ಮಲೇರಿಯಾ ನಿರ್ಮೂಲನೆಗೆ ಸಹಕರಿಸಿ
Team Udayavani, Apr 26, 2022, 3:21 PM IST
ಕೋಲಾರ: ದೇಶದಲ್ಲಿ ಮಲೇರಿಯಾ ರೋಗವನ್ನು 2025 ರೊಳಗಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶವನ್ನು ಹೊಂದಲಾಗಿದ್ದು ಅದಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಕೈ ಜೋಡಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎ.ವಿ. ನಾರಾಯಣಸ್ವಾಮಿ ಸಲಹೆ ನೀಡಿದರು.
ಸೋಮವಾರ ನಗರದ ದರ್ಗಾಮೊಹಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. “ನವೀನ ವಿಧಾನವನ್ನು ಬಳಸೋಣ-ಮಲೇರಿಯಾ ಕಡಿಮೆ ಮಾಡಿ ಜೀವ ಉಳಿಸೋಣ’ ಎಂಬ ಈ ವರ್ಷದ ಘೋಷಣೆಯೊಂದಿಗೆ ಮಲೇರಿಯಾ ಹರಡುವಿಕೆ ಹಾಗೂ ಅದರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಆರೋಗ್ಯ ಕಾರ್ಯಕರ್ತೆಯರು ಜನತೆಗೆ ಅರಿವು ಮೂಡಿಸುವ ಕೆಲಸ ಮಾಡಿ ಎಂದು ಕೋರಿದರು.
ಸೊಳ್ಳೆಗಳಿಂದ ಮಲೇರಿಯಾ, ಡೆಂಗ್ಯು, ಚಿಕನ್ಗುನ್ಯಾ, ಮೆದುಳು ಜ್ವರ ಬರುತ್ತದೆ, ಕಳೆದ ವರ್ಷ ಜಿಲ್ಲೆಯಲ್ಲಿ 15787 ರಕ್ತ ಲೇಪನ ಪರೀಕ್ಷೆಗೆ ಒಳಪಡಿಸಿದಾಗ ತಾಲೂಕಿನಲ್ಲಿ ಕೇವಲ 3 ಮಲೇರಿಯಾ ಪ್ರಕರಣ ಕಂಡು ಬಂದಿತ್ತು ಎಂದ ಅವರು, ಈ ಸಾಲಿನಲ್ಲಿ ಕಳೆದ ಜನವರಿಯಿಂದ ಈವರೆಗೂ 15787 ರಕ್ತ ಲೇಪನ ಪರೀಕ್ಷೆಗೆ ಒಳಪಡಿಸಿದ್ದು, ಒಂದೂ ಪ್ರಕರಣ ಕಂಡು ಬಂದಿಲ್ಲ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಸದಸ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಅಧ್ಯಕ್ಷ ಅಸ್ಲಾಂಪಾಷ, ಸೊಳ್ಳೆಗಳ ನಿಯಂತ್ರಣಕ್ಕೆ ಜನತೆ ವೈದ್ಯಾ ಕಾರಿಗಳು ಹೇಳುವ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊ ಳ್ಳುವ ಮೂಲಕ ಮಲೇರಿಯಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಕೀಟತಜ್ಞ ವೇಣುಗೋಪಾಲ್ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಮಲೇರಿಯಾ ಪ್ರಕರಣಗಳು ಈ ವರ್ಷ ವರದಿಯಾಗಿಲ್ಲ ಆದರೆ ಡೆಂಗ್ಯು 46 ಪ್ರಕರಣ ವರದಿಯಾಗಿದೆ ಎಂದು ತಿಳಿಸಿ, ಸೊಳ್ಳೆಗಳ ನಿಯಂತ್ರಣದ ಮೂಲಕ ಈ ಎಲ್ಲಾ ಸಾಂಕ್ರಾಮಿಕ ರೋಗಗಳನ್ನು ತಡೆಯಬಹುದು ಎಂದರು. ತಾಲ್ಲೂಕು ಆರೋಗ್ಯ ನಿರೀಕ್ಷಕ ಸತ್ಯನಾರಾಯಣಗೌಡ ಮಾತನಾಡಿದರು.
ಆರೋಗ್ಯ ರಕ್ಷಾ ಸಮಿತಿ ಸದಸ್ಯ ಜಿಯಾವುಲ್ಲಾ ಖಾನ್, ಆರೋಗ್ಯ ನಿರೀಕ್ಷಕ ಮಹೇಶ್, ಆಯುಷ್ ವೈದ್ಯಾಧಿಕಾರಿ ಡಾ.ರೋಹಿ ಸುಲ್ತಾನಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ