ಸಹಕಾರಿಗಳ ಪುನಶ್ಚೇತನಕ್ಕೆ ಬೇಕಿದೆ ಸಹಕಾರ

ಜಿಲ್ಲೆಯಲ್ಲಿವೆ 766 ಸಹಕಾರಿ ಸಂಸ್ಥೆಗಳುಸುಸ್ಥಿತಿಯಲ್ಲಿ 573 ಸಹಕಾರಿ ಸಂಸ್ಥೆಗಳು

Team Udayavani, Nov 14, 2019, 7:15 PM IST

14-November-36

„ದತ್ತು ಕಮ್ಮಾರ

ಕೊಪ್ಪಳ: ಸಹಕಾರಿ ಕ್ಷೇತ್ರ ಅಭಿವೃದ್ಧಿಯಾದರೆ ದೇಶವೇ ಅಭಿವೃದ್ಧಿಯಾದಂತೆ ಎನ್ನುವ ಮಾತಿದೆ. ಆದರೆ ವಾಣಿಜ್ಯ ಬ್ಯಾಂಕ್‌ಗಳ ವಹಿವಾಟಿನ ಆರ್ಭಟ ಹಾಗೂ ತಾಂತ್ರಿಕತೆಯ ಕೊರತೆಯಿಂದ ಸಹಕಾರಿ ಬ್ಯಾಂಕ್‌ಗಳು ನರಳಾಡುತ್ತಿವೆ. ಜಿಲ್ಲೆಯಲ್ಲಿ ಒಟ್ಟು 766 ಸಹಕಾರಿ ಸಂಸ್ಥೆಗಳಿದ್ದು, 573 ಸಂಸ್ಥೆಗಳು ಮಾತ್ರ ತಮ್ಮ ಆರ್ಥಿಕತೆ ಸ್ಥಿರತೆ ಕಾಪಾಡಿಕೊಂಡಿವೆ.

ರೈತರ ಹಾಗೂ ಬ್ಯಾಂಕ್‌, ಸರ್ಕಾರದ ನಡುವೆ ಸಂಪರ್ಕದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಶೋಚನೀಯ ಸ್ಥಿತಿ ಎದುರಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಆದರೆ ಕೆಲ ಸಹಕಾರಿ ಸಂಸ್ಥೆಗಳು ಆಧುನಿಕತೆಗೆ ತಕ್ಕಂತೆ ತಮ್ಮ ಕಾರ್ಯ ವಿಧಾನಗಳನ್ನು ಬದಲಾಯಿಸಿಕೊಂಡು ವಾಣಿಜ್ಯ ಬ್ಯಾಂಕ್‌ಗಳಿಗೂ ಪೈಪೋಟಿ ನೀಡುತ್ತಿರುವುದು ಗಮನಾರ್ಹ ಸಂಗತಿ. ಸ್ವಾತಂತ್ರ್ಯ ನಂತರದಲ್ಲಿ ಕೆಳ ಹಾಗೂ ಮಧ್ಯಮ ವರ್ಗದ ಜನತೆಗೆ ಈ ಸಹಕಾರಿ ಸಂಸ್ಥೆಗಳೇ ಆಧಾರವಾಗಿದ್ದವು.

ವಾಣಿಜ್ಯ ಬ್ಯಾಂಕ್‌ಗಳು ಎಂದರೆ ಶ್ರೀಮಂತರ ಸ್ವತ್ತು ಎನ್ನುವಂಥ ಸ್ಥಿತಿಯಿತ್ತು. ಜನರಲ್ಲಿ ಸಹಕಾರಿ ಮನೋಭಾವ, ಉಳಿತಾಯ ಯೋಜನೆಗಳಿಂದ ಜನರ ಭವಿಷ್ಯದ ಬದುಕು ಕಟ್ಟಿಕೊಳ್ಳಲು ತುಂಬಾಉಪಕಾರಿಯಾಗಿದ್ದವು. ಅಂತಹ ಸಹಕಾರಿ ಸಂಸ್ಥೆಗಳು ವಾಣಿಜ್ಯ ಬ್ಯಾಂಕ್‌ ಆರ್ಭಟಕ್ಕೆ ನಲುಗಿ ತಮ್ಮ ಕಾರ್ಯ ಚಟುವಟಿಕೆಯನ್ನೇ ನಿಲ್ಲಿಸುತ್ತಿವೆ.

119 ಸಹರ್ಕಾರಿಗಳ ಕಾರ್ಯ ಸ್ಥಗಿತ: ಜಿಲ್ಲೆಯಲ್ಲಿ 766 ಸಹಕಾರಿ ಸಂಸ್ಥೆಗಳಿವೆ. ಈ ಪೈಕಿ 573 ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಅಂದರೆ, 119 ಸಂಸ್ಥೆಗಳು ಆರ್ಥಿಕ ಸಮಸ್ಯೆಯಿಂದ ಸ್ಥಗಿತವಾಗಿದ್ದರೆ, ಯಾವುದೇ ಕಾರ್ಯ ನಿರ್ವಹಿಸದೇ 74 ಸಂಸ್ಥೆಗಳು ಸಮಾಪನೆಗೊಂಡಿವೆ. ಜಿಲ್ಲೆಯ ಹಲಗೇರಿ, ಹೇರೂರು, ಬೆಟಗೇರಿ, ಘಟ್ಟಿರಡ್ಡಿಹಾಳ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ನೀಡಿದ ಸಾಲ ವಾಪಸ್‌ ಪಡೆಯದೇ ಇರುವುದು, ಹಣಕಾಸು ವಹಿವಾಟಿನಲ್ಲಿ ಅವ್ಯವಹಾರ ಹಾಗೂ ಸಿಬ್ಬಂದಿಗಳ ಕೊರತೆ ಸಂಸ್ಥೆ ಮುಚ್ಚುವುದಕ್ಕೂ ಕಾರಣವಾಗಿವೆ.

ಪೈಪೋಟಿ ನೀಡುತ್ತಿವೆ ಕೆಲ ಸಂಸ್ಥೆಗಳು: ತಾಲೂಕಿನ ಕಿನ್ನಾಳ ಸಹಕಾರಿ ಸಂಸ್ಥೆ ಆಧುನಿಕತೆಗೆ ತಕ್ಕಂತೆ ಸಹಕಾರಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಬಂದಿದೆ. ಇದು ವಾಣಿಜ್ಯ ಬ್ಯಾಂಕ್‌ಗೂ ಯಾವುದೇ ಕಡಿಮೆ ಇಲ್ಲ ಎನ್ನುವಂತೆ ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದೆ. ಇಲ್ಲಿ ಯುವಕರಿಂದ ಹಿಡಿದು ವೃದ್ಧೆಯರೂ ತಮ್ಮ ಸ್ವಂತಿಕೆಯಿಂದಲೇ ವಹಿವಾಟು ನಡೆಸಿ ಗಮನ ಸೆಳೆಯುತ್ತಿದ್ದಾರೆ. ಕಿನ್ನಾಳದ ಸಹಕಾರಿ ಸಂಸ್ಥೆ ಜಿಲ್ಲೆಯಲ್ಲೇ ಹೆಸರುವಾಸಿಯಾಗಿದೆ.

ಸುಸ್ಥಿತಿಯಲ್ಲಿವೆ ಕೆಲ ಸಂಸ್ಥೆಗಳು: ಕೊಪ್ಪಳ ನಗರದಲ್ಲಿನ ಟಿಎಪಿಸಿಎಂಎಸ್‌, ಶಿವಪುರ, ಕುಕನೂರು, ಮೆಣದಾಳ ಸೇರಿ ಕೆಲವೊಂದು ಸಂಸ್ಥೆಗಳು ವಾಹನ, ಆಭರಣ ಮೇಲಿನ ಸಾಲ ನೀಡುವ ಮೂಲಕ ಸುಸ್ಥಿತಿಯಲ್ಲಿದ್ದು, ಕಾರ್ಯ ನಿರ್ವಹಿಸಿ ಜನರ ಗಮನ ಸೆಳೆದಿವೆ. ಆಧುನಿಕತೆಗೆ ತಕ್ಕಂತೆ ಗಣಕೀಕರಣಕ್ಕೆ ಬಂದಿವೆ. ಸಾಲ, ಸೌಲಭ್ಯ ಸೇರಿದಂತೆ ಇತರೆ ಯೋಜನೆಗಳೂ ಡಿಜಿಟಲೀಕರಣ ವ್ಯಾಪ್ತಿಯಲ್ಲಿರುವುದರಿಂದ ಕಿನ್ನಾಳ ಸೇರಿದಂತೆ ಕೆಲವು ಸಹಕಾರಿ ಸಂಸ್ಥೆಗಳು ಎಲ್ಲರ ಗಮನ ಸೆಳೆದಿವೆ.

ಪುನಶ್ಚೇತನಕ್ಕೆ ಪ್ರಯತ್ನ: ಇಂದು ಪ್ರತಿಯೊಬ್ಬ ರೈತನೂ ಸಾಲ ಸೇರಿದಂತೆ ಪ್ರತಿಯೊಂದು ಸೌಲಭ್ಯ ಪಡೆಯಲು ವಾಣಿಜ್ಯ ಬ್ಯಾಂಕ್‌ಗಳ ಮೆಟ್ಟಿಲೇರುತ್ತಿದ್ದಾನೆ. ಸಾಲದ ಹೊರೆ ಬೀಳುತ್ತಿದ್ದಂತೆ ಸಂಕಷ್ಟಕ್ಕೆ ಸಿಲುಕಿ ತೊಂದರೆ ಎದುರಿಸುತ್ತಿದ್ದಾನೆ. ಹೀಗಾಗಿ ಸಹಕಾರಿ ಸಂಸ್ಥೆಗಳ ಕಾರ್ಯವೂ ತುಂಬಾ ಕಡಿಮೆ ಇದೆ. ಸರ್ಕಾರ ಸಹಕಾರಿ ಸಂಸ್ಥೆಗಳಿಗೆ ಪುನಶ್ಚೇತನ ನೀಡಲು ಬೀಜ, ಗೊಬ್ಬರ, ಔಷ ಧಿ ಸೇರಿದಂತೆ ಕೆಲ ಯೋಜನೆಗಳನ್ನು ಸಹಕಾರಿ ಸಂಸ್ಥೆಗಳ ಮೂಲಕವೇ ಜಾರಿ ಮಾಡುತ್ತಿದ್ದು, ರೈತರು ಪುನಃ ಸಹಕಾರಿ ಸಂಸ್ಥೆಗಳತ್ತ ಮುಖ ಮಾಡುವಂತಾಗಿದೆ. ಇತ್ತೀಚೆಗೆ ಸರ್ಕಾರದಿಂದ ಖರೀದಿಸುವ ಮೆಕ್ಕೆಜೋಳ, ತೊಗರೆ ಸೇರಿದಂತೆ ಇತರೆ ಧಾನ್ಯ ಹೊಣೆಯನ್ನು ಸಹಕಾರಿ ಸಂಸ್ಥೆಗಳಿಗೂ ನೀಡಲಾಗುತ್ತಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.