ಮಕ್ಕಳ ಬಿಸಿಯೂಟಕ್ಕೆ ಅಡ್ಡಿಪಡಿಸಿದ ಮಹಿಳೆ

ಅಡುಗೆ ಕೆಲಸಕ್ಕೆ ತಮ್ಮ ಕುಟುಂಬ ಸದಸ್ಯರನ್ನೇ ನೇಮಿಸಿಕೊಳ್ಳಲು ಪಟ್ಟು

Team Udayavani, Aug 6, 2019, 1:13 PM IST

kopala-tdy-1

ದೋಟಿಹಾಳ: ಬನ್ನಟಿ ಗ್ರಾಮದ ಸರಕಾರಿ ಶಾಲೆ ಮಕ್ಕಳು ಮನೆಯಿಂದ ತಂದ ಆಹಾರ ಸೇವಿಸುತ್ತಿದ್ದಾರೆ.

ದೋಟಿಹಾಳ: ತಮ್ಮ ಕುಟುಂಬ ಸದಸ್ಯರನ್ನು ಅಡುಗೆ ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿ ಮಹಿಳೆ ಪಟ್ಟು ಹಿಡಿದ ಕಾರಣ ಬನ್ನಟಿ ಗ್ರಾಮದ ಶಾಲಾ ಮಕ್ಕಳು ಕೆಲ ದಿನಗಳಿಂದ ಬಿಸಿಯೂಟ ಇಲ್ಲದೇ ಪರದಾಡುವಂತಾಗಿದೆ. ಹಿಂದೆ ತಮ್ಮ ತಾಯಿ ಮಾಡುತ್ತಿದ್ದ ಅಡುಗೆ ಸಹಾಯಕ ಕೆಲಸಕ್ಕೆ ತಮ್ಮ ಮನೆಯವರನ್ನೇ ನೇಮಕ ಮಾಡಿಕೊಳ್ಳಬೇಕು ಎಂದು ಪಟ್ಟುಹಿಡಿದ ಸಂಗಮ್ಮ ರಮೇಶ ಕಜ್ಜಿ ಎಂಬುವವರು ನಾಲ್ಕು ದಿನಗಳಿಂದ ಮಕ್ಕಳಿಗೆ ಅಡುಗೆ ಮಾಡಲು ಬಿಡುತ್ತಿಲ್ಲ.

ಶಾಲೆಯಲ್ಲಿ ಸಂಗಮ್ಮ ರಮೇಶ ಕಜ್ಜಿ ಅವರ ತಂದೆ-ತಾಯಿ ಸಹಾಯಕ ಅಡುಗೆದಾರರಾಗಿ ಕೆಲಸ ಮಾಡುತ್ತಿದ್ದರು. ತಂದೆ ನಿಧನರಾದ ನಂತರ ತಾಯಿ ದೊಡ್ಡಮ್ಮ ಮಲ್ಲಪ್ಪ ಸೂಡಿ ಅವರು ತಾತ್ಕಾಲಿಕವಾಗಿ 10 ತಿಂಗಳ ಸೇವೆ ಸಲಿಸಿ 3 ತಿಂಗಳ ಹಿಂದೆ ನಿಧನರಾಗಿದ್ದಾರೆ. ಈಗ ಅವರ ಸೊಸೆ ವಾಣಿ ಹನುಮಪ್ಪ ಸೂಡಿ ಅವರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಸಂಗಮ್ಮ ಪಟ್ಟು ಹಿಡಿದ್ದಾರೆ.

ಅಡುಗೆದಾರರನ್ನು ನೇಮಿಸಿಕೊಳ್ಳುವ ಕುರಿತು ಗ್ರಾಪಂ ವರ್ಷದ ಹಿಂದೆ ಅರ್ಜಿ ಕರೆದಿತ್ತು. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಗ್ರಾಪಂ ಜೂ. 13ರಂದು ಲಕ್ಷಿ ್ಮೕ ಮುದುಕಪ್ಪ ಹವಾಲ್ದಾರ ಅವರನ್ನು ನೇಮಕ ಮಾಡಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿತ್ತು. ಲಕ್ಷ್ಮೀ ಹವಾಲ್ದಾರ ಅಡುಗೆ ಸಹಾಯಕಿಯಾಗಿ ನೇಮಕವಾಗಿದನ್ನು ಖಂಡಿಸಿ ಸಂಗಮ್ಮ ಮೂರು ದಿನಗಳಿಂದ ಮಕ್ಕಳಿಗೆ ಅಡುಗೆ ಮಡುವುದನ್ನು ತಡೆದಿದ್ದಾಳೆ.

ಸಮಸ್ಯೆ ಪರಿಹರಿಸಲು ಶನಿವಾರ ತಾಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ಅಧಿಕಾರಿ ಕೆ. ಶರಣಪ್ಪ, ಗ್ರಾಪಂ ಅಧ್ಯಕ್ಷ ಚೇತನಕುಮಾರ ಹಿರೇಮಠ, ತಾಪಂ ಸದಸ್ಯ ನಾಗಪ್ಪ ದೋಟಿಹಾಳ, ಗ್ರಾಪಂ ಸದಸ್ಯ ರಾಮನಗೌಡ, ಪಿಡಿಒ ಬಸವರಾಜ ಸಂಕನಾಳ ಅವರು ಶಾಲೆಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರೂ ಸಂಗಮ್ಮ ಪಟ್ಟು ಸಡಿಲಿಸಲಿಲ್ಲ. ಆದ ಕಾರಣ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ.

ಸಂಗಮ್ಮ ಶಾಲೆಗೆ ಭೇಟಿ ನೀಡಿದ್ದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಮಾತು ಕೇಳದ ಕಾರಣ ಅನಿವಾರ್ಯವಾಗಿ ಪೊಲೀಸ್‌ ಠಾಣೆಗೆ ದೂರು ನೀಡುತ್ತಿದೇವೆ ಎಂದು ಶಾಲಾ ಮುಖ್ಯಶಿಕ್ಷಕಿ ತಿಳಿಸಿದ್ದಾರೆ.

ಸರಕಾರದ ನೇಮಕಾತಿ ಆದೇಶದ ಪ್ರಕಾರ ನೇಮಕಾತಿ ಮಾಡಲಾಗಿದೆ. ಅಡುಗೆದಾರರ ನೇಮಕಾತಿಗೆ 30-40 ವರ್ಷದೊಳಗಿನವರ ಮಾತ್ರ ಆಯ್ಕೆ ಮಾಡಬೇಕು ಎಂಬ ಆದೇಶ ಇದೆ. ಹೀಗಾಗಿ ದಾಖಲಾತಿಗಳನ್ನು ಪರಿಶೀಲಿಸಿ ಸಹಾಯಕಿಯನ್ನು ನೇಮಕ ಮಾಡಲಾಗಿದೆ•ಚೇತನಕುಮಾರ ಹಿರೇಮಠ, ಗ್ರಾಪಂ ಅಧ್ಯಕ್ಷರು ಮುದೇನೂರು

ಬಿಸಿಯೂಟ ಅಡುಗೆ ಕೆಲಸಗಾರರು ಅಕಾಲಿಕ ಮರಣ ಹೊಂದಿದರೆ ಅವರ ಮನೆಯವರನ್ನು ಮರಳಿ ನೇಮಕ ಮಾಡಬೇಕು ಎಂಬ ಯಾವುದೇ ಆದೇಶ ಇಲ್ಲ. ಶಾಲಾ ಮಕ್ಕಳ ಬಿಸಿಯೂಟ ಸ್ಥಗಿತ ಮಾಡುವುದು ಕಾನೂನು ಪ್ರಕಾರ ತಪ್ಪು.•ಕೆ. ಶರಣಪ್ಪ, ತಾಲೂಕು ಅಕ್ಷರದಾಸೋಹ ಅಧಿಕಾರಿ

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.