ದುಶ್ಚಟಗಳಿಂದ ದೂರವಿರಿ: ರಡ್ಡೆರ

ವಿದ್ಯಾರ್ಥಿಗಳು ಟಿವಿ ಮತ್ತು ಮೊಬೈಲ್‌ಗ‌ಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ.

Team Udayavani, Aug 3, 2022, 6:33 PM IST

ದುಶ್ಚಟಗಳಿಂದ ದೂರವಿರಿ: ರಡ್ಡೆರ

ಕೊಪ್ಪಳ: ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಾಗಿರಬೇಕು ಎಂದು ಡಿಡಿಪಿಐ ಮುತ್ತಪ್ಪ ರಡ್ಡೆರ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಾ| ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ನಡೆದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

ದಿನಾಚರಣೆಗಳ ಹಿಂದಿನ ತತ್ವ ಕೇಳಿಸಿಕೊಳ್ಳುವುದಷ್ಟೇ ಅಲ್ಲದೇ ಮಹನೀಯರ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ
ದಿನಾಚರಣೆಗಳಿಗೆ ಮಹತ್ವ ಬರುತ್ತದೆ. ಈ ನಿಟ್ಟಿನಲ್ಲಿ ಡಾ| ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯನ್ನು ಇಂದು ನಾವು ವ್ಯಸನ ಮುಕ್ತ ದಿನವನ್ನಾಗಿ ಆಚರಿಸುತ್ತಿದೆ ಎಂದರು.

ಹಳ್ಳಿ ಹಳ್ಳಿಗಳಿಗೆ ಹೋಗಿ ತಮ್ಮ ಜೋಳಿಗೆಯಲ್ಲಿ ದುಶ್ಚಟಗಳನ್ನು ಭಿಕ್ಷೆ ರೂಪದಲ್ಲಿ ಹಾಕಿ ಎಂದು ವಿಶೇಷ ರೀತಿಯ ಹೋರಾಡದ ಜೊತೆಗೆ ಜಾಗೃತಿ ಮೂಡಿಸಿದ ಕೀರ್ತಿ ಡಾ| ಮಹಾಂತ ಶಿವಯೋಗಿಗಳದ್ದಾಗಿದೆ. ಇಂತಹ ಹಲವಾರು ಸಂದೇಶಗಳೊಂದಿಗೆ ಅವರು ಸಮಾಜ ಸುಧಾರಣೆ ಮಾಡಿದ್ದಾರೆ. ಇಂದು ವಿದ್ಯಾರ್ಥಿಗಳು ದುಶ್ಚಟಗಳತ್ತ ಗಮನ ಹರಿಸುವುದಿಲ್ಲವೆಂದು ಪ್ರತಿಜ್ಞೆ ಮಾಡಬೇಕು. ಮುಂದೆ ನಿಮ್ಮ ಜೀವನದಲ್ಲಿ ವ್ಯಸನ ಮುಕ್ತರಾಗಿರಿ. ವ್ಯಸನ ಮುಕ್ತ ವಿಚಾರಗಳನ್ನು ವಿದ್ಯಾರ್ಥಿಗಳು ಒಬ್ಬರಿಂದ ಇನ್ನೊಬ್ಬರಿಗೆ ಹೇಳುವುದರಿಂದ ಒಂದು ಅಭಿಯಾನ ರೂಪದಲ್ಲಿ ಪ್ರಚಾರ ಮಾಡಿ, ಅಂದಾಗ ಮಾತ್ರ ಸಮಾಜ ಸುಧಾರಣೆ ಮಾಡಲು ಸಹಾಯಕವಾಗುತ್ತದೆ ಎಂದರು.

ಗವಿಸಿದ್ದೇಶ್ವರ ಕಾಲೇಜಿನ ಹಿರಿಯ ಉಪನ್ಯಾಸಕ ಡಾ| ಸಿದ್ಧಲಿಂಗಪ್ಪ ಕೊಟೆ°ಕಲ್‌ ಅವರು ಮಾತನಾಡಿ, ಡಾ| ಮಹಾಂತ ಶಿವಯೋಗಿಗಳು ತಮ್ಮ ಜೀವನದಲ್ಲಿ ಜೋಳಿಗೆ ಹಾಕಿಕೊಂಡು ಊರೂರು ಅಲೆದಾಡಿ ದುಶ್ಚಟಗಳನ್ನು ಭಿಕ್ಷೆ ಬೇಡಿ ತಮ್ಮ ಜೋಳಿಗೆಯಲ್ಲಿ ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಅವರ ಜನ್ಮದಿನವನ್ನು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ವಿದ್ಯಾರ್ಥಿಗಳು ದುಶ್ಚಟಗಳ ಬಗ್ಗೆ ತಿಳಿದುಕೊಳ್ಳಬೇಕು. ಪುರಾಣ ಕಾಲದಲ್ಲಿ ಹೆಣ್ಣು, ಹೊನ್ನು ಮತ್ತು ಮಣ್ಣಿಗಾಗಿ ವ್ಯಸನಕ್ಕೆ ಒಳಗಾಗುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮದ್ಯ, ಧೂಮಪಾನ, ಗಾಂಜಾ, ಅಫೀಮು ಇತ್ಯಾದಿಗಳಿಗೆ ಯುವ ಜನರು ಹೆಚ್ಚು ದಾಸರಾಗುತ್ತಿದ್ದಾರೆ. ಅನೇಕ ಆರೋಗ್ಯ ಸಮಸ್ಯೆಗಳಿವೆ ತುತ್ತಾಗುತ್ತಾರೆ. ಅವು ಕೊನೆಗೆ ಸಾವಿನ ಕಡೆಗೆ ಕರೆದುಕೊಂಡು ಹೋಗುತ್ತದೆ.

ಆದ್ದರಿಂದ ವಿದ್ಯಾರ್ಥಿಗಳು ವ್ಯಸನದಂತಹ ದುಶ್ಚಟಗಳ ಕಡೆ ಗಮನಹರಿಸದೇ ಓದಿನ ಕಡೆಗೆ ಹೆಚ್ಚಿನ ಒಲವು ತೋರಿಸಬೇಕು. ಅದರ ಜೊತೆಗೆ ತಮ್ಮ ಮನೆಯ ಅಕ್ಕಪಕ್ಕದ ಸಂಬಂಧಿಕರಿಗೆ ಅಥವಾ ಸ್ನೇಹಿತರಿಗೆ ದುಶ್ಚಟಗಳ ಬಗ್ಗೆ ತಿಳಿಹೇಳಿ ವ್ಯಸನ ಮುಕ್ತ ಪರಿವರ್ತನೆ ಮಾಡಬೇಕು. ಈ ಆಧುನಿಕ ಯುಗದಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಟಿವಿ ಮತ್ತು ಮೊಬೈಲ್‌ಗ‌ಳ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಅದನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕೆಂದು ತಿಳಿದು ಬಳಕೆ ಮಾಡಬೇಕು. ಆಗ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ದೈಹಿಕ ಶಿಕ್ಷಣ ನಿರ್ದೇಶಕ ಬಸವರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಿವೃತ್ತ ಪ್ರಾಚಾರ್ಯ ಜಡಿಯಪ್ಪ ಸೇರಿದಂತೆ ವಿವಿಧ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.