ಅಜ್ಜನ ಜಾತ್ರೆಗೆ 72 ಕಿ.ಮೀ. ನಡೆದು ಬಂದ ಭಕ್ತರು
Team Udayavani, Jan 17, 2022, 10:46 PM IST
ಕೊಪ್ಪಳ: ನಾಡಿನ ಪ್ರಸಿದ್ಧ ಶ್ರೀಗವಿಸಿದ್ದೇಶ್ವರ ಜಾತ್ರೆಯು ಕೋವಿಡ್ ಉಲ½ಣದ ಹಿನ್ನೆಲೆಯಲ್ಲಿ ರದ್ದಾಗಿದ್ದರೂ ನಾಡಿನ ವಿವಿಧ ಭಾಗಗಳಿಂದ ಕೊಪ್ಪಳದ ಗವಿಮಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿಲ್ಲ. ಈ ಮಧ್ಯೆ ಗದಗ ಜಿಲ್ಲೆಯ ರೋಣದ ನಾಲ್ವರು ಭಕ್ತರು 72 ಕಿ.ಮೀ. ಪಾದಯಾತ್ರೆ ಮೂಲಕ ಶ್ರೀಮಠಕ್ಕೆ ಆಗಮಿಸಿ ಶ್ರೀಗಳ ದರ್ಶನ ಪಡೆದು ಗಮನ ಸೆಳೆದಿದ್ದಾರೆ.
ರೋಣದ ವೀರೇಶ ಬಾಲೊಳ್ಳಿ, ಭೀಮನಗೌಡ್ರ ಲಿಂಗನಗೌಡ್ರ, ಕಿರಣ್ ಗುರುಬಸತ್ತಿನಮಠ, ಬಸಯ್ಯ ಗುರುಬಸತ್ತಿಮಠ ಅವರು 72 ಕಿ.ಮೀ. ಕಾಲ್ನಡಿಗೆಯಲ್ಲೇ ಗವಿಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದರು. ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ರೋಣದಿಂದ ಹೊರಟ ಇವರು ಗವಿಸಿದ್ದೇಶ್ವರ ಸ್ವಾಮಿಗಳ ನಾಮಸ್ಮರಣೆ ಮಾಡುತ್ತಲೇ ಪಾದಯಾತ್ರೆ ಆಗಮಿಸಿ ರವಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಶ್ರೀಮಠಕ್ಕೆ ತಲುಪಿದರು. ದಾರಿಯುದ್ದಕ್ಕೂ ಶ್ರೀಗಳ ಸೇವೆ, ಸಮಾಜಮುಖೀಕಾರ್ಯ,ಧಾರ್ಮಿಕಕಾರ್ಯ ನೆನೆಯುತ್ತಾ ನಾಮಸ್ಮರಣೆ ಮಾಡುತ್ತಲೇ ಆಗಮಿಸಿ ಶ್ರೀಗಳ ದರ್ಶನ ಪಡೆದರಲ್ಲದೇ, ಕತೃ ಗದ್ದುಗೆಯ ದರ್ಶನ ಪಡೆದು ಸಂಕಲ್ಪ ಈಡೇರಿಸಿದರು. ಎರಡು ವರ್ಷಗಳಿಂದ ಜಗತ್ತಿಗೆ ಆವರಿಸಿರುವ ಕೊರೊನಾ ಸೋಂಕಿನಿಂದಾಗಿ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ.
ಕೊರೊನಾ ಅಬ್ಬರದ ಮಧ್ಯೆಯೂ ಶ್ರೀಮಠಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ. ಎತ್ತಿನ ಬಂಡೆಯಲ್ಲಿ, ಟ್ರಾÂಕ್ಟರ್, ಟಂಟಂ, ಆಟೋ ಸೇರಿ ವಿವಿಧ ವಾಹನಗಳಲ್ಲಿ ದವಸ, ಧಾನ್ಯದೊಂದಿಗೆ ಆಗಮಿಸಿ ಶ್ರೀಮಠಕ್ಕೆ ಅರ್ಪಿಸಿ ತಮ್ಮದೇ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ ವರ್ಷ ಕೋವಿಡ್ ಇದ್ದರೂ ಮಠಕ್ಕೆ ಆಗಮಿಸಿ ಭಕ್ತಿಯ ಸೇವೆ ಸಲ್ಲಿಸಿದ್ದರು. ಈ ಬಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ cಳದಿಂದಾಗಿ ಜಾತ್ರೆಯ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಿದೆ. ಆದರೆ ಧಾರ್ಮಿಕಕಾರ್ಯಕ್ರಮಗಳು ಮಠದಲ್ಲೇ ಸರಳ ಹಾಗೂ ಸಾಂಕೇತಿಕವಾಗಿ ನಡೆಯುತ್ತಿದೆ. ಇದ್ಯಾವುದನ್ನು ಲೆಕ್ಕಿಸದೇ ಸದ್ಭಕ್ತರು ಮಠಕ್ಕೆ ಕಾಲ್ನಡಿಗೆಯ ಪಾದಯಾತ್ರೆ ಆಗಮಿಸಿ ತಮ್ಮದೇ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ