ಕೆಪಿಎಸ್‌ ಪ್ರತಿ ಶಾಲೆಗೆ 3 ಕೋಟಿ ರೂ.

ಒಂದೇ ಸೂರಿನಡಿ ಎಲ್ಕೆಜಿಯಿಂದ ದ್ವಿತೀಯ ಪಿಯುವರೆಗೂ ಶಿಕ್ಷಣ: ಡಿಡಿಪಿಐ ಕೆ.ರತ್ನಯ್ಯ

Team Udayavani, May 30, 2019, 11:20 AM IST

30-May-16

ಕೋಲಾರ ತಾಲೂಕಿನ ನರಸಾಪುರದಲ್ಲಿ ಕೆಪಿಎಸ್‌ ಶಾಲೆ ಆರಂಭೋತ್ಸವದಲ್ಲಿ ಪಾಲ್ಗೊಂಡಿದ್ದ ಡಿಡಿಪಿಐ ಕೆ.ರತ್ನಯ್ಯ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿದರು

ಕೋಲಾರ: ಕರ್ನಾಟಕ ಪಬ್ಲಿಕ್‌ ಶಾಲೆ(ಕೆಪಿಎಸ್‌)ಗಳ ಮೂಲಕ ಮಕ್ಕಳಿಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ಉಚಿತ ಶಿಕ್ಷಣ ನೀಡಲಿದ್ದು, ಮೂಲ ಸೌಲಭ್ಯಗಳಿಗಾಗಿ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು.

ತಾಲೂಕಿನ ನರಸಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭೋತ್ಸವ ಹಾಗೂ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 24 ಕೆಪಿಎಸ್‌ ಶಾಲೆಗಳು ಆರಂಭಗೊಂಡಿದ್ದು, ಈ ಶಾಲೆಗಳಲ್ಲಿ ಉಚಿತ ಶಿಕ್ಷಣದ ಜತೆಗೆ ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೂ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಆಧುನಿಕ ಸೌಲಭ್ಯಗಳೊಂದಿಗೆ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಖಾಸಗಿ ವ್ಯಾಮೋಹ ಬಿಟ್ಟು ಈ ಶಾಲೆಗಳಲ್ಲಿ ಸಿಗುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ ಎಂದು ಪೋಷಕರಿಗೆ ಮನವಿ ಮಾಡಿದರು.

ಸರ್ಕಾರ ಪ್ರತಿ ಶಾಲೆಗೂ ತಲಾ 3 ಕೋಟಿ ರೂ. ನೀಡುತ್ತಿದ್ದು, ಆಧುನಿಕ ಪ್ರಯೋಗಾಲಯ, ಗ್ರಂಥಾಲಯ, ಗಣಕ ಶಿಕ್ಷಣ, ಶೌಚಾಲಯ, ಸುಸಜ್ಜಿತ ಶಾಲಾ ಕೊಠಡಿ ಸೇರಿ ವಿವಿಧ ಸೌಲಭ್ಯಗಳಿಗಾಗಿ ಈ ಹಣ ಬಳಸಿಕೊಳ್ಳಬೇಕಾಗಿದೆ ಎಂದು ವಿವರಿಸಿದರು.

ಸರ್ಕಾರಿ ಶಾಲೆ ಬಗ್ಗೆ ಕೀಳರಿಮೆ ಬೇಡ: ಸರ್ಕಾರಿ ಶಾಲೆಗಳೆಂದರೆ ಕೀಳಿರಿಮೆ ಬೇಡ, ಅನೇಕ ಸಾಧಕರು ಇಲ್ಲೇ ಓದಿದವರು, ಗುಣಾತ್ಮಕ ಶಿಕ್ಷಣದ ಮೂಲಕ ಶೇ.100 ಸಾಧನೆಯತ್ತ ಸಾಗುತ್ತಿದ್ದೇವೆ, ಸಮಾನ ಶಿಕ್ಷಣಕ್ಕಾಗಿ ಈ ಶಾಲೆಗಳ ಬಲವರ್ಧನೆ ಅಗತ್ಯ ಎಂದು ತಿಳಿಸಿದರು. ಖಾಸಗಿ ಶಾಲೆಗಳ ಪೈಪೋಟಿಯನ್ನು ನಮ್ಮ ಶಿಕ್ಷಕರು ಸಮರ್ಥವಾಗಿ ಎದುರಿಸಿದ್ದಾರೆ, ಗುಣಾತ್ಮಕತೆಯಲ್ಲಿ ಸಾಧನೆ ಮಾಡಿದ್ದಾರೆ ಎಂದ ಅವರು, ಇಲ್ಲಿ ನೀಡುವ ಉಚಿತ ಪಠ್ಯ, ಬಿಸಿಯೂಟ, ಕ್ಷೀರಭಾಗ್ಯ, ಶೂಭಾಗ್ಯ ಮತ್ತಿತರ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಾಧಕರಾಗಿ ಎಂದು ಮಕ್ಕಳಿಗೆ ಸಲಹೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ವೆಂಕಟಸ್ವಾಮಿ, ರಾಜ್ಯ ಸರ್ಕಾರ ಕಳೆದ ವರ್ಷ 170 ಕೆಪಿಎಸ್‌ ಶಾಲೆ ಆರಂಭಿಸಿದ್ದು, ಈ ಬಾರಿ ಮತ್ತೆ 100 ಶಾಲೆ ನೀಡಿದೆ. ಕೆಜಿಎಫ್‌ ಹೊಸ ತಾಲೂಕು ಆಗಿರುವುದರಿಂದ ಆ ತಾಲೂಕಿನ ಕೋಟಾದಲ್ಲಿ ಸುಂದರಪಾಳ್ಯದಲ್ಲಿ ಈ ಬಾರಿ ಕೆಪಿಎಸ್‌ ಶಾಲೆ ಆರಂಭವಾಗಿದೆ. ಸರ್ಕಾರ ಉಚಿತ ಶಿಕ್ಷಣದಡಿ ನೀಡುತ್ತಿರುವ ಈ ಸೌಲಭ್ಯ ಬಳಸಿಕೊಳ್ಳಿ, ಖಾಸಗಿ ಶಾಲೆ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೌಢಶಾಲಾ ಮುಖ್ಯ ಶಿಕ್ಷಕ ಶಿವಪ್ರಸಾದ್‌, ಸರ್ಕಾರಿ ಶಾಲೆಗಳು ಉತ್ತಮ ಸ್ಥಿತಿಯಲ್ಲಿವೆ, ಉತ್ತಮ ವಾತಾವರಣ, ಕಲಿಕೆಗೆ ಪೂರಕವಾಗಿದ್ದು, ಶೇ.100 ಫಲಿತಾಂಶದ ಸಾಧನೆಯನ್ನೂ ಮಾಡುತ್ತಿವೆ. ಇದೀಗ ಇಂಗ್ಲಿಷ್‌ ಮಾಧ್ಯಮ ಶಿಕ್ಷಣದಿಂದ ಮತ್ತಷ್ಟು ಬಲಗೊಳ್ಳಲಿವೆ ಎಂದು ಹೇಳಿದರು. ಎಸ್‌ಡಿಎಂಸಿ ಅಧ್ಯಕ್ಷ ಎಂಟಿಬಿ ಶ್ರೀನಿವಾಸ್‌, ಶಾಲೆಯ ಸಮಗ್ರ ಅಭಿವೃದ್ಧಿಗೆ ಸಮಿತಿ ಮತ್ತು ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು. ಈ ವೇಳೆ 40 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ವಿಜಯಕುಮಾರ್‌ ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮುನಿರಾಜ್‌ರನ್ನು ಶಾಲೆಯಿಂದ ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷೆ ಶೈಲಾ ಬಸವರಾಜ್‌, ಎವೈಪಿಸಿ ಸಿದ್ದೇಶ್‌, ಡಿಪಿಒ ಮಂಜುನಾಥ್‌, ಪ್ರಾಂಶುಪಾಲೆ ಕ್ರಿಸ್ಟ್‌ ಜಯಂ, ಇಸಿಒಗಳಾದ ಮುನಿರತ್ನಯ್ಯಶೆಟ್ಟಿ, ಆರ್‌.ಶ್ರೀನಿವಾಸನ್‌, ಬೈರೆಡ್ಡಿ, ಮುಖ್ಯ ಶಿಕ್ಷಕ ಸೊಣ್ಣೇಗೌಡ, ಶಿಕ್ಷಕರಾದ ಶೈಲಾ, ರೇಣುಕಾ, ಎಚ್.ನಾರಾಯಣಸ್ವಾಮಿ, ಬಿಆರ್‌ಪಿ ಗೋಪಾಲ್ ಇದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.