ಸಮನಾಂತರ ಜಲಾಶಯಕ್ಕೆ 10 ಸಾವಿರ ಕೋಟಿ


Team Udayavani, Aug 13, 2019, 12:46 PM IST

kopala-tdy-1

ಕೊಪ್ಪಳ: ವಿರಾಪೂರಗಡ್ಡೆಯಲ್ಲಿ ಸಿಲುಕಿದ್ದ ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ ರಕ್ಷಣಾ ಪಡೆಯಿಂದ ಕಾರ್ಯಾಚರಣೆ ಮಾಹಿತಿ ಪಡೆದರು.

ಕೊಪ್ಪಳ: ತುಂಗಭದ್ರಾ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ನದಿಪಾತ್ರಗಳಿಗೆ ಸೇರುತ್ತಿದೆ. ಜಲಾಶಯದ ಹೂಳು ತೆಗೆಯುವ ಬದಲಾಗಿ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣ ಮಾಡಿದರೆ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ಸಂಗ್ರಹಿಸಬಹುದು ಎಂದು ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ವಿರುಪಾಪೂರಗಡ್ಡೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯವು 133 ಟಿಎಂಸಿ ಅಡಿ ನೀರು ಸಂಗ್ರಹ ಸಮಾರ್ಥ್ಯ ಹೊಂದಿದೆ. ಆದರೆ 33 ಟಿಎಂಸಿ ಹೂಳು ತುಂಬಿದ್ದರಿಂದ ಜಲಾಶಯದ ಸಂಗ್ರಹಣಾ ಸಾಮರ್ಥ್ಯ 100 ಟಿಎಂಸಿಗೆ ಬಂದು ತಲುಪಿದೆ. ಈ ಹಿಂದಿನ ಸರ್ಕಾರವು ಡ್ಯಾಂ ಹೂಳು ತೆಗೆಯುವ ಬದಲು ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣದ ಕುರಿತು ಪ್ರಸ್ತಾಪ ಮಾಡಿತ್ತು. ಆಗ 5 ಸಾವಿರ ಕೋಟಿ ಅನುದಾನ ನೀಡುವ ಮಾತನ್ನಾಡಿತ್ತು. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಕೇಂದ್ರದಲ್ಲೂ ಮೋದಿ ಸರ್ಕಾರವಿದೆ. ಹಾಗಾಗಿ ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣದ ಕುರಿತು 10 ಸಾವಿರ ಕೋಟಿ ಅನುದಾನ ಮೀಸಲಿಡುವ ಕುರಿತು ಚರ್ಚೆ ನಡೆದಿದೆ ಎಂದರು.

ಈಗ ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯಬಹುದು. ಅಲ್ಲದೇ ಚುನಾವಣೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಕೃಷ್ಣಾ ಯೋಜನೆಗೆ 1 ಲಕ್ಷ ಕೋಟಿ ಅನುದಾನ ತರುವ ಕುರಿತು ಭರವಸೆ ನೀಡಿದ್ದರು. ಮೋದಿ ಅವರು ಸಹಿತ ತುಂಗಭದ್ರಾ ಜಲಾಶಯದ ನೀರಾವರಿ ಕುರಿತು ಸಾವಿರ ಕೋಟಿಯ ಪ್ರಸ್ತಾಪ ಮಾಡಿದ್ದರು. ಅದೆಲ್ಲವನ್ನು ನಮ್ಮ ನಾಯಕರ ಗಮನಕ್ಕೆ ತಂದಿದ್ದೇವೆ ಎಂದರು.

ಕರಡಿ, ಪರಣ್ಣ ನಡುಗಡ್ಡೆಯಲ್ಲಿ ಸಿಲುಕಿದ್ರು!:

ವಿರುಪಾಪೂರ ಗಡ್ಡೆಯಲ್ಲಿ ಜನರ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿ ಸಲಹೆ ಸೂಚನೆ ನೀಡಲು ಆಗಮಿಸಿದ್ದ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ರಕ್ಷಣಾ ತಂಡದೊಂದಿಗೆ ನಡುಗಡ್ಡೆಗೆ ಬೋಟ್‌ನಲ್ಲಿ ತೆರಳಿ ಅಲ್ಲೇ ಸಿಲುಕಿದ ಪ್ರಸಂಗ ತೆರಳಿತು. 2ನೇ ತಂಡವು ನೀರುಪಾಲಾಗಿದ್ದರಿಂದ ಬೋಟ್ ಸಂಚಾರವನ್ನೇ ಸ್ಥಗಿತ ಮಾಡಲಾಯಿತು. ಹೀಗಾಗಿ ವಿರುಪಾಪೂರಗಡ್ಡಿಯಲ್ಲಿ ತಂಗಿದ್ದ 300ಕ್ಕೂ ಹೆಚ್ಚು ಜನರಿಗೆ ಧೈರ್ಯ ಹೇಳುತ್ತಲೇ, ರಕ್ಷಣೆ ಮಾಡುವ ಕುರಿತು ಭರವಸೆ ಮಾತನ್ನಾಡಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿದರು. ಜೊತೆಗೆ ಬೋಟ್ ಸಂಚಾರ ಸ್ಥಗಿತವಾಗಿದ್ದರಿಂದ ಎರಡು ಭಾರತೀಯ ವಾಯು ಪಡೆಯ ಹೆಲಿಕಾಪ್ಟರ್‌ಗಳು ಜನರ ರಕ್ಷಣೆಗೆ ಇಳಿದಿದ್ದರಿಂದ ಗಡ್ಡೆಯ ಗುಡ್ಡದಲ್ಲೇ ತಾತ್ಕಾಲಿಕ ಹೆಲಿಪ್ಯಾಡ್‌ ನಿರ್ಮಿಸಿ ಜನರ ರಕ್ಷಣೆಗೆ ನೆರವಾದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.