Court 15 ದಿನಕ್ಕೊಮ್ಮೆ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾರ್ಯಕಲಾಪ: ಎಸಿ ಕ್ಯಾಪ್ಟನ್ ಮಾಲಗಿತ್ತಿ

ಕಲಾಪದ ನಂತರ ಅಥವಾ ಮೊದಲು ಜನಸಾಮಾನ್ಯರ ಮನವಿ ಸ್ವೀಕಾರ

Team Udayavani, Oct 25, 2023, 6:47 PM IST

Court 15 ದಿನಕ್ಕೊಮ್ಮೆ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾರ್ಯಕಲಾಪ: ಎಸಿ ಕ್ಯಾಪ್ಟನ್ ಮಾಲಗಿತ್ತಿ

ಗಂಗಾವತಿ :ಪ್ರತಿ 15 ದಿನಗಳಿಗೊಮ್ಮೆ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾರ್ಯಕಲಾಪ ನಡೆಸಿ ಭೂ ವಿವಾದಗಳು ಮತ್ತು ಪೊಲೀಸ್ ಇಲಾಖೆಯ ಕೆಲ ಕೇಸ್ ಗಳಿಗೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತದೆ. ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕಿನ ವ್ಯಾಜ್ಯಗಳು ಎಸಿ ಕೋರ್ಟು ವ್ಯಾಪ್ತಿಗೆ ಬರುತ್ತವೆ ಎಂದು ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಹೇಳಿದರು.

ಗಂಗಾವತಿ ತಹಸಿಲ್ ಕಚೇರಿಯಲ್ಲಿ ಅಧಿಕೃತವಾಗಿ ಎಸಿ ಕೋರ್ಟ್ ಕಲಾಪಕ್ಕೆ ಚಾಲನೆ ನೀಡಿ ವಕೀಲರ ಸಂಘದಿಂದ ಸನ್ಮಾನಾನ ಸ್ವೀಕರಿಸಿ ಮಾತನಾಡಿದರು.ವಕೀಲರು ಮತ್ತು ಸಂಘ ಸಂಸ್ಥೆಗಳ ಮನವಿ ಮೇರೆಗೆ ಜಿಲ್ಲಾಡಳಿತ ಮತ್ತು ಸರ್ಕಾರ ಪ್ರತಿ 15 ದಿನಗಳಿಗೊಮ್ಮೆ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾರ್ಯಕಲಾಪ ನಡೆಸುವಂತೆ ಆದೇಶ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಭೂ ವ್ಯಾಜ್ಯ ಮತ್ತು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಕೆಲವು ವ್ಯಾಜ್ಯಗಳ ಕುರಿತು ವಿಚಾರಣೆಗಳನ್ನು ನಡೆಸಿ ಸೂಕ್ತ ಆದೇಶಗಳನ್ನು ನೀಡಲಾಗುತ್ತದೆ.

ಕಾರಟಗಿ, ಗಂಗಾವತಿ ಮತ್ತು ಕನಕಗಿರಿ ಈ ಭಾಗದ ಕಕ್ಷಿದಾರರು ಎಸಿ ಕೋರ್ಟ್ ಕಾರ್ಯಕಲಾಪಗಳ ಲಾಭವನ್ನು ಪಡೆಯಬೇಕು ಮತ್ತು ತಹಸಿಲ್ದಾರ್ ಅವರಿಂದ ಪರಿಹಾರ ಕಾಣದ ಕೆಲ ವ್ಯಾಜ್ಯಗಳನ್ನು ಸಹ ವಿಚಾರಣೆ ಮಾಡಿ ಸೂಕ್ತ ಪರಿಹಾರ ನೀಡಲಾಗುತ್ತದೆ. ಜನಸಾಮಾನ್ಯರ ಬೇಕು ಬೇಡಿಕೆಗಳ ಕುರಿತು ಕೋರ್ಟ್ ಕಲಾಪಕ್ಕ ಮುಂಚೆ ಅಥವಾ ನಂತರ ಮನವಿಗಳನ್ನು ಸ್ವೀಕರಿಸಲಾಗುತ್ತದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಮಾತನಾಡಿ, ವಕೀಲರ ಸಂಘದಿಂದ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾಯಂ ಪೀಠ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡಲಾಗಿತ್ತು ಇದಕ್ಕೆ ಸ್ಪಂದಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಸಂಗಡಗಿ ಹಾಗೂ ಜಿಲ್ಲಾಡಳಿತ ತಾತ್ಕಾಲಿಕವಾಗಿ ಪ್ರತಿ 15 ದಿನಗಳಿಗೊಮ್ಮೆ ಎಸಿ ಕೋರ್ಟ್ ಕಾರ್ಯಕ್ರಮ ನಡೆಸಿ ಭೂ ಮತ್ತು ಇತರೆ ವ್ಯಾಜ್ಯಗಳ ಕುರಿತು ವಿಚಾರಣೆ ನಡೆಸಿ ಪರಿಹಾರ ದೊರಕಿಸಿಕೊಡಲಿದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಸಮಸ್ತ ವಕೀಲರ ಪರವಾಗಿ ಸಲ್ಲಿಸಲಾಗುತ್ತದೆ ಎಂದರು.

ಎಚ್.ಎಂ. ಮಂಜುನಾಥ ಅವರು ಮಾತನಾಡಿ, ಅಖಂಡ ಗಂಗಾವತಿ ತಾಲೂಕಿಗೆ ಸಂಬಂಧಪಟ್ಟ ಮುಟೇಷನ್ಸ್ ಅಪಿಲ್ ಪ್ರಕರಣಗಳು ಮತ್ತು ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ ಪ್ರಕರಣಗಳು ಕೊಪ್ಪಳದಲ್ಲಿದ್ದು ಮುಂದಿನ ದಿನಮಾನಗಳಲ್ಲಿ ಈ ಪ್ರಕರಣಗಳನ್ನು ಸಹ ಗಂಗಾವತಿಯಲ್ಲಿ ವಿಚಾರಣೆ ನಡೆಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ, ಪ್ರಧಾನ ಕಾರ್ಯದರ್ಶಿ ಎಚ್ ಎಂ ಮಂಜುನಾಥ, ಉಪಾಧ್ಯಕ್ಷ ಪರಸಪ್ಪ ನಾಯಕ್, ಖಜಾಂಜಿ ವೆಂಕಟೇಶ್ ಗೌಡ, ರಾಘವೇಂದ್ರ, ಗಂಗಾವತಿ ತಹಸಿಲ್ದಾರ್ ಮಂಜುನಾಥ ಹಿರೇಮಠ ಭೋಗಾವತಿ, ಹಿರಿಯ ವಕೀಲರಾದ ವೈದ್ಯನಾಥ ಸ್ವಾಮಿ ಹಿರೇಮಠ, ಕೆ ಕೃಷ್ಣಪ್ಪ, ಶರದ್ ದಂಡಿನ, ಎಂ. ಗೋವಿಂದ್, ಸೋಮನಾಥ್ ಪಟ್ಟಣಶೆಟ್ಟಿ, ಪಂಪಯ್ಯ ಸ್ವಾಮಿ, ಬಸವರಾಜ ಆರಾಪುರ, ಬಸನಗೌಡ, ಎಸ್ ಎಮ್ ಸಜ್ಜಿಹೋಲ, ರಾಜೇಶ್ವರಿ, ಅಕ್ಕಮಹಾದೇವಿ, ಶಾಯಿನ್ ಕೌಸರ್ ಸೇರಿ ವಕೀಲರು ಮತ್ತು ಕಕ್ಷಿದಾರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.