ಗಂಗಾವತಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ಎಸಿಬಿ ದಾಳಿ
Team Udayavani, Nov 10, 2019, 5:08 PM IST
ಗಂಗಾವತಿ: ನಗರದ ಸಬ್ ರಿಜಿಸ್ಟರ್ ಕಚೇರಿ ಮೇಲೆ ಗುರುವಾರ ಎಸಿಬಿ ತಂಡ ದಾಳಿ ನಡೆಸಿ ವ್ಯಾಪಕ ದಾಖಲೆ ಪರಿಶೀಲಿಸಿದ್ದು, ಮಧ್ಯವರ್ತಿಗಳಿಂದ ಸಾವಿರಾರು ರೂ. ವಶಕ್ಕೆ ಪಡೆದುಕೊಂಡ ಘಟನೆ ಜರುಗಿದೆ.
ಕೊಪ್ಪಳದ ಕನಕಪ್ಪ ನೀಡಿದ ದೂರಿನ ಅನ್ವಯ ಎಸಿಬಿ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ಅವರ ನೇತೃತ್ವದ 10 ಜನ ಸಿಬ್ಬಂದಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಬ್ ರಿಜಿಸ್ಟರ್ ಕಚೇರಿಗೆ ಆಗಮಿಸಿದೆ. ಬಾಗಿಲು ಹಾಕಿಕೊಂಡು ಸಿಬ್ಬಂದಿ ಮತ್ತು ಮಧ್ಯವರ್ತಿಗಳಿಂದ ಮಾಹಿತಿ ಸಂಗ್ರಹಿಸಿ ಮಧ್ಯವರ್ತಿಗಳಿಂದ 39,150 ರೂ. ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಕೆಲಸ ಮಾಡಲು ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿಳಂಬ ಮಾಡಲಾಗುತ್ತದೆ. ಲಂಚವಿಲ್ಲದೆ ಯಾವುದೇ ಕಾರ್ಯಗಳು ಆಗುವುದಿಲ್ಲ ಎಂಬ ಸಾರ್ವಜನಿಕರಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಮೇಲೆ ದಾಳಿ ಮಾಡಲಾಗಿದೆ. ಸಾಮಾಜಿಕ ಹೋರಾಟಗಾರ ಕನಕಪ್ಪ ದೂರು ನೀಡಿದ್ದಾರೆ ಎಂದು ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ