ಅನೈರ್ಮಲ್ಯ ಕಾರಣದಿಂದ ಹೆಚ್ಚುತ್ತಿದೆ ಡೆಂಗ್ಯೂ ಜ್ವರ: ಬಾಲಕ ಬಲಿ
Team Udayavani, Oct 18, 2019, 11:20 AM IST
ಗಂಗಾವತಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತಪಟ್ಟ ಘಟನೆ ತಾಲೂಕಿನ ಶ್ರೀ ರಾಮನಗರದಲ್ಲಿ ಜರುಗಿದೆ.
ಇಮ್ತಿಯಾಜ್ (11) ಮೃತಪಟ್ಟ ಬಾಲಕ. ಶ್ರೀರಾಮನಗರದ 2ನೇ ವಾರ್ಡಿನ ನಿವಾಸಿಯಾಗಿದ್ದಾರೆ. ತೀವ್ರ ಜ್ವರದ ಕಾರಣ ಶ್ರೀರಾಮನಗರದ ಸರಕಾರಿ ಆಸ್ಪತ್ರೆಗೆ ಬಾಲಕನನ್ನು ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದ ಕಾರಣ ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಗುರುವಾರ ರಾತ್ರಿ ಇಮ್ತಿಯಾಜ್ ಮೃತಪಟ್ಟಿದ್ದಾನೆ.
ಅನೈರ್ಮಲ್ಯ ಕಾರಣ:ಶ್ರೀರಾಮನಗರದ ಹಾಗು ಸುತ್ತಲಿನ ಊರುಗಳಲ್ಲಿ ಕಳೆದ ಹಲವು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದೆ. ಜತೆಗೆ ಇಡೀ ಗ್ರಾಮದಲ್ಲಿರುವ ಕೋಳಿ ಅಂಗಡಿ ತ್ಯಾಜ್ಯ ಎಲ್ಲೆಂದರಲ್ಲಿ ಎಸೆಯುವ ಮೂಲಕ ಅನೈರ್ಮಲ್ಯ ಉಂಟಾಗಿದ್ದು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಮಕ್ಕಳು ವೃದ್ದರಿಗೆ ಜ್ವರದ ಪ್ರಕರಣ ಹೆಚ್ಚಾಗಿದ್ದು ಪ್ರತಿ ದಿನ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಜನರು ದಾಖಲಾಗುತ್ತಿದ್ದಾರೆ.
ಡೆಂಗ್ಯೂ ಜ್ವರದಿಂದ ಮೃತಪಟ್ಟ ಇಮ್ತೀಯಾಜ್ ನಿವಾಸಕ್ಕೆ ತಾ.ಪಂ ಸದಸ್ಯ ಮಹಮದ್ವರಫಿ, ಗ್ರಾ.ಪಂ.ಅಧ್ಯಕ್ಷ ಶ್ರೀ ನಿವಾಸ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಆರೋಗ್ಯ ಇಲಾಖೆ ಜತೆಗೂಡಿ ಜನರಿಗೆ ಜಾಗೃತಿ ಮೂಡಿಸಲಾಗುತ್ತದೆ. ಜ್ವರಕ್ಕೆ ಹಲವು ಜನರು ಚಿಕಿತ್ಸೆ ಪಡೆಯುತ್ತಿದ್ದು ಇನ್ನಷ್ಟು ಔಷಧಿ ಒದಗಿಸುವಂತೆ ಕೋರಲಾಗುತ್ತದೆ ಎಂದು ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್