ಎ.ಬಿ.ಖರಾಬ್ ಭೂಮಿ ಪರಿವರ್ತಿಸಿ ಬಗರಹುಕುಂ ಅಡಿಯಲ್ಲಿ ಪಟ್ಟಾ ದಾಖಲಾತಿ ವಿತರಣೆ


Team Udayavani, Jan 24, 2022, 7:19 PM IST

ಎ.ಬಿ.ಖರಾಬ್ ಭೂಮಿ ಪರಿವರ್ತಿಸಿ ಬಗರಹುಕುಂ ಅಡಿಯಲ್ಲಿ  ಪಟ್ಟಾ ದಾಖಲಾತಿ ವಿತರಣೆ

ಗಂಗಾವತಿ: ತಾಲೂಕಿನ ಆನೆಗೊಂದಿ ಭಾಗ ಸೇರಿ ಇತರೆ ಕಂದಾಯ ಹೋಬಳಿಗಳಲ್ಲಿ ಎ ಮತ್ತು ಬಿ ಖರಾಬ್ ಭೂಮಿ ಹೆಚ್ಚಿದ್ದು ನೂರಾರು ರೈತರು ಇದರಲ್ಲಿ ಉಳುಮೆ ಮಾಡುತ್ತಿದ್ದಾರೆ. ಈಗಿನ ನಿಯಮಗಳ ಪ್ರಕಾರ ಇವರಿಗೆ ಪಟ್ಟಾ ನೀಡಲು ಬರುವುದಿಲ್ಲ. ಸರಕಾರದ ಮಟ್ಟದಲ್ಲಿ ನಿಯಮಗಳನ್ನು ಸರಳೀಕರಣಗೊಳಿಸಿ ಪಟ್ಟಾ ದಾಖಲೆ ನೀಡಲಾಗುತ್ತದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ಸೋಮವಾರ ಶಾಸಕರ ಕಚೇರಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಳೆದ 20 ವರ್ಷಗಳಿಂದ ಅಕ್ರಮ ಸಕ್ರಮ ಸಮಿತಿ ಸಭೆ ಜರುಗಿಲ್ಲ ಇದರಿಂದ ಗ್ರಾಮೀಣ ಭಾಗದಲ್ಲಿ ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರು ಫಾರಂ 91, 92,93 ಸಿ ಅಡಿಯಲ್ಲಿ ಮತ್ತು ಸರಕಾರಿ ಭೂಮಿ ಸಾಗುವಳಿ ಮಾಡುವವರು ಪಟ್ಟಾ ದಾಖಲೆಗಾಗಿ 1390 ಫಾರಂ 57 ಅರ್ಜಿ ಹಾಕಿದ್ದು ಇದರಲ್ಲಿ ನಿಯಮಬದ್ಧವಾಗಿರುವ 278 ಜನರಿಗೆ  ಪಟ್ಟಾ ದಾಖಲೆ ನೀಡಲು ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಪ್ರಮುಖವಾಗಿ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ಎ.ಬಿ.ಖರಾಬ್ ಭೂಮಿಯನ್ನು ಅಧಿಕಾರಿಗಳು ಹೆಚ್ಚು ಮಾಡಿದ್ದು ಕಂದಾಯ ಸಚಿವರ ಜತೆ ಮಾತನಾಡಿ ಆರ್‌ಟಿಸಿಯಿಂದ ಮೊದಲು ಎ.ಬಿ ಖರಾಬ್ ತೆಗೆದು ಹಾಕಲಾಗುತ್ತದೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿಯಲ್ಲಿರುವ ಭೂಮಿಯನ್ನು ಉಳುಮೆ ಮಾಡುವವರು ಅರ್ಜಿ  ಹಾಕಿದ್ದು ಅರಣ್ಯ ಇಲಾಖೆಯ ನಿರಾಪೇಕ್ಷಣಾ ಪತ್ರ ತರಿಸಿಕೊಂಡು ಪಟ್ಟಾ ವಿತರಣೆ ಮಾಡಲಾಗುತ್ತದೆ. ಇರಕಲ್‌ಗಡಾ ಹೋಬಳಿಯಲ್ಲಿ ಅಧಿಕಾರಿಗಳು ಅಪೂರ್ಣ ಮಾಹಿತಿ ತಂದಿರುವುದರಿಂದ  ಫೆ.20 ರಂದು ಮತ್ತೊಮ್ಮೆ  ಪೂರ್ಣ ಪ್ರಮಾಣದ ಸಭೆ ನಡೆಸಿ  ಶೀಘ್ರ ಪಟ್ಟಾ ವಿತರಣೆ ಮಾಡಲಾಗುತ್ತದೆ ಎಂದರು.

ಸಭೆಯಲ್ಲಿ ತಹಸೀಲ್ದಾರ್ ಯು.ನಾಗರಾಜ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಸಿದ್ಧಲಿಂಗಯ್ಯ ಗಡ್ಡಿಮಠ,ರಾಧಾ ಉಮೇಶ, ಕರುಣಾಕರ್, ಕಂದಾಯ ನಿರೀಕ್ಷಕ ಮಂಜುನಾಥಸ್ವಾಮಿ ಸೇರಿ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.