ಸಮನಾಂತರ ಜಲಾಶಯಕ್ಕೆ 10 ಸಾವಿರ ಕೋಟಿ
Team Udayavani, Aug 13, 2019, 12:46 PM IST
ಕೊಪ್ಪಳ: ವಿರಾಪೂರಗಡ್ಡೆಯಲ್ಲಿ ಸಿಲುಕಿದ್ದ ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ ರಕ್ಷಣಾ ಪಡೆಯಿಂದ ಕಾರ್ಯಾಚರಣೆ ಮಾಹಿತಿ ಪಡೆದರು.
ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ನದಿಪಾತ್ರಗಳಿಗೆ ಸೇರುತ್ತಿದೆ. ಜಲಾಶಯದ ಹೂಳು ತೆಗೆಯುವ ಬದಲಾಗಿ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣ ಮಾಡಿದರೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂಗ್ರಹಿಸಬಹುದು ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ವಿರುಪಾಪೂರಗಡ್ಡೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯವು 133 ಟಿಎಂಸಿ ಅಡಿ ನೀರು ಸಂಗ್ರಹ ಸಮಾರ್ಥ್ಯ ಹೊಂದಿದೆ. ಆದರೆ 33 ಟಿಎಂಸಿ ಹೂಳು ತುಂಬಿದ್ದರಿಂದ ಜಲಾಶಯದ ಸಂಗ್ರಹಣಾ ಸಾಮರ್ಥ್ಯ 100 ಟಿಎಂಸಿಗೆ ಬಂದು ತಲುಪಿದೆ. ಈ ಹಿಂದಿನ ಸರ್ಕಾರವು ಡ್ಯಾಂ ಹೂಳು ತೆಗೆಯುವ ಬದಲು ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣದ ಕುರಿತು ಪ್ರಸ್ತಾಪ ಮಾಡಿತ್ತು. ಆಗ 5 ಸಾವಿರ ಕೋಟಿ ಅನುದಾನ ನೀಡುವ ಮಾತನ್ನಾಡಿತ್ತು. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕೇಂದ್ರದಲ್ಲೂ ಮೋದಿ ಸರ್ಕಾರವಿದೆ. ಹಾಗಾಗಿ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣದ ಕುರಿತು 10 ಸಾವಿರ ಕೋಟಿ ಅನುದಾನ ಮೀಸಲಿಡುವ ಕುರಿತು ಚರ್ಚೆ ನಡೆದಿದೆ ಎಂದರು.
ಈಗ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯಬಹುದು. ಅಲ್ಲದೇ ಚುನಾವಣೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೃಷ್ಣಾ ಯೋಜನೆಗೆ 1 ಲಕ್ಷ ಕೋಟಿ ಅನುದಾನ ತರುವ ಕುರಿತು ಭರವಸೆ ನೀಡಿದ್ದರು. ಮೋದಿ ಅವರು ಸಹಿತ ತುಂಗಭದ್ರಾ ಜಲಾಶಯದ ನೀರಾವರಿ ಕುರಿತು ಸಾವಿರ ಕೋಟಿಯ ಪ್ರಸ್ತಾಪ ಮಾಡಿದ್ದರು. ಅದೆಲ್ಲವನ್ನು ನಮ್ಮ ನಾಯಕರ ಗಮನಕ್ಕೆ ತಂದಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್