ಮಳೆಗೆ 50 ಸಾವಿರ ಎಕರೆ ಬೆಳೆ ಹಾನಿ

ಗಂಗಾವತಿ ಭಾಗದಲ್ಲಿನ ಭತ್ತವೇ ಹೆಚ್ಚಿನ ಪ್ರಮಾಣದಲ್ಲಿ ನೆಲಕ್ಕೆ ಉರುಳಿದೆ.

Team Udayavani, Nov 22, 2021, 7:05 PM IST

ಮಳೆಗೆ 50 ಸಾವಿರ ಎಕರೆ ಬೆಳೆ ಹಾನಿ

ಕೊಪ್ಪಳ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಭತ್ತ, ಈರುಳ್ಳಿ ಸೇರಿ ಇತರೆ ಬೆಳೆಯು ಹಾನಿಗೀಡಾಗಿದ್ದು, ಇದರಿಂದ ರೈತರು ಚಿಂತಾಕ್ರಾಂತರಾಗಿದ್ದಾರೆ. ಕೃಷಿ, ತೋಟಗಾರಿಕೆ ಸೇರಿ ಒಟ್ಟಾರೆ 50 ಸಾವಿರ ಎಕರೆ ಪ್ರದೇಶ ಬೆಳೆಯು ಮಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಇನ್ನೂ ಬೆಳೆಹಾನಿಯ ಸಮೀûಾ ಕಾರ್ಯ ಮುಂದುವರೆದಿದೆ.

ಜಿಲ್ಲೆಯಲ್ಲಿ ಹಿಂಗಾರು ಹಂಗಾಮು ಮಳೆಗಳು ಉತ್ತಮವಾದವು ಎಂದು ನಂಬಿ ಖುಷಿಯಲ್ಲಿಯೇ ಇದ್ದ ರೈತ ಸಮೂಹಕ್ಕೆ ಅಕಾಲಿಕ ಮಳೆಗಳು ತೀವ್ರ ಸಂಕಷ್ಟವನ್ನೇ ತಂದಿಟ್ಟಿವೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯು ಸುರಿಯುತ್ತಿರುವುದರಿಂದ ಹೊಲದಲ್ಲಿಯೇ ಬೆಳೆಯು ನೆಲಕ್ಕುರಳಿ ಅಪಾರ ನಷ್ಟ ಉಂಟಾಗುವಂತೆ ಮಾಡಿದೆ.

ಅದರಲ್ಲೂ ಗಂಗಾವತಿ ಭಾಗದಲ್ಲಿನ ಭತ್ತವೇ ಹೆಚ್ಚಿನ ಪ್ರಮಾಣದಲ್ಲಿ ನೆಲಕ್ಕೆ ಉರುಳಿದೆ. ಫಸಲು ಕೈಗೆ ಬರುವ ಹಂತದಲ್ಲಿಯೇ ಮಳೆಯಾಗುತ್ತಿರುವುದರಿಂದ ಭತ್ತವು ನೆಲಕ್ಕುರುಳಿ ಅಲ್ಲಿಯೇ ಸಸಿ ನಾಟುತ್ತಿದೆ. ಇನ್ನು ಕೊಪ್ಪಳ ಹಾಗೂ ಯಲಬುರ್ಗಾ ಭಾಗದಲ್ಲಿ ಈರುಳ್ಳಿ,
ಮೆಣಸಿನಕಾಯಿ, ಮೆಕ್ಕೆಜೋಳದ ಬೆಳೆಯ ಪರಿಸ್ಥಿತಿಯನ್ನಂತೂ ಹೇಳತೀರದಾಗಿದೆ.

ಬೆಳೆ ಹಾನಿಯ ಕುರಿತು ಜಿಲ್ಲಾಡಳಿತವು ನಿರಂತರ ನಿಗಾವಹಿಸಿದ್ದು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಬೆಳೆ ಹಾನಿ ಸಮೀûಾ ವರದಿ ತೀವ್ರವಾಗಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆಯೂ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅ ಧಿಕಾರಿಗಳ ತಂಡ ರೈತರ ಜಮೀನಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದ್ದು, ಕೃಷಿ ಇಲಾಖೆಯಡಿ 18500 ಹೆಕ್ಟೇರ್‌ ಪ್ರದೇಶದಷ್ಟು ಬೆಳೆ ಹಾನಿಯಾಗಿದ್ದರೆ ತೋಟಗಾರಿಕೆಯಡಿ 1400 ಹೆಕ್ಟೇರ್‌ ಪ್ರದೇಶವು ಹಾನಿಯಾಗಿದೆ. ಒಟ್ಟಾರೆ ಸೇರಿ 50 ಸಾವಿರ ಎಕರೆ ಪ್ರದೇಶವು ಹಾನಿಯಾಗಿರುವ ಕುರಿತು ಪ್ರಾಥಮಿಕ ವರದಿಯು ಜಿಲ್ಲಾಡಳಿತಕ್ಕೆ ಲಭ್ಯವಾಗಿದೆ.

ವಿವಿಧೆಡೆ ಮನೆಗಳೂ ಹಾನಿ: ಜಿಲ್ಲೆಯಲ್ಲಿ ಕೇವಲ ಬೆಳೆಯಷ್ಟೇ ಹಾನಿಯಾಗಿದೆಯಲ್ಲದೇ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳು ರಸ್ತೆಗಳೂ ಹಾನಿಗೀಡಾಗಿವೆ. ಈ ಕುರಿತು ಗ್ರಾಪಂಗಳಿಗೆ ಜಿಲ್ಲಾಡಳಿತ ಸೂಚಿಸಿದ್ದು, ಸಹಾಯವಾಣಿಯನ್ನೂ ಆರಂಭಿಸಿದೆ. 5ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು ಒಂದೇ ದಿನದಲ್ಲಿ ಮಾಹಿತಿ ದೊರೆತಿದ್ದು, ಆಯಾ ಗ್ರಾಪಂ ವ್ಯಾಪ್ತಿಯ ಗ್ರಾಮ ಲೆಕ್ಕಾ ಧಿಕಾರಿಗಳಿಗೆ ಮನೆ ಹಾನಿಯಾದ ಕುರಿತು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆಯೂ ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಅ ಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರ ವಿವರ ಸೇರಿ ಇತರೆ ಮಾಹಿತಿ ಸಂಗ್ರಹಿಸುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.