30 ಸಾವಿರ ಎಕರೆ ನೀರಾವರಿ ಭಾಗ್ಯ
Team Udayavani, Nov 30, 2017, 3:09 PM IST
ಕೊಪ್ಪಳ: ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಏತ ನೀರಾವರಿ ಯೋಜನೆಯಡಿ ಒಟ್ಟು 30 ಸಾವಿರ ಎಕರೆ ಪ್ರದೇಶ ನೀರಾವರಿ ಸೌಲಭ್ಯ ಪಡೆಯಲಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಡೊಂಬರಹಳ್ಳಿ ಗ್ರಾಮದಲ್ಲಿ ಬುಧವಾರ 80ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ 3 ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಾದ ಸಿಂಗಟಾಲೂರ ಏತ ನೀರಾವರಿ ಯೋಜನೆ, ಅಳವಂಡಿ-ಬೇಟಗೇರಿ ಏತ ನೀರಾವರಿ ಯೋಜನೆ ಹಾಗೂ 180 ಕೋಟಿ ರೂ. ಅನುದಾನದ ನವಲಕಲ್-ಬಹದ್ದೂರ ಬಂಡಿ ಏತ ನೀರಾವರಿ ಯೋಜನೆಗಳ ಮೂಲಕ ಕೊಪ್ಪಳ ಕ್ಷೇತ್ರದ ಒಣ ಬೇಸಾಯದ 30 ಸಾವಿರ ಎಕರೆಗೆ ನೀರಾವರಿ ಭಾಗ್ಯ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಮೆಡಿಕಲ್ ಕಾಲೇಜು, ತಳಕಲ್ಗೆ ಇಂಜಿನಿಯರಿಂಗ್ ಕಾಲೇಜು ಮಂಜೂರು ಮಾಡಿ ಕೊಪ್ಪಳ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.
ತುಂಗಭದ್ರಾ ಹಿನ್ನೀರಿನಿಂದ ಕ್ಷೇತ್ರದ ಎಲ್ಲ ಕೆರೆಗೆ ನೀರು ತುಂಬಿಸಲಾಗುವುದು. ಸರಣಿ ಪಿಕಪ್ ಹಾಗೂ ಬ್ರಿಜ್ ಕಂ ಬ್ಯಾರೇಜ್ನಿಂದ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದ್ದು, ಬರುವ ದಿನಗಳಲ್ಲಿ ಎಲ್ಲ ಹಳ್ಳಗಳಲ್ಲಿ ಕೆರೆ ನಿರ್ಮಿಸಿ ನೀರು ನಿಲ್ಲಿಸುವ ಪ್ರಯತ್ನ ಮಾಡಲಾಗುವುದು. ಕೃಷಿಗೆ ಟುವಟಿಕೆಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ಕ್ಷೇತ್ರದಲ್ಲಿ 8-10 ಮೊರಾರ್ಜಿ ವಸತಿ ಶಾಲೆ ಮತ್ತು
ವಿದ್ಯಾರ್ಥಿಗಳ ಹಾಸ್ಟೇಲ್ ನಿರ್ಮಾಣ ಮಾಡಲಾಗಿದೆ. ಜನೆವರಿಯಿಂದ 25 ಸಾವಿರ ಪಡಿತರ ಫಲಾನುಭವಿಗಳಿಗೆ ಅನಿಲ ಭಾಗ್ಯದ ಯೋಜನೆಯ ಮೂಲಕ ಉಚಿತ ಗ್ಯಾಸ್ ಹಾಗೂ ಸಿಲಿಂಡರ್ ವಿತರಣೆ ಮಾಡಲಾಗುವುದು. ಕಾರ್ಮಿಕರಿಗಾಗಿ 2 ಲಕ್ಷ ರೂ. ವರೆಗೆ ವಿಮೆ ಹಾಗೂ ಕಾರ್ಮಿಕರ ಅಪಘಾತದಿಂದ ಸಾವನ್ನಪ್ಪಿದರೆ 5 ಲಕ್ಷ ರೂ. ಸಹಾಯಧನ ನೀಡುವ ಅಂಬೇಡ್ಕರ ಸಹಾಯ ಹಸ್ತದ ಯೋಜನೆ ಜಾರಿಯಾಗಿದೆ ಎಂದರು. ರಾಜ್ಯ ಸರಕಾರದ ಸಾಧನೆ ಕಂಡು ವಿರೋಧ ಪಕ್ಷದ ನಾಯಕರಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ ಅಭಿವೃದ್ಧಿಗೆ ಸಹಕಾರ ನೀಡುವುದನ್ನು ಬಿಟ್ಟು ಅನಗತ್ಯ ವಿಚಾರಗಳಲ್ಲಿ ವಿವಾದ ಸೃಷ್ಟಿಸುತ್ತಾ ಜನರಲ್ಲಿ ತಪ್ಪು ಭಾವನೆ ಮೂಡಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಭೂಮರೆಡ್ಡಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಎಚ್.ಎಲ್ .ಹಿರೇಗೌಡ್ರ, ನಗರಸಭೆ ಸದಸ್ಯ ಮುತ್ತುರಾಜ ಕುಷ್ಟಗಿ, ತಾಪಂ ಸದಸ್ಯ ನಿಂಗಪ್ಪ ಯತ್ನಟ್ಟಿ, ಮುಖಂಡರಾದ ಶಂಕರಗೌಡ್ರ ಹಿರೇಗೌಡ್ರ, ಕೃಷ್ಣಾ ಗಲಬಿ, ಬಸವರೆಡ್ಡಿ ಕರೆಡ್ಡಿ, ಮುದೇಗೌಡ್ರ ಬೇಳೂರು, ರಾಮನಗೌಡ್ರ, ಯಲ್ಲನಗೌಡ್ರ ಅಂದಪ್ಪ ನಾಯಕ, ನಾಗರಾಜ ಹುರಕಡ್ಲಿ, ಚಿನ್ನಪ್ಪ ಅಂಗಡಿ, ಕೊಟ್ರಯ್ಯ ಹಿರೇಮಠ, ನಂದೀಶಗೌಡ, ರಾಜಪ್ಪ ಗುಡ್ಲಾನೂರ, ಉಮಾ ಜನಾದ್ರಿ, ವಕ್ತಾರ ಅಕºರ ಪಾಷಾ
ಪಲ್ಟನ ಉಪಸ್ಥಿತರಿದ್ದರು.
ಮುಂಬರುವ ದಿನಗಳಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ ಬೆಂಬಲಿಸುವುದು ಶತಸಿದ್ಧ. ಬಿಜೆಪಿ-ಜೆಡಿಎಸ್ ಪಕ್ಷಗಳು ಸರಕಾರ ರಚಿಸುವ ಹಗಲುಗನಸು ಕಾಣುತ್ತಿವೆ. ಮುಂದಿನ ಬಾರಿಯೂ ಕಾಂಗ್ರೆಸ್ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ.
ರಾಘವೇಂದ್ರ ಹಿಟ್ನಾಳ, ಶಾಸಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ