ಆಶಾಗಳಿಂದ ಶೇ.97.5 ಮನೆ ಸರ್ವೇ


Team Udayavani, May 5, 2020, 4:20 PM IST

ಆಶಾಗಳಿಂದ ಶೇ.97.5 ಮನೆ ಸರ್ವೇ

ಸಾಂದರ್ಭಿಕ ಚಿತ್ರ

ಕೊಪ್ಪಳ: ಜಿಲ್ಲಾಡಳಿತವು ಕೋವಿಡ್ 19 ನಿಯಂತ್ರಣಕ್ಕಾಗಿ ಪೂರ್ವ ತಯಾರಿಯಾಗಿ ಜಿಲ್ಲೆಯಲ್ಲಿ ಪ್ರತಿ ಮನೆಯನ್ನೂ ಸರ್ವೇ ಮಾಡಿಸಿದೆ. ಆಶಾ ಕಾರ್ಯಕರ್ತೆಯರು ಶ್ರಮವಹಿಸಿ ಕೇವಲ 17 ದಿನಗಳಲ್ಲಿ ಜ್ವರ, ನೆಗಡಿ, ಕೆಮ್ಮು, ಕಿಡ್ನಿ ಸಮಸ್ಯೆ ಸೇರಿ ಇತರೆ ತೊಂದರೆಗಳಿಂದ ಬಳಲುತ್ತಿರುವ ಜನರ ಸಂಖ್ಯೆ ಕ್ರೋಢಿಕರಣಕ್ಕಾಗಿ 3,13,662 ಮನೆಗಳ ಶೇ.97.5 ರಷ್ಟು ಸರ್ವೇ ಪೂರ್ಣಗೊಳಿಸಿ ಗಮನ ಸೆಳೆದಿದ್ದಾರೆ.

ಜಿಲ್ಲಾಡಳಿತವು ಕೋವಿಡ್ 19  ನಿಯಂತ್ರಣಕ್ಕಾಗಿ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡು ರಾಜ್ಯದಲ್ಲಿಯೇ ಗಮನ ಸೆಳೆದಿದೆ. ಜಿಲ್ಲೆಯಲ್ಲಿನ ಕೊರೊನಾಗೆ ನೆಲೆಯೂರದಂತೆ ಮಾಡಲು ಪ್ರತಿಯೊಂದು ಮನೆಯನ್ನ ಸರ್ವೇ ಮಾಡಿಸಿ ದತ್ತಾಂಶಗಳನ್ನು ಸಂಗ್ರಹಿಸಿಕೊಂಡಿದೆ. ಯಾವುದೇ ಸಂದರ್ಭದಲ್ಲೂ ಕೋವಿಡ್ 19  ಸೇರಿ ಇತರೆ ತೊಂದರೆ ಉಲ್ಬಣಿಸಿದರೂ ಆಯಾ ಕುಟುಂಬದ ಮೇಲೆ ಹೆಚ್ಚು ನಿಗಾ ಇರಿಸಲು ಜಿಲ್ಲಾಡಳಿತಕ್ಕೆ ಸೂಕ್ತ ಮಾಹಿತಿಯೂ ದೊರೆತಂತಾಗಿದೆ.

ಕೆಮ್ಮು, ನೆಗಡಿ ಇದ್ದವರ ಮಾಹಿತಿ ಸಂಗ್ರಹ: ಇನ್ನೂ ಸರ್ವೇ ವೇಳೆ ಜಿಲ್ಲೆಯಲ್ಲಿ 10 ದಿನದೊಳಗೆ ಕೆಮ್ಮು ನೆಗಡಿ, ಜ್ವರ, ಉಸಿರಾಟದಿಂದ ಬಳಲುವ 1557 ಜನ, 10 ದಿನ ಮೇಲ್ಪಟ್ಟವರ 1692 ಜನರ ಸರ್ವೇ ಮಾಡಿದೆ. ಇದಲ್ಲದೇ ಒಟ್ಟು ಗರ್ಭಿಣಿಯರ 15246, ಒಟ್ಟು ಬಾಣಂತಿಯರು-11,899, 5 ವರ್ಷದೊಳಗಿನ ಮಕ್ಕಳು ಒಟ್ಟು-139407, 5ರಿಂದ 10 ವರ್ಷದೊಳಗಿನ ಒಟ್ಟು ಮಕ್ಕಳು-1,22,617, 60 ವರ್ಷ ಮೇಲ್ಪಟ್ಟವರು -99,231, ಸಕ್ಕರೆ ಕಾಯಿಲೆ ಇರುವ-21,547 ಜನ, ಬಿಪಿ, ಹೃದಯ ಸಂಬಂಧಿ ಕಾಯಿಲೆ ಇರುವ-18,688 ಜನ, ಟಿಬಿ-1721, ಅಸ್ತಮಾ, ಶ್ವಾಸಕೋಶದ ಕಾಯಿಲೆಯಿಂದ ಬಳಲುವವರು ಒಟ್ಟು-2859, ಕಿಡ್ನಿ ಸಮಸ್ಯೆ- 451 ಜನ, ಕ್ಯಾನ್ಸರ್‌ನಿಂದ ಬಳಲುವ-1,683 ಜನರ ಕುರಿತು ಮಾಹಿತಿ ಸಂಗ್ರಹ ಮಾಡಿದ್ದಾರೆ.

ಅನ್ಯ ಜಿಲ್ಲೆ, ರಾಜ್ಯದಿಂದ ಬಂದವರು: ಇನ್ನೂ ಅನ್ಯ ಜಿಲ್ಲೆ ಹಾಗೂ ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸಿದವರ ಕುರಿತು ಜಿಲ್ಲಾಡಳಿತ ಸರ್ವೇ ನಡೆಸಿದ್ದು, 36,618 ಜನ ಆಗಮಿಸಿದ್ದಾರೆ. ಈ ಪೈಕಿ ಕೊಪ್ಪಳ ತಾಲೂಕಿನ-5819, ಕುಷ್ಟಗಿ-11,606, ಗಂಗಾವತಿ ತಾಲೂಕಿನ-11,700, ಯಲಬುರ್ಗಾ ತಾಲೂಕಿನ-7493 ಜನರು ಜಿಲ್ಲೆಗೆ ಆಗಮಿಸಿರುವ ಮಾಹಿತಿಯು ಸರ್ವೇ ವೇಳೆ ದಾಖಲಾಗಿದೆ.ಒಟ್ಟಾರೆ ಆಶಾ ಕಾರ್ಯಕರ್ತೆಯರು ಕೇವಲ 17 ದಿನಗಳಲ್ಲೇ ಜಿಲ್ಲೆಯಲ್ಲಿನ ವಿವಿಧ ಅಂಶಗಳ ಕುರಿತು ಸರ್ವೇ ಮಾಡಿ ಗಮನ ಸೆಳೆದಿದ್ದಾರೆ. ಈ ವರೆಗೂ ಶೇ. 97.5 ರಷ್ಟು ಸರ್ವೇ ಪೂರ್ಣಗೊಳಿಸಿದ್ದಾರೆಂದು ಜಿಲ್ಲಾಧಿಕಾರಿ ಸುನೀಲ್‌ ಕುಮಾರ ಅವರು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.