ಗಂಗಾವತಿಯಲ್ಲಿ ಒಂದೇ ದಿನದಲ್ಲಿ 15 ಪಾಸಿಟಿವ್
Team Udayavani, Jul 6, 2020, 5:16 PM IST
ಗಂಗಾವತಿ: ಕೋವಿಡ್ ಹರಡದಂತೆ ಜಿಲ್ಲಾಡಳಿತ ಹಲವಾರು ಮುನ್ನೆಚ್ಚರಿಕೆ ಕ್ರಮ ಕೈಗೊಂಡರೂ ಕೋವಿಡ್ ಸೋಂಕಿತರ ಸಂಖ್ಯೆ ನಿತ್ಯ ಹೆಚ್ಚುತ್ತಿದೆ. ರವಿವಾರ ಒಂದೇ ದಿನ ಗಂಗಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ 15 ಜನರಿಗೆ ಸೋಂಕು ದೃಢಪಟ್ಟಿದೆ. ಅನ್ಯ ಊರುಗಳಿಂದ ಬಂದವರಿಂದಲೇ ಕೋವಿಡ್ ಹೆಚ್ಚು ಹರಡುತ್ತಿದೆ.
ಗಂಗಾವತಿ ನಗರದ ಕಿಲ್ಲಾ ಏರಿಯಾದಲ್ಲಿ 2 ವರ್ಷದ ಬಾಲಕಿಗೆ, ನೀಲಕಂಠೇಶ್ವರ ಕ್ಯಾಂಪಿನಲ್ಲಿ 6 ತಿಂಗಳ ಹಸುಗೂಸಿನ 25 ವರ್ಷದ ತಾಯಿ, ಮುರಾಹರಿ ನಗರದಲ್ಲಿ 23 ವರ್ಷದ ಮಹಿಳೆ, ವಾಲ್ಮೀಕಿ ವೃತ್ತದ ಹತ್ತಿರ 39 ವರ್ಷದ ವ್ಯಕ್ತಿ, ಅಗ್ನಿಶಾಮಕದಳ 28 ವರ್ಷದ ವಾಹನ ಚಾಲಕ, ಅಂಗಡಿ ಸಂಗಣ್ಣ ಕ್ಯಾಂಪಿನಲ್ಲಿ 34 ವರ್ಷ ವ್ಯಕ್ತಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಇವರೆಲ್ಲ ಅನ್ಯ ಊರಿಗೆ ತೆರಳಿದ್ದು ನೆಗಡಿ ಜ್ವರದ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಆಗಮಿಸಿದ್ದ ವೇಳೆ ಗಂಟಲು ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಪಾಸಿಟಿವ್ ಬಂದಿದ್ದು, ಸೋಂಕಿತರನ್ನು ನಗರದ ಕೊವೀಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಐದು ಪ್ರದೇಶಗಳನ್ನು ಸೀಲ್ಡೌನ್ ಮಾಡಿ ಕಂಟೈನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲೂ ಕೋವಿಡ್: ತಾಲೂಕಿನ ಆಗೋಲಿಯ 26 ವರ್ಷದ ಯುವಕ, ಶ್ರೀರಾಮನಗರದ 29 ವರ್ಷದ ವ್ಯಕ್ತಿ, ಆಚಾರನರಸಾಪೂರದಲ್ಲಿ 30 ವರ್ಷದ ವ್ಯಕ್ತಿ, ಹೊಸಳ್ಳಿ ಗ್ರಾಮದ 19 ವರ್ಷದ ಯುವಕ, ಶ್ರೀರಾಮನಗರದ 5ನೇ ವಾರ್ಡಿನ 17 ವರ್ಷದ ಬಾಲಕಿನೆ ಕೋವಿಡ್ ಪಾಸಿಟಿವ್ ಬಂದಿದೆ.
ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ, ಆರೋಗ್ಯ ಅಧಿಕಾರಿ ಡಾ| ಶರಣಪ್ಪ ಚಿಕೋಟಿ, ನಗರಸಭೆ ಪೌರಾಯುಕ್ತ ಶೇಖರಪ್ಪ ಇಳಿಗೇರ್, ಕಂದಾಯ ನಿರೀಕ್ಷಕರಾದ ಮಹೇಶ ದಲಾಲ್, ಮಂಜುನಾಥ ಹಿರೇಮಠ ಹಾಗೂ ಆಶಾಕಾರ್ಯಕರ್ತೆಯರು ಕೋವಿಡ್ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಮಾಹಿತಿ ಪಡೆದರು. ಸೋಂಕು ತಗುಲಿದ ವ್ಯಕ್ತಿಗಳ ಮನೆಯ ಸುತ್ತಲಿನ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ