ಯರಗೋಳು ಯೋಜನೆಗೆ ಶೀಘ್ರ ಚಾಲನೆ


Team Udayavani, Dec 28, 2019, 3:37 PM IST

kolar-tdy-1

ಕೋಲಾರ: ಯರಗೋಳು ಯೋಜನೆಗೆ ಮುಂದಿನ 2 ತಿಂಗಳಲ್ಲಿ ಚಾಲನೆ ಸಿಗಲಿದ್ದು, ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ನಾಗೇಶ್‌ ತಿಳಿಸಿದರು.

ಶುಕ್ರವಾರ ನಗರದ ರಂಗಮಂದಿರದ ಆವರಣದಲ್ಲಿನ ಡಿವಿಜಿ ಭವನದಲ್ಲಿ ಸರ್ಕಾರದ 100 ದಿನಗಳ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾನತಾಡಿದರು. ನೂರು ದಿನಗಳ ಆಡಳಿತ ತೃಪ್ತಿಕರ: ಸರ್ಕಾರದ 100 ದಿನಗಳ ಆಡಳಿತ ತಮಗೆ ತೃಪ್ತಿ ತಂದಿದೆ. ರಾಜ್ಯದ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಉಂಟಾದ ನೆರೆ ಮತ್ತು ಉಪಚುನಾವಣೆ ನಡುವೆಯೂ ಸರ್ಕಾರ ಉತ್ತಮ ಸಾಧನೆ ಮಾಡಿದೆ. ನಗರದ ಕೋಲಾರಮ್ಮ ಕೆರೆ ಅಭಿವೃದ್ಧಿ ಕಾರ್ಯ ವೇಗದಿಂದ ಸಾಗಿದ್ದು, ಇಲಿ ಉದ್ಯಾನವನ ದೋಣಿವಿಹಾರಕ್ಕೆ ಅವಕಾಶ ಕಲ್ಪಿಸುವುದಾಗಿ ತಿಳಿಸಿದರು. ಈ ಕೆರೆಗೆ ಕೆಸಿ ವ್ಯಾಲಿ ನೀರು ಬರುವುದರಿಂದ ಅಂತರ್ಜಲ ವೃದ್ಧಿಯಾಗಿ ನೀರಿನ ಸಮಸ್ಯೆಯೂ ಕೊನೆಗೊಳ್ಳಲಿದೆ ಎಂದರು.

1,13,000 ಮನೆಗಳಿಗೆ ತಲಾ ಒಂದು ಲಕ್ಷ: ನೆರೆ ಸಂತ್ರಸ್ತರಿಗಾಗಿ ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರೂ. ನೀಡಿದೆ. ಈಗಾಗಲೇ ಮನೆ ಕಳೆದುಕೊಂಡಿರುವ 1,13,000 ಮಂದಿಗೆ ಮನೆ ನಿರ್ಮಿಸಿಸಿಕೊಳ್ಳಲು ಮೊದಲ ಕಂತಾಗಿ ತಲಾ 1 ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದರು. ಮನೆ ಶಿಥಿಲಗೊಂಡು ದುರಸ್ತಿಗೆ 50 ಸಾವಿರ ರೂ. ನೀಡಲಾಗಿದೆ. ರಸ್ತೆ, ಡ್ಯಾಂ ಮತ್ತಿತರ ಹಾನಿಗೆ ಲೋಕೋಪಯೋಗಿ ಇಲಾಖೆಯಿಂದ 750 ಕೋಟಿ ರೂ.ಗಳ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಶಾಲಾ ಕಟ್ಟಡಗಳಿಗೂ ಹಾನಿಯಾಗಿದ್ದು, ದುರಸ್ತಿ ಕಾರ್ಯ ಸಾಗಿದೆ. ಪುಸ್ತಕ ಕಳೆದುಕೊಂಡ ಮಕ್ಕಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಗಂಜಿ ಕೇಂದ್ರಗಳನ್ನು ಸ್ಥಾಪಿಸಿ ಊಟ, ಬಟ್ಟೆ ಮತ್ತಿತರ ಪರಿಕರಗಳನ್ನು ಒದಗಿಸಿದ್ದು, ಜಾನುವಾರು ಕಳೆದುಕೊಂಡವರಿಗೂ ಪರಿಹಾರ ನೀಡಲಾಗಿದೆ. ಇದಕ್ಕೆ ರಾಜ್ಯದ ಅನೇಕ ಮಂದಿ ನೆರವು ಹರಿಸಿದ್ದಾರೆ ಎಂದರು.

ನೆರೆ, ಉಪಚುನಾವಣೆಯಿಂದ ಸ್ವಲ್ಪ ನಿಧಾನಗತಿಯಲ್ಲಿದ್ದ ಆಡಳಿತಕ್ಕೆ ಚುರುಕು ನೀಡಲಾಗಿದೆ. ಸುಭೀಕ್ಷತೆಯತ್ತ ಸಾಗುತ್ತಿದ್ದು, ಕೈಗಾರಿಕೆಗಳಿಗೆ ಉತ್ತೇಜನ, ವಸತಿಯೋಜನೆಗಳಿಗೆ ಬಾಕಿಯಿದ್ದ ಹಣ ಬಿಡುಗಡೆಗೆ ಕ್ರಮ,ಕುಡಿಯುವ ನೀರಿಗೆ ಆದ್ಯತೆ, ಪರಿಶಿಷ್ಟರ ಕೊಳವೆ ಬಾವಿಗಳಿಗೆ ಸಹಾಯಧನ ಬಿಡುಗಡೆ, ಜಾನುವಾರು ಸಾಲಕ್ಕೆ ಒತ್ತು ನೀಡಲಾಗಿದೆ ಎಂದರು.

ಗೋಲಿಬಾರ್‌ ಘಟನೆ: ಪರಿಹಾರಕ್ಕೆ ತಡೆ: ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಸರ್ಕಾರ ಘೋಷಿಸಿದ್ದ ಪರಿಹಾರಕ್ಕೆ ತಡೆನೀಡಲಾಗಿದೆ, ಅನೇಕರಿಗೆ ಹೋರಾಟ ಏನಕ್ಕೆ ಮಾಡುತ್ತಿದ್ದೇವೆ ಎಂಬುದೇ ಗೊತ್ತಿರಲಿಲ್ಲ, ಕೆಲವರನ್ನು ಕೇಳಿದರೆ ಜಿಎಸ್‌ಟಿ ವಿರುದ್ಧ ಎಂದು ಹೇಳುತ್ತಿದ್ದುದನ್ನು ಉಲ್ಲೇಖೀಸಿದ ಅವರು ಇದರ ಹಿಂದೆ ಷಡ್ಯಂತರ ಇರಬಹುದು ಎಂದರು. ನಮ್ಮ ದೇಶದ ಮುಸ್ಲಿಂ ಬಾಂಧವರಿಗೆ ಸಿಎಎಯಿಂದ ಯಾವುದೇ ತೊಂದರೆ ಇಲ್ಲ ಆದರೂ ಹೋರಾಟ ಏತಕ್ಕೆ ಮಾಡಿದರೂ ಎಂದು ಗೊತ್ತಾಗುತ್ತಿಲ್ಲ ಎಂದರು. ಉಪಮುಖ್ಯಮಂತ್ರಿ ನೀಡಬೇಕೇ ಬೇಡವೇ ಎಂಬುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು, ರಮೇಶ್‌ ಜಾರಕಿಹೋಳಿ, ಶ್ರೀರಾಮಲು ಇಬ್ಬರೂ ಪಕ್ಷದ ನಾಯಕರೇ ಎಂದರು. ಡಿ.ಕೆ.ಶಿವಕುಮಾರ್‌ ಏಸು ಪ್ರತಿಮೆ ಸ್ಥಾಪನೆ ವಿವಾದದ ಕುರಿತು ಕೇಳಿದಾಗ ಅದರ ಅರಿವಿಲ್ಲವೆಂದ ಅವರು, ಅವರವರ ಆಲೋಚನೆ, ಭಕ್ತಿ ನಮಗ್ಯಾಕೆ ಎಂದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.