ಅಕ್ಷರ ದಾಸೋಹ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ
Team Udayavani, Feb 9, 2020, 5:39 PM IST
ಯಲಬುರ್ಗಾ: ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಪ್ರಜಾಸತ್ತಾತ್ಮಕ, ಸಂವಿಧಾನಾತ್ಮಕ ಹೋರಾಟಗಳ ಮೇಲಿನ ನಿಷೇಧಾಜ್ಞೆ ಮತ್ತು ಬಂಧನ ಕುರಿತು ಆದೇಶದಲ್ಲಿರುವ ಅಸರ್ಮಪಕ ಅಂಶಗಳನ್ನು ಹಿಂಪಡೆಯಲು ಮತ್ತು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಸಮಿತಿ ಪದಾ ಧಿಕಾರಿಗಳು ತಹಶೀಲ್ದಾರ್ ಶ್ರೀಶೈಲ ತಳವಾರ ಅವರಿಗೆ ಮನವಿ ಸಲ್ಲಿಸಿದರು.
ಸಿಪಿಎಂ ಮುಖಂಡ ಶಿವನಗೌಡ ಮಾತನಾಡಿ, ಕಾನೂನು ಬದ್ಧವಾಗಿ ಅಕ್ಷರದಾಸೋಹ ನೌಕರರು ಹೋರಾಟ ಮಾಡುತ್ತಿದ್ದು ವಿನಾಕಾರಣ ನೌಕರರ ಮೇಲೆ ನಿಷೇಧಾಜ್ಞೆ ಹೇರಿದ್ದು, ಸರಿಯಲ್ಲ ಸರಕಾರ ಶೀಘ್ರದಲ್ಲಿ ಆ ನಿರ್ಧಾರ ಹಿಂಪಡೆಯಬೇಕು. 2001ರಿಂದ ಕಡಿಮೆ ವೇತನದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.ಕಡಿಮೆ ವೇತನದಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು, ನಿವೃತ್ತಿ ನಂತರ ವೇತನ ನೀಡಬೇಕು. 6:00 ಗಂಟೆ ಕರ್ತವ್ಯಎಂದು ನಮೂದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಬೇಕು. ಇಲ್ಲದಿದ್ದರೆ ಬಿಸಿಯೂಟ ನೌಕರರು ರಾಜ್ಯಾದ್ಯಂತಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಶ್ರೀಶೈಲ ತಳವಾರ ಮಾತನಾಡಿ, ತಮ್ಮ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂಬ ಭರವಸೆ ನೀಡಿದರು. ಬಿಸಿಯೂಟ ನೌಕರರಾದ ಪದ್ಮಾವತಿ, ಜಯಶ್ರೀ, ಎಸ್ಎಫ್ಐ ಮುಖಂಡರಾದ ಎಂ.ಸಿದ್ದಪ್ಪ, ಭೀಮಪ್ಪ ಮೇಟಿ, ವಿರೇಶ ಕುಂಬಾರ, ಪಂಚಾಕ್ಷರಿ, ಪರಶುರಾಮ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ