ಗಾಲಿ ಜನಾರ್ದನ ರೆಡ್ಡಿಗೆ 101 ಟಗರುಗಳನ್ನು ಉಡುಗೊರೆ ಕೊಡಲು ಕಾಯುತ್ತಿರುವ ಅಭಿಮಾನಿ!

ಚಂಚಲಗೂಡ ಜೈಲಿಗೂ ಭೇಟಿಗೆ ತೆರಳಿದ್ದ ಅಭಿಮಾನಿ

Team Udayavani, Dec 15, 2022, 8:14 PM IST

1-sadadadad

ಗಂಗಾವತಿ: ಗಂಗಾವತಿಯಲ್ಲಿ ಮನೆ ಮಾಡಿ ಚುನಾವಣಾ ಆಖಾಡ ಸಿದ್ದಗೊಳಿಸಿಕೊಂಡಿರುವ ಬಳ್ಳಾರಿ ಗಣಿ ಧಣಿ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಭಿಮಾನಿಯೊಬ್ಬ 101 ಟಗರುಗಳನ್ನು ಉಡುಗೊರೆಯಾಗಿ ನೀಡಲು ಉತ್ಸುಕರಾಗಿದ್ದು, ಡಿ.21 ರಂದು  ಮನೆಗೆ ಆಗಮಿಸುವ ರೆಡ್ಡಿಯವರಿಗೆ ಒಂದು ಟಗರನ್ನು ಕೊಡಲು ನಿರ್ಧರಿಸಿರುವುದಾಗಿ ರಡ್ಡಿ ಅಭಿಮಾನಿ ಯಮನೂರ ಪುಂಡಗೌಡ ತಿಳಿಸಿದ್ದಾರೆ.

ನಗರದ ಕೃಷ್ಣ ಹೋಟೇಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪುಂಡಗೌಡ, ರೆಡ್ಡಿಯವರು ಜನಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮ ಮಾಡಿದ್ದಾರೆ. ಇಡೀ ಬಳ್ಳಾರಿ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗಿದ್ದರು. ಹಂಪಿ ಉತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಣೆ ಮಾಡಿದ ಸಂದರ್ಭದಲ್ಲಿ ವಿಜಯನಗರ ಮೂಲ ರಾಜಧಾನಿ ಆನೆಗೊಂದಿಯಲ್ಲಿಯೂ ಆಚರಣೆ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇದೀಗ ಕಿಷ್ಕಿಂಧಾ ಅಂಜನಾದ್ರಿಯ ಪುಣ್ಯ ಭೂಮಿ ಗಂಗಾವತಿಯಲ್ಲಿ ಶುಭ ಗಳಿಗೆಯಲ್ಲಿ ಮನೆ ಮಾಡಿ ಮುಂಬರುವ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಬಯಸಿರುವುದರಿಂದ ಗಂಗಾವತಿಯನ್ನು ಅಭಿವೃದ್ಧಿಯ ತಾಣವಾಗಿಸಲು ಇವರ ಅಭಿಮಾನಿಯಾಗಿ ಡಿ.21 ರಂದು ಗಂಗಾವತಿಗೆ ಆಗಮಿಸುವ ರಡ್ಡಿಯವರಿಗೆ ಒಂದು ಟಗರನ್ನು ಕಾಣಿಕೆಯಾಗಿ ನೀಡುತ್ತಿದ್ದು ಚುನಾವಣೆಗೆ ನಾಮಪತ್ರ ಸಲ್ಲಿಸಿದ ದಿನದಂದು 100 ಟಗರು ಕಾಣಿಕೆ ನೀಡಲಾಗುತ್ತದೆ ಎಂದರು.

ನಾನು ಕಳೆದ 18 ವರ್ಷಗಳಿಂದ ರೆಡ್ಡಿ ಅಭಿಮಾನಿಯಾಗಿದ್ದು ಷಡ್ಯಂತ್ರ ನಡೆಸಿ ಹೈದ್ರಾಬಾದ್ ನ ಚಂಚಲಗೂಡ ಜೈಲಿನಲ್ಲಿದ್ದಾಗ ಕ್ಷೇಮ ವಿಚಾರಣೆ ಮಾಡಲು ತೆರಳಿದಾಗ ಪೊಲೀಸರು ಅವಕಾಶ ನೀಡಿರಲಿಲ್ಲ. ರೆಡ್ಡಿ ಆಗಮನದಿಂದ ಗಂಗಾವತಿ ಕೊಪ್ಪಳ ಜಿಲ್ಲೆಯ ಅಭಿವೃದ್ಧಿಯ ಬಾಗಿಲು ತೆರೆದಂತೆ ಆಗಿದೆ. ರೆಡ್ಡಿಯವರನ್ನು ಬರೀ ದುಡ್ಡಿನಿಂದ ನೋಡದೇ ಅವರ ಮುಂದಾಲೋಚನೆಯ ಯೋಜನೆಗಳ ಕುರಿತು ಜನತೆ ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ರೆಡ್ಡಿಯವರಿಗೆ ಸೂಕ್ತ ಸ್ಥಾನಮಾನ ಜತೆಗೆ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡುವ ಅವಕಾಶ ಕಲ್ಪಿಸಿದರೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳುತ್ತಿರುವ 150 ಸ್ಥಾನಗಳು ಬಿಜೆಪಿ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನ್ಯಾಯವಾದಿ ಎಸ್.ಮಲ್ಲೇಶಪ್ಪ, ನಾಗರಾಜ ನಂದಿಹಳ್ಳಿ, ಗುಡ್ಡೆಕಲ್ ಹನುಮೇಶ ನಾಯಕ, ಹನುಮೇಶ ಹೊಸಳ್ಳಿ, ಬಿಜೆಪಿಯ ಶಂಬಣ್ಣ ದೊಡ್ಮನಿ ಇದ್ದರು.

ಟಾಪ್ ನ್ಯೂಸ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.