ಹಳೆ ಕಾಮಗಾರಿಗಳ ಹಣ ಪಾವತಿಸದ್ದಕ್ಕೆ ಅಸಮಾಧಾನ

ನಗರಸಭೆ ಖರ್ಚು ವೆಚ್ಚಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಂಜುನಾಥ್‌ ಪೌರಾಯುಕ್ತರಿಗೆ ತರಾಟೆ

Team Udayavani, Aug 8, 2019, 2:57 PM IST

8–Agust-36

ಕೋಲಾರದ ಡಿ.ಸಿ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ನಗರಸಭೆಯ ಖರ್ಚು ವೆಚ್ಚಗಳ ಸಂಬಂಧ ಸಭೆ ನಡೆಸಿದರು.

ಕೋಲಾರ: ನಗರಸಭೆಯಲ್ಲಿ ಈ ಹಿಂದೆ ಮಾಡಿರುವ ಕಾಮಗಾರಿ, ಇತರ ಕೆಲಸಗಳಿಗೆ ಹಣ ಪಾವತಿ ಮಾಡದಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಸಿಬ್ಬಂದಿ ಸಂಬಳಕ್ಕೂ ಹಣವಿಲ್ಲದಿರುವಾಗ ಈ ಬಿಲ್ ಹೇಗೆ ಪಾವತಿಸುವಿರಿ ಎಂದು ಪ್ರಶ್ನಿಸಿದರು.

ತಮ್ಮ ಕಚೇರಿಯಲ್ಲಿ ನಗರಸಭೆಯ ಖರ್ಚು ವೆಚ್ಚಗಳ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿ, ಹಿಂದಿನ ವರ್ಷಗಳಲ್ಲಿ ಆಗಿರುವ ಕೆಲಸಗಳಿಗೆ ಬಿಲ್ ಪಾವತಿ ಮಾಡಲು ನಿಮಗೇನು ಸಮಸ್ಯೆಯಾಗಿತ್ತು ಎಂದು ಪ್ರಶ್ನಿಸಿದ ಅವರು,ಪ್ರತಿ ತಿಂಗಳು ಖರ್ಚು ವೆಚ್ಚದ ಬಗ್ಗೆ ಸಭೆ ನಡೆಸಿದ್ದರೆ ಸಮಸ್ಯೆ ಬರುತ್ತಿರಲಿಲ್ಲ. ಈಗ ಅದಕ್ಕೆಲ್ಲ ಎಲ್ಲಿಂದ ದುಡ್ಡು ತರಬೇಕು ಹೇಳಿ? ಸಮರ್ಪಕವಾಗಿ ತೆರಿಗೇನೂ ವಸೂಲಿ ಮಾಡಲ್ಲ, ನಿಮಗೆ ಸಂಬಳ ಮಾತ್ರ ಸಮಯಕ್ಕೆ ಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

2 ಕೋಟಿ ರೂ. ಬಾಕಿ: ಪೌರಾಯುಕ್ತ ಸತ್ಯನಾರಾಯಣ, ಹಿಂದೆ ಮಾಡಿರುವ ಕೆಲಸಗಳಿಗೆ ಆಗಿನ ಆಯುಕ್ತರು ಬಿಲ್ ಪಾವತಿ ಮಾಡಿಲ್ಲ, ಗುತ್ತಿಗೆದಾರರು ಈಗ ಬಂದು ಬಿಲ್ಗೆ ಒತ್ತಾಯ ಮಾಡುತ್ತಿದ್ದು, 2 ಕೋಟಿ ರೂ. ಬಾಕಿ ಇದೆ ಎಂದು ತಿಳಿಸಿದರು.

ಡೀಸೆಲ್, ದುರಸ್ತಿ ಕಾರ್ಯಕ್ಕೆ ದುಡ್ಡು ಬೇಕು: ನಗರಸಭೆ ವಾಹನಗಳಿಗೆ ಡಿಸೇಲ್, ಸಿಬ್ಬಂದಿ ವೇತನ ಸೇರಿ ತಿಂಗಳಿಗೆ 30 ಲಕ್ಷ ರೂ.ಗೂ ಹೆಚ್ಚು ಹಣ ಬೇಕಾಗುತ್ತದೆ. 9 ನೀರಿನ ಟ್ಯಾಂಕರ್‌, 18 ಕಸ ವಿಲೇವಾರಿ ವಾಹನಗಳು ಇದ್ದು, ಡಿಸೇಲ್ಗೆ 4 ಲಕ್ಷ ರೂ.ಬೇಕಾಗುತ್ತದೆ, ಬೀದಿದೀಪ, ಕೊಳವೆಬಾವಿಗೆ ಪಂಪ್‌ಮೋಟಾರ್‌ ರಿಪೇರಿ, ಹಿಂದಿನ ಸಣ್ಣಪುಟ್ಟ ಕೆಲಸಗಳ ಬಿಲ್ ಬಾಕಿ ಇದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ನಗರದಲ್ಲಿ 35 ವಾರ್ಡ್‌ಗಳಿದ್ದು, ಎಸ್‌ಎಫ್‌ಎಸ್‌ ಯೋಜನೆಯಡಿ 70 ಸಾವಿರ ರೂ.ನಿಂದ 80 ಸಾವಿರ ರೂ. ವಿದ್ಯುತ್‌ ಬಿಲ್ ಪಾವತಿಯಾಗುತ್ತಿದೆ. ಕೊಳವೆಬಾವಿ ಸೇರಿ ಎಷ್ಟು ವಿದ್ಯುತ್‌ ಸಂಪರ್ಕಗಳಿವೆ ಎಂದು ಪ್ರಶ್ನಿಸಿದರು.

8000 ಬೀದಿದೀಪ: ಇದಕ್ಕೆ ಉತ್ತರಿಸಿದ ಎಂಜನಿಯರ್‌ ಸುಧಾಕರ್‌ ಶೆಟ್ಟಿ, 35 ವಾರ್ಡ್‌ನಲ್ಲಿ 300 ಕೊಳÊೆಬಾವಿಗಳಿದ್ದು, 120 ಚಾಲನೆಯಲ್ಲಿವೆ, ತಿಂಗಳಿಗೆ 2 ರಿಂದ 3 ಕೊಳವೆಬಾವಿಗಳು ಬತ್ತಿ ಹೋಗುತ್ತಿವೆ. 8000 ಬೀದಿದೀಪಗಳು ಇವೆ ಎಂದರು.

ಜವಾಬ್ದಾರಿ ಇಲ್ಲವೆ?: ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿ, ಕೊಳವೆಬಾವಿ ಕೊರೆಯುವ ಸಂದರ್ಭದಲ್ಲಿ ಎಂಜಿನಿಯರ್‌ಗಳು ಸ್ಥಳಕ್ಕೆ ಹೋಗುವುದಿಲ್ಲ ಎಂಬ ದೂರುಗಳು ಬಂದಿವೆ. ಅಭಿವೃದ್ಧಿ ಕಾಮಗಾರಿಗಳಲ್ಲಿ ಕಳಪೆ ನಡೆಯುತ್ತಿದ್ದರೂ ಹಣ ಬಿಡುಗಡೆಗೆ ಶಿಫಾರಸ್ಸು ಮಾಡುತ್ತಿರಾ? ಏನ್‌ ಕೆಲಸ ಮಾಡಬೇಕು ಎಂಬುದು ಜವಾಬ್ದಾರಿಯಿಲ್ಲವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೆವಿ ಎಸ್‌ ಕಲ್ಯಾಣ ಮಂಟಪ ಸಮೀಪದ ರಾಜಕಾಲುವೆ ಯಲ್ಲಿ ಮ್ಯಾನ್‌ಹೋಲ್ ಹಾನಿ ಮಾಡಿರುವ ವ್ಯಕ್ತಿ ವಿರುದ್ಧ ದೂರು ದಾಖಲಿಸಿ ದುರಸ್ತಿ ಪಡಿಸಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.