ಬಿಜೆಪಿ ಸರಕಾರದಿಂದ ಜನಪರ ಆಡಳಿತ

ಜನವಿರೋಧಿ ಆಡಳಿತದಿಂದ ನೆಲಕಚ್ಚಿದೆ ಕಾಂಗ್ರೆಸ್‌

Team Udayavani, May 8, 2022, 3:43 PM IST

18

ಯಲಬುರ್ಗಾ: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರಗಳು ಜನಪರ ಆಡಳಿತ ನೀಡುತ್ತಿವೆ. ಇತರೆ ರಾಷ್ಟ್ರಗಳಿಗೆ ಇಂದು ಭಾರತ ದೇಶ ವಿಶ್ವ ಗುರುವಾಗಿದೆ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ತಾಲೂಕಿನ ಹಿರೇವಡ್ರಕಲ್‌ ಗ್ರಾಮದಲ್ಲಿ ಶನಿವಾರ 60 ಲಕ್ಷ ರೂ. ವೆಚ್ಚದ ಹಿರೇವಡ್ರಕಲ್‌ -ಗಾಣಧಾಳ ಗ್ರಾಮದವರೆಗೆ ರಸ್ತೆ ಸುಧಾರಣಾ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೇರವೇರಿಸಿ ಅವರು ಮಾತನಾಡಿದರು.

ಗ್ರಾಮದಲ್ಲಿ ಈ ಹಿಂದೆ ರೈತರ ಪಹಣಿಗಳಲ್ಲಿ ಲೋಪದೋಷ ಇತ್ತು. ಡಬಲ್‌ ಸರ್ವೇ ನಂಬರಿನಿಂದ ಮಾರಾಟ ಹಾಗೂ ವರ್ಗಾವಣೆ ಮಾಡಲು ಬರುತ್ತಿರಲಿಲ್ಲ ಇದಕ್ಕಾಗಿ ತಹಶೀಲ್ದಾರ್‌ನ್ನು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಹತ್ತಾರು ಬಾರಿ ಕರೆದುಕೊಂಡು ಬೆಂಗಳೂರಿಗೆ ಹೋಗಿ ಆ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಂಡು ಪಹಣಿಗಳನ್ನು ಸರಿಪಡಿಸುವ ಮಹತ್ತರ ಕಾರ್ಯ ಮಾಡಿದ್ದೇನೆ. ನಾನು ರೈತನ ಮಗ, ಕೃಷಿ ಕುಟುಂಬದಿಂದ ಬಂದವನು. ರಾಜಕಾರಣಿ ಮಂತ್ರಿ ಎಂಬ ಅಹಂ ನನಗಿಲ್ಲ, ಮಂತ್ರಿಯಾದರೂ ಹಳ್ಳಿಯಲ್ಲಿರುವ ಮಸಬಹಂಚಿನಾಳದ ಪಡಸಾಲೆಯಲ್ಲಿ ನಿತ್ಯ ವಾಸ ಮಾಡುವ ಸರಳ ವ್ಯಕ್ತಿ. ಈ ಹಿಂದೆ ಆಡಳಿತ ನಡೆಸಿದ ಕಾಂಗ್ರೆಸ್‌ ಸರಕಾರ ಜನವಿರೋಧಿ ನೀತಿ, ಆಡಳಿತ ನೀಡಿದ ಫಲದಿಂದ ರಾಜ್ಯ, ರಾಷ್ಟ್ರದಲ್ಲಿ ನೆಲಕಚ್ಚಿದೆ. ಗ್ರಾಮಗಳಲ್ಲಿ ನಡೆಯುವ ಕಾಮಗಾರಿಗಳ ಬಗ್ಗೆ ಜನತೆ ಕಾಳಜಿ ವಹಿಸಿಕೊಳ್ಳಬೇಕು. ತಪ್ಪಾದರೇ ಬರೀ ರಾಜಕಾರಣಿ, ಅಧಿಕಾರಿಗಳಿಗೆ ಬೊಟ್ಟು ಮಾಡಿ ತೋರಿಸಿದರೆ ಸಾಲದು ಜನತೆ ತಮ್ಮ ಜವಾಬ್ದಾರಿ ಅರಿತುಕೊಳ್ಳಬೇಕಿದೆ ಎಂದರು.

ಪ್ರಥಮ ಬಾರಿ ಶಾಸಕನಾದ ನನಗೆ ರಾಜ್ಯ ಸರಕಾರದಲ್ಲಿ ಸಚಿವ ಸ್ಥಾನ ಪಡೆದು ಎರಡು ಪ್ರಬಲ ಖಾತೆಗಳು ಸಿಗಲು ಈ ತಾಲೂಕಿನ ಮತದಾರರ ಆರ್ಶೀವಾದವೇ ಕಾರಣ. ಕ್ಷೇತ್ರದಲ್ಲಿ ನಡೆಯುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ. ಗುಣಮಟ್ಟಕ್ಕೆ ಹೆಚ್ಚು ಒತ್ತು ಕೊಟ್ಟಿದ್ದೇನೆ ಎಂದರು.

ತಹಶೀಲ್ದಾರ್‌ ಶ್ರೀಶೈಲ ತಳವಾರ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ನಿಂಗಮ್ಮ ಹರಿಜನ, ಮುಖಂಡರಾದ ಕಳಕಪ್ಪ ಕಂಬಳಿ, ವೀರಣ್ಣ ಹುಬ್ಬಳ್ಳಿ, ಶಿವಕುಮಾರ ನಾಗಲಾಪುರಮಠ, ಬಸವನಗೌಡ ತೊಂಡಿಹಾಳ, ಶರಣಪ್ಪ ಬಣ್ಣದಭಾವಿ, ಶಿವಪ್ಪ ವಾದಿ, ಅಯ್ಯನಗೌಡ ಕೆಂಚಮ್ಮನವರ, ಹನುಮಂತಪ್ಪ ತರಲಕಟ್ಟಿ, ಈಶ್ವರ ಬೊಮ್ಮನಾಳ, ಇಒ ಎಚ್‌. ಮಹೇಶ, ಪಿಎಸ್‌ಐ ಯು. ಡಾಕೇಶ, ಪಿಡಿಒ ಬಸವರಾಜ ಕಿಳ್ಳಿಕ್ಯಾತರ ಇತರರು ಇದ್ದರು.

ಅಧಿಕಾರ ಇದ್ದಾಗ ಕಣ್ಮುಚ್ಚಿ ನಿದ್ದೆ ಮಾಡುವ ತಾಲೂಕಿನ ಕಾಂಗ್ರೆಸ್‌ ನಾಯಕ, ಇದೀಗ ಕೊಪ್ಪಳ ಏತ ನೀರಾವರಿ ಯೋಜನೆ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ನಾನೇ ಮಾಡಿದ್ದೇನೆ ಎಂಬ ರೀಲು ಬಿಡುತ್ತಿದ್ದಾರೆ. ಇವರು ಮಾಡಿರುವ ದೊಡ್ಡ ಸಾಧನೆಯಂದರೇ ಪ್ರವಾಸಿ ಮಂದಿರಗಳನ್ನು ನಿರ್ಮಿಸಿದ್ದಾರೆ. ಜನತೆ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತಾರೆ. ಮುಂದಿನ ಬೇಸಿಗೆಯೊಳಗೆ ಕೆರೆ ತುಂಬಿಸುತ್ತೇನೆ. ಕ್ಷೇತ್ರ ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗುತ್ತಿದೆ. –ಹಾಲಪ್ಪ ಆಚಾರ್‌, ಸಚಿವ

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.