾರ ಐಡಿ ರಿಸಬೇಕಾಗುತ್ತದೆ. ಒಟ್ಟಾರೆ ಬಸ್ ನಿಲ್ದಾಣಕ್ಕೆ ಮತ್ತೆ ಕಳೆ ಬಂದಿದ್ದು, ಕೆಎಸ್ಅರ್ಟಿಸಿ ಸಿಬ್ಬಂದಿ ಮತ್ತು ಪ್ರಯಾಣಿಕರು ಲಾಕ್ಡೌನ್ ಸಡಿಲಗೊಂಡ ಕಾರಣ ನಿಲ್ದಾಣದಲ್ಲಿ ಓಡಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ