ಕೆಟ್ಟು ನಿಂತ ಆಂಬ್ಯುಲೆನ್ಸ್‌  | ಮೈಮರೆತ ಕಿಮ್ಸ್‌  


Team Udayavani, Oct 19, 2021, 8:57 PM IST

fhfcghftyt

ಕೊಪ್ಪಳ: ನಗರದ ಜಿಲ್ಲಾ ಜಿಲ್ಲಾಸ್ಪತ್ರೆಯಲ್ಲಿ ಎರಡು ಆಂಬ್ಯುಲೆನ್ಸ್‌ಗಳಿವೆ. ಆದರೆ ಅವುಗಳನ್ನು 15 ದಿನಗಳಿಂದಲೂ ದುರಸ್ತಿ ಮಾಡಿಸಿಯೇ ಇಲ್ಲ. ಇದರಿಂದ ಆಸ್ಪತ್ರೆಯ ರೋಗಿಗಳನ್ನು ತುರ್ತು ಚಿಕಿತ್ಸೆಗಾಗಿ ಅನ್ಯ ಊರುಗಳಿಗೆ ಸ್ಥಳಾಂತರಿಸಲು ವಾಹನದ ವ್ಯವಸ್ಥೆ ಇಲ್ಲದಂತಾಗಿದೆ. ಇದರಿಂದ ಬಡವರಿಗೆ ಆರ್ಥಿಕ ಹೊರೆಯಾಗುತ್ತಿದೆ.

ಪ್ರಸ್ತುತ ಜಿಲ್ಲಾಸ್ಪತ್ರೆಯಲ್ಲಿ ಎರಡು ಸರ್ಕಾರಿ ಆಂಬ್ಯುಲೆನ್ಸ್‌ಗಳಿವೆ. ದಿನದ 24 ಗಂಟೆಯೂ ಅವು ಸೇವೆಗೆ ಸಿದ್ಧವಾಗಿರಬೇಕು. ಕೆಲ ವರ್ಷಗಳಿಂದ ಅವುಗಳು ಜನರಿಗೆ ಸೇವೆ ಕೊಟ್ಟಿವೆ. ಆದರೆ ಕಳೆದ ಕೆಲ ದಿನಗಳಿಂದ ವಾಹನಗಳನ್ನು ರಿಪೇರಿ ಮಾಡಿಸದ ಕಾರಣ ಅವುಗಳು ಆಸ್ಪತ್ರೆ ಮೂಲೆ ಸೇರುವಂತಾಗಿವೆ. ಆಂಬ್ಯುಲೆನ್ಸ್‌ಗೆ ಆಯಿಲ್‌ ಸರ್ವಿಸ್‌, ಟೈಯರ್‌ ರಿಪ್ಲೇಸ್‌, ಮಷಿನ್‌ ಚೆಕಪ್‌ ಸೇರಿದಂತೆ ಕೆಲವು ಸಣ್ಣಪುಟ್ಟ ರಿಪೇರಿಗಳನ್ನು ಮಾಡಿಸಬೇಕಿದೆ. ಆದರೆ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರು, ಮೆಡಿಕಲ್‌ ಕಾಲೇಜು ನಿರ್ದೇಶಕರು ಈ ಬಗ್ಗೆ ಕಾಳಜಿಯನ್ನೇ ವಹಿಸಿಲ್ಲ. ಅವುಗಳನ್ನು ಇಲ್ಲಿವರೆಗೂ ರಿಪೇರಿ ಮಾಡಿಸಿಯೇ ಇಲ್ಲ. ದುರಸ್ಥಿಗಾಗಿ ಇನ್ನೂ ಪತ್ರ ವ್ಯವಹಾರಗಳೇ ನಡೆಯುತ್ತಿವೆ.

ಜಿಲ್ಲಾಸ್ಪತ್ರೆಯ ವೈದ್ಯರು ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಹುಬ್ಬಳ್ಳಿ, ಗದಗ ಹಾಗೂ ಧಾರವಾಡಕ್ಕೆ ಶಿಫಾರಸ್ಸು ಮಾಡುವುದೇ ಹೆಚ್ಚಾಗಿದೆ. ಇಲ್ಲಿನ ರೋಗಿಗಳಿಗೆ ಸಣ್ಣ ಸಮಸ್ಯೆಯಿದ್ದರೂ ಹುಬ್ಬಳ್ಳಿ ಕಿಮ್ಸ್‌, ಇಲ್ಲವೇ ಧಾರವಾಡದ ಎಸ್‌ ಡಿಎಂಗೆ ಶಿಫಾರಸು ಮಾಡುವುದೇ ಹೆಚ್ಚಾಗಿದೆ. ಈ ವೇಳೆಗೆ ರೋಗಿಗಳಿಗೆ ಸರ್ಕಾರಿ ಸೇವೆಯಲ್ಲಿರುವ ಆಂಬ್ಯುಲೆನ್ಸ್‌ ಆಸರೆಯಾಗುತ್ತದೆ. ಡಿಸೇಲ್‌ ವೆಚ್ಚವನ್ನು ರೋಗಿಗಳು ಭರಿಸಿದರೆ ಯಾವುದೇ ಆಸ್ಪತ್ರೆಗೂ ಸರ್ಕಾರಿ ಆಂಬ್ಯುಲೆನ್ಸ್‌ಗಳು ರೋಗಿಗಳನ್ನು ಕರೆದೊಯ್ಯಲಿವೆ. ಅದೇ ರೋಗಿಗಳು ಖಾಸಗಿ ವಾಹನ ಅಥವಾ ಖಾಸಗಿ ಆಂಬ್ಯುಲೆನ್ಸ್‌ ಮೊರೆ ಹೋದರೆ ಆರ್ಥಿಕ ಹೊರೆಯಾಗಲಿದೆ. ಇಲ್ಲಿನ ಸರ್ಕಾರಿ ಆಂಬ್ಯುಲೆನ್ಸ್‌ ದುರಸ್ಥಿಯಲ್ಲಿರುವುದರಿಂದ ಅನ್ಯಕಡೆ ತೆರಳುವ ರೋಗಿಗಳು ತುಂಬ ತೊಂದರೆ ಎದುರಿಸುವಂತಾಗಿದೆ.

ತುರ್ತು ಚಿಕಿತ್ಸೆಗೆ ಆಂಬ್ಯುಲೆನ್ಸ್‌ ಇಲ್ಲ: ಆಂಬ್ಯುಲೆನ್ಸ್‌ಗಳ ದುರಸ್ತಿ ಕುರಿತು ಜಿಲ್ಲಾಸ್ಪತ್ರೆಯ ಮುಖ್ಯಸ್ಥರಿಗೂ ಗೊತ್ತಿದೆ. ಕೊಪ್ಪಳ ಮೆಡಿಕಲ್‌ ಕಾಲೇಜು ನಿರ್ದೇಶಕರಿಗೂ ಗೊತ್ತಿದೆ. ಆದರೆ ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕರು ನಾವು ಕಿಮ್ಸ್‌ ನಿರ್ದೇಶಕರಿಗೆ ಪತ್ರ ಬರೆದಿದ್ದೇವೆ. ಅಲ್ಲಿಂದ ಅನುದಾನ ಬಂದಾಗ ದುರಸ್ತಿ ಮಾಡಿಸುತ್ತೇವೆ ಎನ್ನುವ ಉತ್ತರ ನೀಡುತ್ತಿದ್ದಾರೆ. ಕಿಮ್ಸ್‌ನಿಂದಲೂ ಇದಕ್ಕೆ ಯಾವುದೇ ಸ್ಪಂದನೆ ದೊರೆತಿಲ್ಲ. ದಿನದ 24 ಗಂಟೆಯೂ ಯಾವುದೇ ಸಂದರ್ಭದಲ್ಲಿ ಆಂಬ್ಯುಲೆನ್ಸ್‌ ಜಿಲ್ಲಾಸ್ಪತ್ರೆಯಲ್ಲಿ ಸಿದ್ಧವಾಗಿರಬೇಕು. ಆದರೆ ಯಾವುದೇ ಆಂಬ್ಯುಲೆನ್ಸ್‌ ಇಲ್ಲದೇ ಇರುವುದು ನಿಜಕ್ಕೂ ಬೇಸರದ ಸಂಗತಿ. ಜಿಲ್ಲಾಸ್ಪತ್ರೆಗೆ ಪ್ರತಿನಿತ್ಯ 1000-1500 ರೋಗಿಗಳು ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವೇಳೆ ಕನಿಷ್ಟ 10 ಆಂಬ್ಯುಲೆನ್ಸ್ ಗಳಿದ್ದರೂ ಕಡಿಮೆಯೇ. ಇಷ್ಟೆಲ್ಲ ಗೊತ್ತಿದ್ದರೂ ವಾಹನದ ವ್ಯವಸ್ಥೆ ಸುಸಜ್ಜಿತವಾಗಿಟ್ಟುಕೊಳ್ಳಬೇಕು ಎನ್ನುವ ಕಾಳಜಿ ಇಲ್ಲದಿರುವುದು ನಿಜಕ್ಕೂ ಬೇಸರದ ಸಂಗತಿ. ಖಾಸಗಿ ಆಂಬ್ಯುಲೆನ್ಸ್‌ ಲಾಭಿಯೇ? : ಜಿಲ್ಲಾಸ್ಪತ್ರೆಯ ಮುಂಭಾಗ ಹಾಗೂ ಒಳಾಂಗಣ ಆವರಣದಲ್ಲಿ ನಿತ್ಯವೂ ಖಾಸಗಿ ಆಂಬ್ಯುಲೆನ್ಸ್‌ಗಳೇ ಹೆಚ್ಚಾಗಿ ಕಂಡು ಬರುತ್ತಿವೆ. ಇಂತಹ ಖಾಸಗಿ ಆಂಬ್ಯುಲೆನ್ಸ್‌ ಲಾಬಿಗೆ ಜಿಲ್ಲಾಸ್ಪತ್ರೆ ಮಣಿದಿದೆಯೇ ಎನ್ನುವ ಅನುಮಾನ ಮೂಡುತ್ತಿದೆ. ಬಡವರಿಗೆ ಸಕಾಲಕ್ಕೆ ಸೇವೆ ಕೊಡಬೇಕಾದ ಜಿಲ್ಲಾಸ್ಪತ್ರೆಯ ಮುಖ್ಯಸ್ಥರು ಈ ಬಗ್ಗೆ ಹೆಚ್ಚು ಕಾಳಜಿ ವಹಿಸಿ ದುರಸ್ತಿ ಮಾಡಿಸದೇ ಇರುವುದು ರೋಗಿಗಳ ಆಕ್ರೋಶಕ್ಕೂ ಕಾರಣವಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.