![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
1603 ಕಾರ್ಮಿಕರು ಒಡಿಸ್ಸಾಗೆ
Team Udayavani, May 30, 2020, 6:29 AM IST
![1603 ಕಾರ್ಮಿಕರು ಒಡಿಸ್ಸಾಗೆ](https://www.udayavani.com/wp-content/uploads/2020/05/Kopala-tdy-1-26-620x372.jpg)
ಕೊಪ್ಪಳ: ರಾಯಚೂರು, ಕೊಪ್ಪಳ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ವಿವಿಧ ಇಟ್ಟಿಗೆ ಭಟ್ಟಿ, ಕೈಗಾರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಒಡಿಸ್ಸಾ ರಾಜ್ಯದ ಕಾರ್ಮಿಕರನ್ನು ಜಿಲ್ಲಾಡಳಿತ ವಿಶೇಷ ರೈಲಿನ ಮೂಲಕ ಶುಕ್ರವಾರ ತವರು ರಾಜ್ಯಕ್ಕೆ ಬೀಳ್ಕೊಟ್ಟಿತು.
ಓಡಿಸ್ಸಾ, ರಾಜಸ್ಥಾನ ಸೇರಿದಂತೆ ಅನ್ಯ ರಾಜ್ಯಗಳ ನೂರಾರು ಕಾರ್ಮಿಕರು ಜಿಲ್ಲೆಗೆ ದುಡಿಮೆ ಅರಸಿ ಆಗಮಿಸಿದ್ದರು. ಲಾಕ್ ಡೌನ್ನಿಂದಾಗಿ ಊರಿಗೆ ಹೋಗಲು ತುಂಬ ಪ್ರಯಾಸಪಟ್ಟಿದ್ದರು. ಇಂತಹ ಕಾರ್ಮಿಕರ ಸಮಸ್ಯೆ ಅರಿತ ಸರ್ಕಾರ ಅವರನ್ನು ತವರೂರಿಗೆ ಕಳುಹಿಸಲು ಅನುವು ಮಾಡಿಕೊಟ್ಟಿದೆ. ಶುಕ್ರವಾರ ವಿಶೇಷ ರೈಲಿನಲ್ಲಿ ಓಡಿಸ್ಸಾ ಮೂಲದ ಸುಮಾರು 1603 ಕಾರ್ಮಿಕರನ್ನು ಅವರ ರಾಜ್ಯಕ್ಕೆ ಬೀಳ್ಕೊಡಲಾಯಿತು.
ಕೊಪ್ಪಳ ಜಿಲ್ಲೆಯ 880, ಗದಗ ಜಿಲ್ಲೆಯ 39, ರಾಯಚೂರು ಜಿಲ್ಲೆಯ 246, ಚಿತ್ರದುರ್ಗ ಜಿಲ್ಲೆಯ 138, ಬಳ್ಳಾರಿ ಜಿಲ್ಲೆಯ 166 ಸೇರಿದಂತೆ ಒಟ್ಟು 1469 ಹಾಗೂ 134 ಮಕ್ಕಳು ಸೇರಿದಂತೆ ಒಟ್ಟು 1603 ಜನರು ತವರೂರಿಗೆ ತೆರಳಿದರು. ಕೊಪ್ಪಳ ಜಿಲ್ಲಾಡಳಿತವು ಊರಿಗೆ ತೆರಳುವ ಕಾರ್ಮಿಕರಿಗೆ ಎರಡು ಹೊತ್ತಿನ ಊಟದ ಪ್ಯಾಕೇಟ್, ನೀರು ಸೇರಿದಂತೆ ಖಾರದ ತಿನಿಸಿಗಳು ಸೇರಿದಂತೆ ಪ್ರತಿ ಒಬ್ಬ ವ್ಯಕ್ತಿಗೆ ವೆಚ್ಚಕ್ಕೆ 100 ರೂ. ನೀಡಿ ಅವರನ್ನು ಓಡಿಸ್ಸಾ ರಾಜ್ಯಕ್ಕೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿತು.
ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ, ಎಸ್ಪಿ ಜಿ. ಸಂಗೀತಾ, ಎಸಿ ಸಿ.ಡಿ. ಗೀತಾ ಸೇರಿದಂತೆ ಇತರರು ನಗರದ ರೈಲ್ವೇ ನಿಲ್ದಾಣದಲ್ಲಿ ಕಾರ್ಮಿಕರನ್ನು ಬೀಳ್ಕೊಟ್ಟರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.