ಬರದಿಂದ 127 ಕೋಟಿ ಬೆಳೆಹಾನಿ


Team Udayavani, Dec 9, 2019, 3:24 PM IST

kopla-tdy-1

ಕೊಪ್ಪಳ: ಜಿಲ್ಲೆಯ ಕೆಲವು ಹೋಬಳಿಯಲ್ಲಿ ಪ್ರಸಕ್ತ ವರ್ಷ ಮುಂಗಾರು ಮಳೆ ಅಬ್ಬರಿಸಿದ್ದರೆ, ಗಂಗಾವತಿ ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಆಗಿಯೇ ಇಲ್ಲ. ಹೀಗಾಗಿ ಸರ್ಕಾರವೇ ಗಂಗಾವತಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಕೃಷಿ ಇಲಾಖೆ ಸಹ ಸರ್ಕಾರಕ್ಕೆ 127 ಕೋಟಿ ರೂ. ಮುಂಗಾರು ಬೆಳೆ ಹಾನಿ ವರದಿ ಸಲ್ಲಿಸಿದೆ.

ಜಿಲ್ಲೆಯು ಒಂದಿಲ್ಲ ಒಂದು ವರ್ಷ ಬರ ಎದುರಿಸುತ್ತಲೇ ಇದೆ. ತುಂಗಭದ್ರಾ ಡ್ಯಾಂ ಜಿಲ್ಲೆಯಲ್ಲಿಯೇ ಇದ್ದರೂ ಬರದ ಹಣೆಪಟ್ಟಿ ಮಾತ್ರ ಜಿಲ್ಲೆಯಿಂದ ದೂರವಾಗುತ್ತಿಲ್ಲ. ಕಳೆದ 18 ವರ್ಷದಲ್ಲಿ 12 ವರ್ಷ ಬರಕ್ಕೆ ತುತ್ತಾಗಿರುವ ಇಲ್ಲಿನ ಜನರು ಉದ್ಯೋಗ ಅರಸಿ ಗುಳೆ ಹೋಗುವಂತ ಸ್ಥಿತಿ ಇಂದಿಗೂ ಇದೆ. ಈ ವರ್ಷ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದ ಜನರು ಬದುಕನ್ನೇ ಕಳೆದುಕೊಂಡಿದ್ದಾರೆ. ಆದರೆ ಉಕ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯ ಭತ್ತದ ನಾಡಿನ ಜನರಿಗೆ ಮಾತ್ರ ಮಳೆಯ ಕೊರತೆ ಎದುರಾಗಿ ಬರದ ಬೆಂಕಿ ಜನರನ್ನು ಬೆಂಬಿಡದೇ ಕಾಡಿದೆ. ಜಿಲ್ಲೆಯ ಏಳು ತಾಲೂಕುಗಳಲ್ಲಿ ಮೂರು ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಬೆಳೆಯು ಮೊಳಕೆಯಲ್ಲಿಯೇ ಕಮರಿ ರೈತರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿನ ರೈತರನ್ನು ಮಾತ್ರ ಬರ ಎನ್ನುವ ಪೆಡಂಭೂತ ಬೆಂಬಿಡದೇ ಕಾಡುತ್ತಿದೆ. ಒಂದೊಮ್ಮೆ ಅತಿಯಾಗಿ ಮಳೆಯಿಂದ ಬೆಳೆ ಹಾನಿಗೀಡಾದರೆ, ಮತ್ತೂಮ್ಮೆ ಮಳೆ ಹನಿಯೂ ಭೂಮಿಗೆ ಬೀಳದೆ ಬೆಳೆ ಹಾನಿಯಾಗಿ ರೈತ ಸಂಕಷ್ಟ ಎದುರಿಸುವಂತ ಸ್ಥಿತಿಯಿರುತ್ತೆ. ಸರ್ಕಾರಗಳು ಜಿಲ್ಲೆಯಲ್ಲಿನ ಸ್ಥಿತಿಯನ್ನು ಅವಲೋಕಿಸಿ ಸಕಾಲಕ್ಕೆ ಬರ ಪರಿಹಾರ ನೀರಿ ರೈತರನ್ನು ನೋವಿನ ದವಡೆಯಿಂದ ಪಾರು ಮಾಡಬೇಕಿದೆ.

127 ಕೋಟಿ ರೂ. ಬೆಳೆ ಹಾನಿ: ಗಂಗಾವತಿ ತಾಲೂಕಿನಲ್ಲಿ 24,088 ಹೆಕ್ಟೇರ್‌ ಬಿತ್ತನೆ ಪ್ರದೇಶವಿತ್ತು. ಈ ಪೈಕಿ 22,905 ಹೆಕ್ಟೇರ್‌ ಪ್ರದೇಶ ಬಿತ್ತನೆಯಾಗಿತ್ತು. ಇದರಲ್ಲಿ 19,902 ಹೆಕ್ಟೇರ್‌ ಪ್ರದೇಶದಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಪ್ರದೇಶವು ಬೆಳೆಹಾನಿಯಾಗಿದೆ. ಇದರಲ್ಲಿ 13,902 ಸಣ್ಣ ರೈತರುಹಾಗೂ 5438 ದೊಡ್ಡ ರೈತರು ಬೆಳೆನಷ್ಟ ಅನುಭವಿಸಿದ್ದಾರೆ. ಸಣ್ಣ ಹಾಗೂ ದೊಡ್ಡ ರೈತರ ಬೆಳೆ ಹಾನಿ ಸೇರಿ ಒಟ್ಟಾರೆ 127 ಕೋಟಿ ರೂ. ಬೆಳೆ ಹಾನಿಯಾಗಿದ್ದು, ಸರ್ಕಾರದಿಂದ ಎನ್‌ಡಿಆರ್‌ಎಫ್‌ ನಿಯಮದ ಪ್ರಕಾರ ಪರಿಹಾರ ಕೊಡಬೇಕು ಎನ್ನುವ ಲೆಕ್ಕಾಚಾರ ಹಾಕಿ ಸರ್ಕಾರಕ್ಕೆ ಕೃಷಿ ಇಲಾಖೆ ವರದಿ ಮಾಡಿದೆ.

ನಾಲ್ಕು ಹೋಬಳಿಯಲ್ಲಿ ಮಳೆ ಇಲ್ಲ : ಭತ್ತದ ನಾಡಿನಲ್ಲಿ ಬರ ಬಂದಿದೆಯೇ ಎಂದು ಜನರಲ್ಲಿ ಆಶ್ಚರ್ಯಕರ ಪ್ರಶ್ನೆ ಮೂಡಬಹುದು. ಇದು ಅಚ್ಚರಿಯಾದರೂ ಸತ್ಯದ ಸಂಗತಿ. ಹುಲಿಹೈದರ್‌, ಕನಕಗಿರಿ, ವೆಂಕಟಗಿರಿ ಹಾಗೂ ನವಲಿ ಹೋಬಳಿಯಲ್ಲಿ ಮಳೆಯ ಕೊರತೆ ತೀವ್ರವಾಗಿ ಕಾಡಿದ್ದರೆ, ಅಚ್ಚುಕಪಟ್ಟು ಪ್ರದೇಶದಲ್ಲಿನ ಮರಳಿ, ಸಿದ್ದಾಪೂರ, ಗಂಗಾವತಿ ಹೋಬಳಿಯಲ್ಲಿ ನೀರಾವರಿ ಪ್ರದೇಶವಿದೆ. ಹೀಗಾಗಿ ನಾಲ್ಕು ಹೋಬಳಿಯಲ್ಲಿ ಮಳೆಯ ಕೊರತೆಯಿಂದ ಸರ್ಕಾರವೇ ಗಂಗಾವತಿ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ.

ಗಂಗಾವತಿ ಬರಪೀಡಿತ: ಸರ್ಕಾರ ಗಂಗಾವತಿ ತಾಲೂಕನ್ನು ಮಾತ್ರ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಕೃಷಿ ಇಲಾಖೆ ಗಂಗಾವತಿ ತಾಲೂಕು, ಕನಕಗಿರಿ ಹಾಗೂ ಕಾರಟಗಿ ತಾಲೂಕಿನಲ್ಲಿನ ಬೆಳೆ ಹಾನಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇಲ್ಲಿ ಹೊಸ ಎರಡು ತಾಲೂಕುಗಳು ಇದರಲ್ಲಿ ಸೇರ್ಪಡೆಯಾಗಿವೆ. ಅಂದರೆ, ಕಂದಾಯ ವ್ಯಾಪ್ತಿಯ ಮಾತ್ರ ಹೊಸ ತಾಲೂಕು ವಿಂಗಡಣೆ ಮಾಡಲಾಗಿದೆ. ಕೃಷಿ ವ್ಯಾಪ್ತಿಯು ಮಾತ್ರ ಇನ್ನೂ ಮೂರು ತಾಲೂಕುಗಳನ್ನೂ ಒಳಗೊಂಡಿದೆ.

 

-ದತ್ತು ಕಮ್ಮಾರ

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.