ಕೊಪ್ಪಳದ ನಿವಾಸಿ ಹೈದರಾಬಾದ್ ನಲ್ಲಿ ಮೃತ, ಅಲ್ಲೇ ಅಂತ್ಯ ಸಂಸ್ಕಾರ
Team Udayavani, Jul 17, 2020, 9:13 AM IST
ಗಂಗಾವತಿ: ಅನಾರೋಗ್ಯಪೀಡಿತ 59 ವರ್ಷದ ವ್ಯಕ್ತಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟ ಗಂಗಾವತಿಯ ಬಾಪಿರಡ್ಡಿ ಕ್ಯಾಂಪಿನ ನಿವಾಸಿಯನ್ನು ಅಲ್ಲೆ ಅಂತ್ಯ ಸಂಸ್ಕಾರ ಮಾಡುವಂತೆ ಜಿಲ್ಲಾಡಳಿತ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಹೈದರಾಬಾದ್ ನಲ್ಲಿ ನಡೆಸುತ್ತಿದೆ.
ಮೊದಲು ಕುಟುಂಬದವರು ಶವವನ್ನು ಗಂಗಾವತಿ ಬಾಪಿರೆಡ್ಡಿ ಕ್ಯಾಂಪಿಗೆ ತರುವ ಸಿದ್ದತೆಯಲ್ಲಿದ್ದರು. ಆದರೆ ಕೋವಿಡ್-19 ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿ ಅಂತ್ಯ ಸಂಸ್ಕಾರ ಮಾಡುವಂತೆ ಕುಟುಂಬಕ್ಕೆ ಜಿಲ್ಲಾಡಳಿತ ಸಲಹೆ ನೀಡಿತು. ಕುಟುಂಬದವರು ಇದಕ್ಕೆ ಜಗ್ಗದೆ ಇದ್ದಾಗ ಬಾಪಿರೆಡ್ಡಿ ಕ್ಯಾಂಪ್ ನ ಯುವಕರು ಕೊಪ್ಪಳ ಡಿಸಿ ಸುರಳ್ಕರ್ ವಿಕಾಸ ಕಿಶೋರ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದರು.
ಡಿಸಿ ಕೂಡಲೇ ಕಾರ್ಯಪ್ರವೃತ್ತರಾಗಿ ವ್ಯಕ್ತಿ ಮೃತಪಟ್ಟಿದ್ದು, ಅಂತರಾಜ್ಯದಿಂದ ಶವ ಸಾಗಿಸುವುದು ಸರಿಯಲ್ಲ ಒಂದು ವೇಳೆ ಮೃತದೇಹ ತರಲೇಬೇಕಾದ ಅನಿವಾರ್ಯತೆ ಇದ್ದರೆ ಕೊವಿಡ್-19 ನಿಯಮದಂತೆ ಅಂತ್ಯ ಸಂಸ್ಕಾರ ಮಾಡಬೇಕಾಗುತ್ತದೆ. 50 ಜನರಿಗಿಂತ ಹೆಚ್ಚು ಗುಂಪು ಸೇರಬಾರದು ಎಂದು ಮೊಬೈಲ್ ನಲ್ಲಿ ಸೂಚನೆ ನೀಡಿದ್ದರಿಂದ ಮೃತ ವ್ಯಕ್ತಿಯ ಕುಟುಂಬದವರು ಹೈದರಾಬಾದ್ ನಲ್ಲಿ ಶವಸಂಸ್ಕಾರ ಮಾಡಲು ನಿರ್ಧರಿಸಿದ್ದಾರೆ. ಬಾಪಿರೆಡ್ಡಿ ಕ್ಯಾಂಪ್ ನ ಮೃತಪಟ್ಟ ವ್ಯಕ್ತಿ ಶವಸಂಸ್ಕಾರಕ್ಕೆ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ ಅನಾಹುತವನ್ನು ತಪ್ಪಿಸಿದಂತಾಗಿದೆ.
ಸ್ಥಳೀಯರಿಂದ ಶ್ಲಾಘನೆ : ಹೈದರಾಬಾದ್ ನಲ್ಲಿ ಅನಾರೋಗ್ಯದ ಕಾರಣ ಮೃತಪಟ್ಟ ವ್ಯಕ್ತಿ ಶವ ಸಂಸ್ಕಾರ ಮಾಡಲು ಕೋವಿಡ್ ನಿಯಮ ಅನುಸರಿಸುವಂತೆ ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ ಕಿಶೋರ್ ಕುಟುಂಬ ವರ್ಗದವರಿಗೆ ಸೂಚನೆ ನೀಡುವ ಮೂಲಕ ಹೈದರಾಬಾದ್ ನಲ್ಲಿ ಶವಸಂಸ್ಕಾರ ಮಾಡುವಂತೆ ಮಾಡಿದ ಜಿಲ್ಲಾಧಿಕಾರಿಗಳ ಮುನ್ನೆಚ್ಚರಿಕೆಯ ಕ್ರಮ ಶ್ಲಾಘನೀಯವಾಗಿದೆ ಎಂದು ಬಾಪಿರೆಡ್ಡಿ ಕ್ಯಾಂಪ್ ನ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು