ವಿಧವಾ ವೇತನ ವಂಶವೃಕ್ಷ ಪ್ರಮಾಣ ಪತ್ರಕ್ಕೆ ಲಂಚ ಸ್ವೀಕಾರ: ಕಂದಾಯ ನಿರೀಕ್ಷಕ ಬಂಧನ
Team Udayavani, Apr 13, 2022, 4:10 PM IST
ಗಂಗಾವತಿ: ವಿಧವಾ ವೇತನ ಮತ್ತು ವಂಶವೃಕ್ಷ ಪ್ರಮಾಣ ಪತ್ರಕ್ಕಾಗಿ ಕಂದಾಯ ನಿರೀಕ್ಷಕನೊಬ್ಬ ಲಂಚಕ್ಕೆ ಬೇಡಿಕೆಯಿಟ್ಟು ಲಂಚದ ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿ ಕಂದಾಯ ಅಧಿಕಾರಿಯನ್ನು ಬಂಧಿಸಿದ ಪ್ರಕರಣ ಗಂಗಾವತಿಯಲ್ಲಿ ಜರುಗಿದೆ.
ಗಂಗಾವತಿ ತಾಲೂಕಿನ ಹಂಪಸದುರ್ಗ ನಿವಾಸಿ ರೇಣುಕಮ್ಮ ಗಂಡ ಯಮನೂರಪ್ಪ ಕಾಂಗೆರಿ ಅವರ ವಿಧವಾವೇತನ ಮತ್ತು ವಂಶವೃಕ್ಷ ಮಾಡಿಕೊಡಲು ವೆಂಕಟಗಿರಿ ಪಂಚಾಯತಿಯಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು.
ಈ ಮುಂಚೆ ವೆಂಕಟಗಿರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಬಸವರಾಜ ಅಂಗಡಿರವರು ಸುಮಾರು ಎರಡು ತಿಂಗಳ ಹಿಂದೆ ವೆಂಕಟಗಿರಿಯಿಂದ ನವಲಿ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡಿದ್ದು ಈಗಲೂ ವೆಂಕಟಗಿರಿಯ ಕೆಲವು ಕಡತಗಳು ವಿಷಯದಲ್ಲಿ ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದು ಈಗಲೂ ವೆಂಕಟಗಿರಿ ಗ್ರಾ.ಪಂ. ಗೆ ಸಂಬಂಧಿಸಿದ ಕೆಲಸದಲ್ಲಿ ಅರ್ಜಿದಾರರಿಗೆ 10 ಸಾವಿರ ರೂಪಾಯಿಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು ಅದರಲ್ಲಿ ಏ.12 ರಂದು ಅರ್ಜಿದಾರರಿಂದ 800 ರೂ ಗಳ ಲಂಚದ ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದು ಬಾಕಿ ಉಳಿದ ಹಣದಲ್ಲಿ ಬುಧವಾರ 4200 ರೂ. ಕೊಡುವಂತೆ ಇನ್ನುಳಿದ ಹಣವನ್ನು ಕೆಲಸ ಆದ ಮೇಲೆ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಈಶ್ವರಪ್ಪ ಮಗ ಸಂತೋಷ್ ಗೆ ಧಮ್ಕಿ ಹಾಕಿದ್ದರು : ಲಕ್ಷ್ಮೀ ಹೆಬ್ಬಾಳ್ಕರ್ ಸ್ಫೋಟಕ ಹೇಳಿಕೆ
ಬುಧವಾರ ಅರ್ಜಿದಾರರಿಂದ 4200 ರೂ. ಲಂಚದ ಹಣವನ್ನು ಗಂಗಾವತಿಯ ಕೆಜಿಎಫ್ ಆಟೋವರ್ಕ್ಸ್ ಎಂಬ ಗ್ಯಾರೇಜ್ ದಲ್ಲಿ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿರುತ್ತಾರೆ.
ಬಳ್ಳಾರಿಯ ಎಸಿಬಿ ಎಸ್ ಪಿ ರವರ ಮಾರ್ಗದರ್ಶನದಲ್ಲಿ ಕೊಪ್ಪಳ ಎಸಿಬಿ ಡಿಎಸ್ ಪಿ ರವರ ನೇತೃತ್ವದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ಕೈಕೊಳ್ಳಲಾಗಿದ್ದು ಈ ಸಂದರ್ಭದಲ್ಲಿ ಕಾರ್ಯಾಚರಣೆಯಲ್ಲಿ ಎಸಿಬಿ ಇನ್ಸ್ ಪೆಕ್ಟರ್ ಗಳಾದ ಶಿವರಾಜ್ ಇಂಗಳೆ, ಆಂಜನೇಯ ಡಿಎಸ್. ಸಿಬ್ಬಂದಿಗಳಾದ ರಂಗನಾಥ, ಸಿದ್ದಯ್ಯ, ಜಗದೀಶ್, ಗಣೇಶ್, ಉಮೇಶ್, ಸವಿತಾ, ಆನಂದ್, ಬಸಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್