ಕೊಪ್ಪಳದಲ್ಲಿ ಮತ್ತೆ ಕೋವಿಡ್ ಸ್ಪೋಟ : 22 ಜನರಿಗೆ ಸೋಂಕು ದೃಢ
Team Udayavani, Jun 25, 2020, 3:00 PM IST
ಕೊಪ್ಪಳ: ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಮತ್ತೆ ಮತ್ತೆ ಆರ್ಭಟಿಸುತ್ತಿದ್ದು ಗುರುವಾರ 22 ಜನರಿಗೆ ಸೋಂಕು ಇರುವುದು ದೃಢಪಟ್ಟಿವೆ. ಈ ಕುರಿತು ಜಿಲ್ಲಾಡಳಿತ ದೃಢಪಡಿಸಿದೆ.
ಜಿಲ್ಲಾಡಳಿತ ಸೋಂಕಿನ ಲಕ್ಷಣ ಇರುವ, ಅನ್ಯ ಜಿಲ್ಲೆ ರಾಜ್ಯದಿಂದ ಆಗಮಿಸಿದ ಜನರ, ಕ್ವಾರೆಂಟೆನ್ ಕೇಂದ್ರದಲ್ಲಿರುವ ಜನರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನೆ ಮಾಡುತ್ತಿದೆ. ಗುರುವಾರ ಮತ್ತೆ ಕೋವಿಡ್-19 ಆರ್ಭಟಿಸಿದ್ದು 22 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿವೆ.
ಕೊಪ್ಪಳ ಮೆಡಿಕಲ್ ಕಾಲೇಜಿನ ಲ್ಯಾಬ್ ನಲ್ಲಿ 18 ಜನರಿಗೆ ಸೋಂಕು ದೃಢಪಟ್ಟರೆ, ಹುಬ್ಬಳ್ಳಿ ಕಿಮ್ಸ್ ನ ಲ್ಯಾಬ್ ನಲ್ಲಿ 4 ಜನಕ್ಕೆ ಸೋಂಕು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಬುಧವಾರದ ವರೆಗೂ 44 ಜನರಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರ ಮತ್ತೆ 22 ಜನರಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ಸಾರ್ವಜನಿಕರು ಎಚ್ಚರದಿಂದ ಇರಬೇಕು. ಐಎಲ್ಐ ಪ್ರಕರಣದಲ್ಲಿ ಸೋಂಕಿನ ಮೂಲ ಪತ್ತೆ ಹಚ್ಚುವುದೇ ಸಾಹಸವಾಗಿದೆ. ಆದ್ದರಿಂದ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ಮುಖಕ್ಕೆ ಮಾಸ್ಕ್ ಧರಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ