ಕಾಳಿಗೂ, ಮೇವಿಗೂ ಸೈ “ಪುಲೆ ಯಶೋಧಾ’ ತಳಿ


Team Udayavani, Jan 25, 2020, 1:22 PM IST

kopala-tdy-2

ಕುಷ್ಟಗಿ: ತಾಲೂಕಿನ ಗುಮಗೇರಾದ ರೈತ ಶರಣಗೌಡ ಮಾಲಿಪಾಟೀಲ ಹಿಂಗಾರು ಹಂಗಾಮಿಗೆ “ಪುಲೆ ಯಶೋಧಾ ತಳಿ ಜೋಳ’ ಬೆಳೆಯುವ ಮೂಲಕ ಗಮನ ಸೆಳೆದಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಡಾ| ಎಂ.ಡಿ. ಕಾಚಾಪೂರ ಅವರು ಉತ್ತರ ಕರ್ನಾಟಕದ ಮುಂಗಾರು-ಹಿಂಗಾರು ದೇಶಿ ಜೋಳದ ತಳಿ ಅಧ್ಯಯನ ಸಂದರ್ಭದಲ್ಲಿ ಮಾಲ್ದಂಡಿ ಬಿಳಿಜೋಳದಿಂದ ಅಭಿವೃದ್ಧಿ ಪಡಿಸಿದ ಪುಲೆ ಯಶೋಧಾ ಹೆಸರಿನ ಬಿಳಿಜೋಳ ತಳಿಯ ಬಿತ್ತನೆ ಬೀಜವನ್ನು ಗುಮಗೇರಾದ ರೈತ ಶರಣಗೌಡ ಮಾಲಿಪಾಟೀಲರಿಗೆ ನೀಡಿದ್ದರು.

ಈ ಪ್ರದೇಶದಲ್ಲಿ ಮೊದಲ ಬಾರಿ ಪುಲೆ ಯಶೋಧ ವಿಶೇಷ ತಳಿ ಬಿಳಿ ಜೋಳ ಉತ್ತಮವಾಗಿ ಬೆಳೆಸಿರುವುದನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಖುದ್ದು ಭೇಟಿ ನೀಡಿ ವೀಕ್ಷಿಸಿದ್ದರು. ರೈತ ಶರಣಗೌಡ ಮಾಲಿಪಾಟೀಲ ಕಳೆದ ವರ್ಷ ನಾಲ್ಕು ಎಕರೆ ಎರೆಭೂಮಿಯಲ್ಲಿ ಪುಲೆ ಯಶೋಧಾ ಬಿಳಿ ಜೋಳ ಬೆಳೆದಿದ್ದರು. ಈ ಬಾರಿಯೂ ಒಂದು ಎಕರೆಯಲ್ಲಿ ಬೆಳೆದಿದ್ದಾರೆ.

5-6 ಅಡಿ ಎತ್ತರ ಬೆಳೆಯುವ ಈ ತಳಿ ಇತರೇ ದೇಶಿ ಜೋಳಕ್ಕಿಂತ ತೆನೆಯ ಗಾತ್ರ ಹೆಚ್ಚು. ಎಕರೆಗೆ ಸರಿ ಸುಮಾರು 7ರಿಂದ 8 ಕ್ವಿಂಟಲ್‌ ಇಳುವರಿ ನಿರೀಕ್ಷಿಸಬಹುದಾಗಿದೆ. ಈ ಬೆಳೆಯ ಸೊಪ್ಪು (ಕಣಕಿ) ಒಣಗಿದರೂ ಮಿದುವಾಗಿದ್ದು, ಜಾನುವಾರುಗಳಿಗೆ ತಿನ್ನುವಾಗ ಸಿಬಿರು ಚುಚ್ಚಲ್ಲ. ಈ ಹಿನ್ನೆಲೆಯಲ್ಲಿ ಜಾನುವಾರುಗಳು ಈ ದಂಟನ್ನು ಬಿಡದೇ ತಿನ್ನುತ್ತವೆ ಎನ್ನುತ್ತಾರೆ ರೈತ ಶರಣಗೌಡ ಮಾಲಿಪಾಟೀಲ.

ತಾಲೂಕಿನ ಪ್ರದೇಶದಲ್ಲಿ ಹಿಂಗಾರು ಹಂಗಾಮಿಗೆ ಮಾಲ್ದಂಡಿ, ನಿಡಶೇಸಿ ಭಾಗದ ಗಟ್ಟಿ ತೆನೆ ಜೋಳ, ಯಕ್ಕರನಾಳ ಜೋಳ ಸೇರಿದಂತೆ ದೇಶಿ ತಳಿಯ ಬೆಳೆ ಬೆಳೆಯಲಾಗುತ್ತಿದೆ. ಆದರೆ ಗುಮಗೇರಾದ ರೈತ ಶರಣಗೌಡ ಮಾಲಿಪಾಟೀಲ 10 ವರ್ಷದಿಂದ ಪುಲೆ ಯಶೋಧಾ ಜೋಳ ಬಿಟ್ಟರೆ ಇನ್ಯಾವುದು ತಳಿ ಜೋಳ ಬೆಳೆದಿಲ್ಲ. ಪ್ರತಿ ವರ್ಷ ತಪ್ಪದೇ ಬೆಳೆಯುವ ಇವರು ಪುಲೆ ಯಶೋಧಾ ಜೋಳದಿಂದ ಉತ್ತಮ ಇಳುವರಿ ಪಡೆದಿದ್ದಾರೆ. ಈ ತಳಿಯ ಬಿತ್ತನೆ ಬೀಜಗಳನ್ನು ಯಾರಾದ್ರೂ ಬಿತ್ತನೆ ಮಾಡಲು ಮುಂದೆ ಬಂದರೆ ಉಚಿತವಾಗಿ ನೀಡಲಾಗುವುದು. ಒತ್ತಾಯಪೂರ್ವಕವಾಗಿ ಬಿತ್ತನೆ ಬೀಜ ಕೊಡಲು ಮನಸ್ಸು ಒಪ್ಪಲ್ಲ ಎನ್ನುತ್ತಾರೆ ಶರಣಗೌಡ ಮಾಲಿಪಾಟೀಲ.

ಪುಲೆ ಯಶೋಧಾ ತಳಿ ಮಾಲ್ದಂಡಿ ಮೂಲ ದೇಶಿ ತಳಿಯಿಂದ ಅಭಿವೃದ್ಧಿ ಪಡಿಸಲಾಗಿದೆ. ಮಹಾರಾಷ್ಟ್ರ ಹಾಗೂ ಧಾರವಾಡ, ಬೆಳಗಾವಿಯಲ್ಲಿ ಅಲ್ಲಲ್ಲಿ ಈ ತಳಿ ಬೆಳೆಯಲಾಗುತ್ತಿದೆ. ಆದರೆ ಈ ಪ್ರದೇಶದಲ್ಲೂ ಬೆಳೆಯಬಹುದಾಗಿದ್ದು, ಕಾಳುಗಳು ದಪ್ಪವಾಗಿರುತ್ತವೆ.  ಡಾ|ಎಂ.ಬಿ. ಪಾಟೀಲ,ಕೃಷಿ ಸಂಶೋಧನಾ ಕೇಂದ್ರ ಕೊಪ್ಪಳ.

 

-ಮಂಜುನಾಥ ಮಹಾಲಿಂಗಪುರ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.