ಕೋಡಿ ಒಡೆದ ಅಮರಾಪುರ ಕೆರೆ; ಅಪಾರ ಪ್ರಮಾಣದ ನೀರು ಹಳ್ಳದ ಪಾಲು
Team Udayavani, Oct 14, 2022, 10:47 PM IST
ಕುಷ್ಟಗಿ: ಕಳೆದ ಮೂರು ದಿನಗಳಿಂದ ನಿರಂತರ ಮಳೆಗೆ ತಾಲೂಕಿನ ಅಮರಾಪುರ ಗ್ರಾಮದ ಕೆರೆ ಒಡೆದಿದೆ. ಈ ಪ್ರದೇಶದಲ್ಲಿ ಜಾಸ್ತಿ ಮಳೆಯೇ ಕೆರೆ ಕಟ್ಟೆ ನೆನೆದು ಒಡೆಯಲು ಕಾರಣವಾಗಿದ್ದು, ಕೆರೆ ಕಟ್ಟೆಯ ಅಪಾರ ಪ್ರಮಾಣದ ನೀರು ಹಳ್ಳಕ್ಕೆ ಪಾಲಾಗಿದೆ.
ಕಳೆದ ಮೂರು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆಯಾಗಿದೆ. ಈ ಮಳೆಗೆ ಹಳ್ಳದ ಮೂಲಕ ಅಪಾರ ಪ್ರಮಾಣದಲ್ಲಿ ನೀರು ಜಮೆಯಾಗಿದ್ದು, ಕೆರೆ ಕೋಡಿ ಹಾಗೂ ಒಡ್ಡಿನ ಮೇಲೆ ಹರಿದ ಪರಿಣಾಮ ಕೆರೆಕಟ್ಟೆ ಒಡೆದು, ಸಂಗ್ರಹವಾದ ಅಪಾರ ಪ್ರಮಾಣದ ನೀರು ಹಳ್ಳ ಸೇರಿದೆ.
2009-10ನೇ ಸಾಲಿನಲ್ಲಿ ಹಿಂದೆ ಸಣ್ಣ ನೀರಾವರಿ ಇಲಾಖೆಯೂ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ 13 ಎಕರೆ ಪ್ರದೇಶದಲ್ಲಿ ಈ ಕೆರೆ 80 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಈ ಕೆರೆ ನಿರ್ಮಿಸಿದಾಗಿನಿಂದ ಇಷ್ಟೊಂದು ಪ್ರಮಾಣದಲ್ಲಿ ನೀರು ಜಮೆಯಾಗಿ ಕೆರೆ ಕಟ್ಟೆ ಒಡೆಯುವ ಮಟ್ಟಿಗೆ ನೀರು ಬಂದಿರುವುದು ಇದೇ ಮೊದಲು. ಯಾವೂದೇ ಬೆಳೆ ಹಾನಿ ಸಂಭವಿಸಿಲ್ಲ ಎನ್ನುವುದೇ ಸಮಾಧಾನಕರ ಅಂಶವಾಗಿದೆ.
ಅನುಮಾನ?
ಈ ಹಿಂದೆ ಸದರಿ ಕೆರೆಯಲ್ಲಿ ನಿಂತಿರುವ ನೀರಿನಲ್ಲಿ ಗ್ರಾಮ ಪಂಚಾಯತಿ ಹಾಗೂ ಸಣ್ಣ ನೀರಾವರಿ ಇಲಾಖೆ ಅನುಮತಿ ಪಡೆಯದೇ ಖಾಸಗಿ ಮೀನು ಸಾಕಾಣಿಕೆಗೆ ಮೀನು ಮರಿಗಳನ್ನು ಬಿಟ್ಟಿದ್ದರು. ಮೀನುಗಳ ಕೆರೆಯ ಒಳಗಟ್ಟೆಯ ಮೂಲಕ ಹೊರಗೆ ಹೋಗಬಾರದು ಎನ್ನುವ ಉದ್ದೇಶದ ಹಿನ್ನೆಲೆಯಲ್ಲಿ ಒಳ್ಳಗಟ್ಟಿ ಬಂದ್ ಮಾಡಿದ್ದರಿಂದಲೇ ಕೆರೆ ಒಡೆಯಲು ಕಾರಣ ಅನುಮಾನ ಸಾರ್ವಜನಿಕವಾಗಿ ದಟ್ಟವಾಗಿದೆ. ಆದರೆ ಸಣ್ಣ ನೀರಾವರಿ ಅಧಿಕಾರಿಗಳು ಈ ಅನುಮಾನ ಅಲ್ಲಗಳೆದಿದ್ದು, ಜಾಸ್ತಿ ಮಳೆಯಿಂದ ಕೆರೆ ಒಡೆದಿರುವ ಸಮಾಜಾಯಿಷಿಗೆ ಮುಂದಾಗಿದ್ದಾರೆ. ಒಟ್ಟಿನಲ್ಲಿ ಅಮರಾಪೂರ ಕೆರೆಯ ನೀರು, ಹಳ್ಳದ ಪಾಲಾಗಿರುವುದರಿಂದ ಅಂತರ್ಜಲ ಕುಸಿಯುವ ಆತಂಕ ರೈತರದ್ದಾಗಿದೆ.
ಒಡೆದ ಕೆರೆಯ ಪ್ರದೇಶಕ್ಕೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಸಣ್ಣ ನೀರಾವರಿ ಇಲಾಖೆಯ ಇಇ ನಾಗನಾಗೌಡ, ಎಇಇ ಸೂಗಪ್ಪ, ಜೆಇ ರಾಜಶೇಖರ ಕಟ್ಟಿಮನಿ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ