ನೆರೆ ಸಂತ್ರಸ್ತರಿಗೆ ಕುಷ್ಟಗಿಯಿಂದ 5 ಲಕ್ಷ ರೊಟ್ಟಿ

•ನೆರೆ ಸಂತ್ರಸ್ತರ ನೆರವಿಗೆ ಮುಂದಾದ ಸಂಘ-ಸಂಸ್ಥೆಗಳು•ತಹಶೀಲ್ದಾರ್‌ ನೇತೃತ್ವದಲ್ಲಿ ಸಭೆ

Team Udayavani, Aug 11, 2019, 1:05 PM IST

kopala-tdy-1

ಕುಷ್ಟಗಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಕಚೇರಿಯಲ್ಲಿ ತುರ್ತು ಸಭೆ ನಡೆಯಿತು.

ಕುಷ್ಟಗಿ: ನೆರೆ ಪೀಡಿತ ಉಕ ಪ್ರದೇಶಕ್ಕೆ ತಕ್ಷಣದ ನೆರವಿನ ಹಿನ್ನೆಲೆಯಲ್ಲಿ 5 ಲಕ್ಷ ರೊಟ್ಟಿ, 2.5 ಕ್ವಿಂಟಲ್ ಶೇಂಗಾ, ಕಡಲೆ ಪುಡಿ ಸೇರಿದಂತೆ ಔಷಧ, ಬಟ್ಟೆ, ಅಗತ್ಯ ಸಾಮಾಗ್ರಿಗಳನ್ನು ತಾಲೂಕು ವತಿಯಿಂದ ಕಳುಹಿಸಿಕೊಡಲು ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ್‌ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಉ-ಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೆರೆ ಹಾವಳಿಯಿಂದ ಸಂಕಷ್ಟದ ಪರಿಸ್ಥಿತಿಯಲ್ಲಿ ಇರುವವರ ನೆರೆವಿಗೆ ಮುಂದಾಗಲು ಸಂಘ ಸಂಸ್ಥೆ ಹಾಗೂ ವರ್ತಕರ ಹಾಗೂ ಸಾರ್ವಜನಿಕರು ಭಾಗವಹಿಸಿದ್ದ ಸಭೆಯಲ್ಲಿ ಕುಷ್ಟಗಿ ತಾಲೂಕಿನಿಂದ 5 ಲಕ್ಷ ರೊಟ್ಟಿಗಳನ್ನು ಗ್ರಾಮಸ್ಥರಿಂದ ತಯಾರಿಸಲು ಆಯಾ ಹೋಬಳಿ ನಾಡ ತಹಶೀಲ್ದಾರ್‌ಗೆ ಸೂಚಿಸಲಾಗಿದೆ. ಈ ದಿನ ಸಂಜೆ ಆಯಾ ಗ್ರಾಮಗಳಲ್ಲಿ ಡಂಗುರ ಸಾರಲು ಗ್ರಾಮ ಸಹಾಯಕರಿಗೆ ತಿಳಿಸಲಾಗಿದೆ. ತಹಶೀಲ್ದಾರ್‌ ಕಚೇರಿಯಲ್ಲಿ ರೊಟ್ಟಿ ಸ್ವೀಕಾರ ಕೇಂದ್ರ ರವಿವಾರದಿಂದ ಆರಂಭಿಸುತ್ತಿರುವುದಾಗಿ ತಿಳಿಸಿದರು. ರೊಟ್ಟಿ ಮಾಡಿಕೊಡಲು ಸ್ವ ಸಹಾಯ ಗುಂಪು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ, ಸ್ತ್ರೀ ಶಕ್ತಿ ಗುಂಪುಗಳಿಗೆ, ರೊಟ್ಟಿ ತಯಾರಿಸುವವರಿಗೆ ರೊಟ್ಟಿ ಮಾಡಿಕೊಡಲು ಹೇಳಿರುವುದಾಗಿ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಮಾತನಾಡಿ, ತಾಲೂಕಿನಲ್ಲಿ ಬಿಸಿಎಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ 25 ವಸತಿ ನಿಲಯಗಳಿವೆ. ಇವೆರಡೂ ಸೇರಿ ಎರಡೂವರೆ ಕ್ವಿಂಟಲ್ ಶೇಂಗಾ, ಕಡಲೆ ಪುಡಿ ಮಾಡಿಸಿ ಕೊಡುವ ಜವಾಬ್ದಾರಿವಹಿಸಿಕೊಂಡರು. ತಹಶೀಲ್ದಾರ್‌ ಕೆ.ಎಂ. ಗುರುಬಸವರಾಜ್‌ ಅವರು ರೊಟ್ಟಿ ಹಾಗೂ ಶೇಂಗಾ, ಕಡಲೆ ಪುಡಿಯನ್ನು ವಾರದವರೆಗೂ ಇಡಬಹುದು. ಹೀಗಾಗಿ ತಕ್ಷಣವೇ ಕಳುಹಿಸಿಕೊಡುವ ವ್ಯವಸ್ಥೆಗೆ ಕ್ರಮ ಕೈಗೊಂಡಿದ್ದು, ಸೋಮವಾರದ ವೇಳೆಗೆ‌ ವಾಹನಲ್ಲಿ ರೊಟ್ಟಿ, ಶೇಂಗಾ, ಕಡಲೆ ಸೇರಿದಂತೆ ಸಂಗ್ರಹವಾಗಿರುವ ಬಟ್ಟೆ, ಬ್ಲಾಂಕೆಟ್, ಔಷಧಿಗಳನ್ನು ಕಳುಹಿಸಲಾಗುವುದು. ಈ ಲಾರಿಯಲ್ಲಿ ಕುಷ್ಟಗಿಯ 25 ಸ್ವಯಂ ಪ್ರೇರಿತ ಸ್ವಯಂ ಸೇವಕರನ್ನು ಕಳುಹಿಸಲು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಅವರಿಗೆ ಗುರುತಿನ ಚೀಟೆ ನೀಡಲು ಯೋಜಿಸಲಾಗಿದೆ ಎಂದರು.

ತಾಲೂಕಿನ ಮಠಗಳಿಗೆ ಮಾದಲಿ ತಯಾರಿಸಿ ಕೊಡಲು ಕೇಳಿಕೊಳ್ಳುವುದಾಗಿ ತಿಳಿಸಿದ ಅವರು, ಸ್ಥಳೀಯ ಔಷಧ ಅಂಗಡಿಯವರು ಅಗತ್ಯ ಔಷಧಿ, ಮಾತ್ರೆ, ಸ್ಥಳೀಯ ಕಿರಾಣಿ ವರ್ತಕರು, ಅಕ್ಕಿ, ಬೇಳೆ, ಬೆಲ್ಲ, ರವೆ, ಗೋಧಿ ಹಿಟ್ಟು ಇತರೇ ದಿನಸಿ ಸಂಗ್ರಹಿಸಿಕೊಡುವುದಾಗಿ ತಿಳಿಸಿರುವುದಾಗಿ ಹೇಳಿದರು. ಪ್ರಾಚಾರ್ಯ ಟಿ. ಬಸವರಾಜ್‌, ತಾಜುದ್ದೀನ್‌ ದಳಪತಿ, ಕರವೇ ಜಿಲ್ಲಾಧ್ಯಕ್ಷರಾದ ಬಸನಗೌಡ ಪೊಲೀಸಪಾಟೀಲ, ಅಜ್ಜಪ್ಪ ಕರಡಕಲ್, ಸಂಗೊಳ್ಳಿ ರಾಯಣ್ಣ ಯುವಕ ಸಂಘದ ಮಂಜು ನಾಲಗಾರ, ನಬಿಸಾಬ್‌ ದೋಟಿಹಾಳ, ಭರತರಾಜ್‌ ತುರಕಾಣಿ, ಕಿರಣ ತುರಕಾಣಿ, ವರ್ತಕರ ಸಂಘದ ರಹೀಮಸಾಬ್‌ ಮುಲ್ಲಾ ಇತರರಿದ್ದರು.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.