ಕೆ.ಸಿ. ವ್ಯಾಲಿ ಜತೆ ಯರಗೋಳ್‌, ಮೇಕೆದಾಟು ಸೇರಲಿ

ನೀರಾವರಿ ಯೋಜನೆಗಳು ಜಾರಿಯಾದ್ರೆ ಮಾತ್ರ ಜಿಲ್ಲೆಯ ಪರಂಪರೆ ಉಳಿಸಲು ಸಾಧ್ಯ: ಸಮ್ಮೇಳನಾಧ್ಯಕ್ಷ ತಮ್ಮಯ್ಯ

Team Udayavani, Jun 29, 2019, 10:43 AM IST

kolar-tdy-1..

ಮಾಲೂರು ಪಟ್ಟಣದಲ್ಲಿ ನಡೆದ 6ನೇ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಅತ್ಮೀಯವಾಗಿ ಸನ್ಮಾನಿಸಲಾಯಿತು.

ಮಾಲೂರು: ಕೆ.ಸಿ.ವ್ಯಾಲಿ ಜೊತೆಗೆ ಯರಗೋಳ್‌, ಮೇಕೆದಾಟು ಯೋಜನೆ ನೀರು ಶೀಘ್ರ ಜಿಲ್ಲೆಯ ಜನತೆಗೆ ಕೊಡುವ ಕೆಲಸವಾದಲ್ಲಿ ಮಾತ್ರ ಪಾರಂಪರಿಕವಾಗಿ ಉಳಿಯಲು ಸಾಧ್ಯವಿದೆ. ಇಲ್ಲವಾದಲ್ಲಿ ಕೋಲಾರ ಮರಳುಗಾಡು ಆಗುವ ಆತಂಕವಿದೆ ಎಂದು ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಸಾಹಿತ್ಯ ಪರಿಚಾರಕ ಎಂ.ವಿ.ತಮ್ಮಯ್ಯ ಹೇಳಿದರು.

ಪಟ್ಟಣದ ಮಾಸ್ತಿ ರಂಗಮಂದಿರದಲ್ಲಿ ನಡೆದ ಸಮ್ಮೇಳನದ ಸಭೆಯಲ್ಲಿ ತಮ್ಮ ಸರ್ವಾಧ್ಯಕ್ಷರ ಭಾಷಣದಲ್ಲಿ ತಮ್ಮ ಸುದೀರ್ಘ‌ ಅನುಭವ ಮಂಡಿಸಿದ ಅವರು, ಒಂದು ಕಾಲದಲ್ಲಿ ತರಕಾರಿ, ಹಣ್ಣು, ಹೂಗಳಿಗೆ ಹೆಸರಾಗಿದ್ದ ತಾಲೂಕಿನ ಕೃಷಿಯ ಪರಿಸ್ಥಿತಿ ಶೋಚನಿಯ ಸ್ಥಿತಿಯಲ್ಲಿದೆ. 1500 ಅಡಿ ಕೊರದ ಕೊಳವೆಬಾವಿಗಳಲ್ಲಿ ನೀರಿಲ್ಲದೆ, ರೈತ ಪರಿತಪಿಸುತ್ತಿದ್ದು, ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಶಾಶ್ವತ ನೀರಾವರಿ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗಬೇಕಾಗಿದೆ ಎಂದು ತಿಳಿಸಿದರು.

ಕನ್ನಡ ಶಾಲೆ ಉಳಿಸುವ ಕೆಲಸವಾಗಲಿ: ಇತ್ತೀಚಿನ ದಿನಗಳಲ್ಲಿ ಸರ್ಕಾರ ಕೈಗೊಂಡಿರುವ ದಿಟ್ಟತನದಿಂದ ರಾಜ್ಯದಲ್ಲಿ 973 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಬೋಧನಾ ತರಗತಿ ಆರಂಭಿಸಿರುವುದು ಗಡಿಭಾಗದಲ್ಲಿನ ಕನ್ನಡ ಶಾಲೆಗಳನ್ನು ಉಳಿಸುವ ಪ್ರಯತ್ನವಾಗಲಿ ಎಂದ ಅವರು, ಪೋಷಕ ವರ್ಗಕ್ಕೆ ಕನ್ನಡದ ಮೇರು ಸಾಹಿತಿಗಳು ಮತ್ತು ಜ್ಞಾನಪೀಠದ ಹಾದಿಯಲ್ಲಿ ಅನೇಕ ಮಹನೀಯರು ಕನ್ನಡ ಶಾಲೆಗಳಲ್ಲಿಯೇ ಕಲಿತವರು ಎನ್ನುವುದನ್ನು ಮನದಟ್ಟು ಮಾಡಬೇಕಾಗಿದೆ. ಬಾಯಿಂದ ಬಾಯಿಗೆ ಪ್ರಚಾರವಾಗುತ್ತಿದ್ದ ಜಾನಪದ ಕಲೆ ದೂರುವಾಗುತ್ತಿರುವ ಕಾರಣ ನಮ್ಮ ಅನೇಕ ಸಂಸ್ಕೃತಿಯ ಕಲೆಗಳ ನಾಶವಾಗುತ್ತಿವೆ. ಇದಕ್ಕೂ ಮುನ್ನ ರಾಷ್ಟ್ರಧ್ವಜವನ್ನು ತಹಶೀಲ್ದಾರ್‌ ವಿ.ನಾಗರಾಜು, ಕಸಾಪದ ಅಧ್ಯಕ್ಷ ನಾಗನಂದ ಕೆಂಪರಾಜ್‌ ನಾಡಧ್ವಜವನ್ನು ಮತ್ತು ದಾ.ಮು.ವೆಂಕಟೇಶ್‌ ಪರಿಷತ್‌ ಧ್ವಜಾರೋಹಣ ಮಾಡಿದರು. ಅರಳೇರಿ ವೃತ್ತದಲ್ಲಿನ ಕುವೆಂಪು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಸರ್ವಾಧ್ಯಕ್ಷ ಎಂ.ವಿ.ತಮ್ಮಯ್ಯ ಅವರನ್ನು ಮೆರವಣಿಗೆ ಮೂಲಕ ಮಾಸ್ತಿ ರಂಗಮಂದಿರದಲ್ಲಿ ನಿರ್ಮಿಸಿದ್ದ ಡಾ.ಗಿರೀಶ್‌ ಕಾರ್ನಾಡ್‌ ವೇದಿಕೆಗೆ ವಿವಿಧ ಕಲಾತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ಮೂಲಕ ಕರೆ ತರಲಾಯಿತು.

ಸನ್ಮಾನ, ಪ್ರತಿಭಾ ಪುರಸ್ಕಾರ: ಕಾರ್ಯಕ್ರಮದ ಅಂಗವಾಗಿ ಸಮಾಜದ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಅತ್ಮೀಯವಾಗಿ ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.