ಮೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ


Team Udayavani, Nov 23, 2019, 5:56 PM IST

23-November-34

ಕೊಪ್ಪ: ಮೆಸ್ಕಾಂ ಅ ಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಶುಕ್ರವಾರ ಬಾಳಗಡಿಯ ಮೆಸ್ಕಾಂ ಕಚೇರಿಯಲ್ಲಿ ಮೆಸ್ಕಾಂ ಹಮ್ಮಿಕೊಂಡಿದ್ದ ತ್ರೆ„ಮಾಸಿಕ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಮೆಸ್ಕಾಂ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸದ ಕಾರಣ ಆಗಬೇಕಾದ ಕೆಲಸ ಕುಂಠಿತವಾಗುತ್ತಿದೆ. ಮೂರು ತಿಂಗಳಿಗೊಮ್ಮೆ ನಡೆಯುವ ಜನಸಂಪರ್ಕ ಸಭೆಯಲ್ಲಿ ಜನರಿಗೆ ಮಾಹಿತಿ ನೀಡದೆ ಕಾಟಾಚಾರಕ್ಕೆ ನಡೆಸುತ್ತಿದ್ದಾರೆ ಎಂದು ಗ್ರಾಹಕರು ದೂರಿದರು.

ಸಭೆಯಲ್ಲಿ ರೈತಸಂಘದ ಅಧ್ಯಕ್ಷ ನವೀನ್‌ ಕರುವಾನೆ ಮಾತನಾಡಿ, ಮೆಸ್ಕಾಂ ಇಲಾಖೆಯಲ್ಲಿ ಜನರಿಗೆ ಅಗತ್ಯವಿರುವ ಕೆಲಸಗಳು ತಕ್ಷಣಕ್ಕೆ ಆಗುವುದಿಲ್ಲ. ಇಲ್ಲಿನ ಅಧಿಕಾರಿಗಳ ಉದಾಸೀನಕ್ಕೆ ಜನರು ಹೈರಾಣಾಗುತ್ತಿದ್ದಾರೆ. ಕನಿಷ್ಠ ಮೂರು ತಿಂಗಳಿಗೊಮ್ಮೆ ನಡೆಯುವ ಜನಸಂಪರ್ಕ ಸಭೆಯ ಬಗ್ಗೆ ಜನರಿಗೆ ಮಾಹಿತಿ ನೀಡದೆ ಕದ್ದು ಮುಚ್ಚಿ ನಡೆಸುತ್ತಾರೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸಭೆಯಲ್ಲಿ ಸರಿಯಾದ ಮಾಹಿತಿ ನೀಡುವಂತೆ ಇಲಾಖೆ ಉಪ ವಿಭಾಗಾಧಿಕಾರಿ ಯೊಗೇಶ್‌ ಬಿ.ಆರ್‌. ಅವರಿಗೆ ಒತ್ತಾಯಿಸಿ ಪ್ರತಿಭಟಿಸಲು ಮುಂದಾದರು. ಆಗ ಯೊಗೇಶ್‌ ತಮ್ಮ ಸಿಬ್ಬಂದಿಯಿಂದ ಮಾಹಿತಿ ತರಿಸಿಕೊಂಡು ಸಭೆಗೆ ನೀಡಿದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್‌ ಮಡಬಳ್ಳಿ ಮಾತನಾಡಿ, ಛಾವಲ್ಮಾನೆ ಗ್ರಾಪಂ ವ್ಯಾಪ್ತಿಯಲ್ಲಿ ಬೆಳಮುಡಿ ಸಮೀಪ ಜಗದೀಶ್‌, ಮಂಜುನಾಥ್‌ ಎಂಬ ರೈತರು ತಮ್ಮ ಜಮೀನಿನ ಪಂಪ್‌ಸೆಟ್‌ಗೆ ಹಾಕಿದ್ದ ವಿದ್ಯುತ್‌ ಕಂಬ ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆಗೆ ಹೊಳೆಯಲ್ಲಿ ಕೊಚ್ಚಿ ಹೋಗಿದ್ದವು. ಇದುವರೆಗೂ ಕೆಲಸ ಮಾಡಿಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಎ.ಇ.ಇ. ಚಂದ್ರಶೇಖರ್‌, ಕೆಲಸದ ಅನುಮೋದನೆ ದೊರಕಿಲ್ಲ. ನೆರೆ ಹಾನಿಗೆ ಒಂದು ಕೋಟಿ ರೂ. ಬಂದಿದ್ದು. 60 ಲಕ್ಷ ರೂ. ಕೆಲಸವಾಗಿದೆ ಎಂದು ತಿಳಿಸಿದರು.

ಹಸಿರು ಸೇನೆಯ ಚಿಂತನ್‌ ಬೆಳಗೊಳ ಮಾತನಾಡಿ, ಜಂಗಲ್‌ ಕಟ್ಟಿಂಗ್‌ ಕಾಟಚಾರಕ್ಕೆ ಮಾಡುತ್ತೀರಾ? ಮಳೆ ಪ್ರಾರಂಭವಾಗುವ ಮುನ್ನ ಜಂಗಲ್‌ ಕಟಿಂಗ ಮಾಡಬೇಕು. ಅದರೇ ಇಲ್ಲಿ ಮಳೆ ಮುಗಿದ ನಂತರ ಕಟ್ಟಿಂಗ್‌ ಮಾಡಲಾಗುತ್ತದೆ. ಇದರಿಂದ ಯಾರಿಗೆ ಲಾಭ ಎಂದು ಪ್ರಶ್ನೆ ಮಾಡಿದರು. ದೀನ್‌ದಯಾಳ್‌ ಯೋಜನೆಯಲ್ಲಿ ಗುತ್ತಿಗೆ ಪಡೆದವರು ಕೆಲಸ ಸರಿಯಾಗಿ ಮಾಡದೇ ಫಲಾನುಭವಿಗಳು ವಿದ್ಯುತ್‌ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ದೂರಿದರು. ಜನಸಂಪರ್ಕ ಸಭೆಯಲ್ಲಿಅಧೀಕ್ಷಕ ಇಂಜಿನಿಯರ್‌ ಉಮೇಶ್‌ ಚಂದ್ರ, ಹರಂದೂರು ಗ್ರಾಪಂ ಸದಸ್ಯ ಸೃಜನ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.