ಮೂಲ ಸೌಲಭ್ಯವಿಲ್ಲದೇ ಭಕ್ತರ ಪರದಾಟ


Team Udayavani, Sep 27, 2019, 2:27 PM IST

kopala-tdy-1

ಕನಕಗಿರಿ: ಪಟ್ಟಣದ ಇತಿಹಾಸ ಪ್ರಸಿದ್ಧ ಕನಕಾಚಲಪತಿ ದೇವಸ್ಥಾನಕ್ಕೆ ನಿತ್ಯ ಹಾಗೂ ಅಮವಾಸ್ಯೆ, ಹುಣ್ಣಿಮೆ, ಹಬ್ಬ ಹರಿದಿನಗಳಲ್ಲಿ ಆಪಾರ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ದೇವಸ್ಥಾನದಲ್ಲಿ ಮೂಲಭೂತ ಸೌಲಭ್ಯವಿಲ್ಲದ ಕಾರಣ ಭಕ್ತರು ಪರದಾಡುವಂತಾಗಿದೆ.

ದೇವಸ್ಥಾನವು ಮುಜರಾಯಿ ಇಲಾಖೆ ಎ ವರ್ಗಕ್ಕೆ ಸೇರಿದರು ಕೂಡ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ದೇವಸ್ಥಾನದಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ, ಸ್ನಾನ ಗೃಹಗಳು, ವಾಹನ ನಿಲುಗಡೆ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲ. ಇದರಿಂದ ದೇವಸ್ಥಾನಕ್ಕೆ ಬರುವ ಭಕ್ತರ ಪರಿಸ್ಥಿತಿ ಹೇಳತೀರದಾಗಿದೆ. ದೇವಸ್ಥಾನಕ್ಕೆ ಉತ್ತಮವಾದ ಆದಾಯವಿದ್ದು, ಬರುವ ಆದಾಯ ಮಾತ್ರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಿಂಗಳ ವೇತನಕ್ಕೆ ಸರಿ ಹೋಗುತ್ತಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿ ಕಾರಿಗಳು ಮಾತ್ರ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಗಮನ ಹರಿಸುತ್ತಿಲ್ಲ ಎನ್ನುವುದು ಸಾರ್ವಜನಿಕರ ಆರೋಪ.

ಇನ್ನು ಜಾತ್ರೆ ಸಮಯದಲ್ಲಿ ಮಾತ್ರ ಶಾಸಕರ ಅಧ್ಯಕ್ಷತೆಯಲ್ಲಿ ತಾತ್ಕಾಲಿಕವಾಗಿ ಮೂಲ ಸೌಲಭ್ಯಗಳನ್ನು ಒದಗಿಸಲು ಆದ್ಯತೆ ನೀಡಲಾಗುತ್ತದೆ. ಆದರೆ ಪ್ರತಿ ನಿತ್ಯ ಬರುವ ಭಕ್ತರಿಗೆ ಶೌಚಾಲಯವಿಲ್ಲದೇ ಪರದಾಡುವಂತಾಗಿದೆ. ದೇವಸ್ಥಾನಕ್ಕೆ ಬರುವ ಆದಾಯದಲ್ಲೇ ಸೌಲಭ್ಯ ಒದಗಿಸುವುದನ್ನು ಬಿಟ್ಟು ಅನುದಾನಕ್ಕಾಗಿ ದೇವಸ್ಥಾನದ ಸಿಬ್ಬಂದಿ ಕಾಯುತ್ತಿದ್ದಾರೆ.

ಏನಿದೂ ಕಾಮಗಾರಿ: ಕನಕಾಚಲಪತಿ ದೇವಸ್ಥಾನದ ಸುತ್ತಲೂ ಸಿ.ಸಿ. ರಸ್ತೆ ನಿರ್ಮಾಣ, ಪ್ರಸಾದ ನಿಲಯ, ವಾಹನ ನಿಲುಗಡೆ, ತೇರಿನ ಮನೆ ಸ್ಥಳಾಂತರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಕಾಮಗಾರಿ ಇದಾಗಿದ್ದು, ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಬಿಡುಗಡೆಯಾಗಿದೆ ಎನ್ನುತ್ತಾರೆ ದೇವಸ್ಥಾನ ಸಿಬ್ಬಂದಿ.

ಪ್ರಾರಂಭವಾಗದ ಕಾಮಗಾರಿ: ಕಳೆದ ಎರಡು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯಿಂದ 2 ಕೋಟಿ ರೂ. ಅನುದಾನವು ಕನಕಾಚಲಪತಿ ದೇವಸ್ಥಾನದ ಅಭಿವೃದ್ಧಿಗೆ ಬಿಡುಗಡೆಯಾಗಿದೆ ಎನ್ನುತ್ತಿದ್ದಾರೆಯೇ ಹೊರತು ಕಾಮಗಾರಿ ಮಾತ್ರ ಪ್ರಾರಂಭವಾಗಿಲ್ಲ. ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗೆ 2 ವರ್ಷಗಳ ಹಿಂದೆ ಮಾಜಿ ಶಾಸಕ ಶಿವರಾಜ ತಂಗಡಗಿ ಭೂಮಿಪೂಜೆ ನೆರವೇರಿಸಿದ್ದಾರೆ. ಆದರೆ ಶಾಸಕ ಬಸವರಾಜ ದಢೇಸುಗೂರು ಒಂದು ವರ್ಷದ ಹಿಂದೆ ಇದೇ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಆದರೆ ಕಾಮಗಾರಿ ಮಾತ್ರ ಇನ್ನು ಪ್ರಾರಂಭವಾಗಿಲ್ಲ. ಅಧಿಕಾರಿಗಳಾಗಲಿ ಹಾಗೂ ಜನಪ್ರತಿನಿಧಿಗಳಾಗಲಿ ಇನ್ನಾದರೂ ಎಚ್ಚೆತ್ತು ದೇವಸ್ಥಾನಕ್ಕೆ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕಿದೆ.

 

ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.