ಪೈಪ್‌ಲೈನ್‌ ಒಡೆದು 18 ಗಂಟೆ ಹಳ್ಳದಂತೆ ಹರಿದ ನೀರು


Team Udayavani, Jul 10, 2019, 4:04 PM IST

kopala-tdy-4..

ಕುಷ್ಟಗಿ: ವ್ಹಾಲ್ ಬಿರುಕಿನಿಂದ ಕಾರಂಜಿಯಂತೆ ಚಿಮ್ಮುತ್ತಿರುವ ಕೃಷ್ಣಾ ನದಿ ನೀರು.

ಕುಷ್ಟಗಿ: ಆಲಮಟ್ಟಿ ಜಲಾಶಯದಿಂದ ಜಿಂದಾಲ್ಗೆ ಸರಬರಾಜಾಗುವ ಪೈಪ್‌ಲೈನ್‌ ಒಡೆದು ರೈತರ ಜಮೀನುಗಳಲ್ಲಿ ಹಳ್ಳದಂತೆ ಹರಿದಿದ್ದು, ಫಲವತ್ತಾದ ಮಣ್ಣು ಕೊಚ್ಚಿ ಹೋಗಿದೆ. ಚೇತರಿಕೆ ಹಂತದ ಬೆಳೆಗಳು ಜಲಾವೃತಗೊಂಡಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ಕುಷ್ಟಗಿ ಸೀಮಾದಲ್ಲಿ ನಡೆದಿದೆ.

10 ವರ್ಷಗಳ ಹಿಂದೆ ಆಲಮಟ್ಟಿ ಜಲಾಶಯದಿಂದ ಕುಷ್ಟಗಿ ಮೂಲಕ ಜಿಂದಾಲ್ (ಜೆಎಸ್‌ಡಬ್ಲ್ಯೂ) ಕೈಗಾರಿಕಾ ಸಮೂಹಕ್ಕೆ ಬೃಹತ್‌ ಪೈಪ್‌ಲೈನ್‌ ಅಳವಡಿಸಲಾಗಿದೆ. ಪೈಪಲೈನ್‌ ಮಾರ್ಗದಲ್ಲಿ ಅಲ್ಲಲ್ಲಿ ನೀರಿನ ರಭಸ ನಿಯಂತ್ರಿಸಲು ವ್ಹಾಲ್ ಅಳವಡಿಸಲಾಗಿದೆ. ಕುಷ್ಟಗಿ ವ್ಯಾಪ್ತಿಯಲ್ಲಿ ರೇಣವ್ವ ಕಂದಗಲ್ ಅವರ ಜಮೀನಿನಲ್ಲಿ ವ್ಹಾಲ್ ಅಳವಡಿಸಲಾಗಿದ್ದು ಕಳೆದ ಸೋಮವಾರ ಪೈಪ್‌ಲೈನ್‌ ನೀರಿನ ಒತ್ತಡಕ್ಕೆ ಒಡೆದಿದೆ. ನೀರು ಸುಮಾರು ಆರು ಅಡಿ ಎತ್ತರ ಚಿಮ್ಮಿದ್ದು, ಅಪಾರ ಪ್ರಮಾಣದಲ್ಲಿ ನೀರು 18 ಗಂಟೆಗಳ ಕಾಲ ಹರಿದಿದೆ. ಮಂಗಳವಾರ ಬೆಳಗ್ಗೆ ಜಮೀನು, ಹಳ್ಳದಲ್ಲಿ ನೀರು ಹರಿಯುತ್ತಿರುವುದು ಅಚ್ಚರಿ ಮೂಡಿಸಿತು. ನಂತರ ಗಮನಿಸಿದಾಗ ರೇಣವ್ವ ಕಂದಗಲ್ ಅವರ ಜಮೀನಿನಲ್ಲಿರುವ ಪೈಪ್‌ಲೈನ್‌ ಒಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪೈಪ್‌ಲೈನ್‌ ಮೇಲುಸ್ತುವಾರಿಯ ಜಿಂದಾಲ್ ಕಂಪನಿಯ ಸಂತೋಷ ಮೂಲಿಮನಿ, ಇಲಕಲ್ ಮೇಲುಸ್ತುವಾರಿಯ ಸಿದ್ರಾಮಪ್ಪ ಅವರ ಗಮನಕ್ಕೆ ತಂದು ನೀರು ಸರಬರಾಜು ನಿಲ್ಲಿಸುವಂತೆ ಒತ್ತಾಯಿಸಲಾಯಿತು. ನಂತರ ಆಗಮಿಸಿದ ಮೇಲುಸ್ತುವಾರಿ ಸಿಬ್ಬಂದಿ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಸಂಪೂರ್ಣ ನಿಯಂತ್ರಣಕ್ಕೆ ಬಂತು.

ನೀರಿನ ರಭಸಕ್ಕೆ ರೇಣವ್ವ ಕಂದಗಲ್ ಅವರ 4 ಎಕರೆ, ಚಂದಪ್ಪ ಕಂದಗಲ್ ಅವರ 3 ಎಕರೆ, ಮಂಜುನಾಥ ಮಹಾಲಿಂಗಪೂರ, ರಮೇಶ ಮಹಾಲಿಂಗಪುರ ಅವರ 10 ಎಕರೆ, ಹುಸೇನಸಾಬ್‌ ಕಾಯಿಗಡ್ಡಿ ಅವರ 3 ಎಕರೆಯಲ್ಲಿ ಬಿತ್ತನೆ ಮಾಡಿದ್ದ ಹೆಸರು ಬೆಳೆ ಜಲಾವೃತಗೊಂಡಿದೆ. ಜಿಂದಾಲ್ ಪೈಪ್‌ಲೈನ್‌ ವ್ಹಾಲ್ ಇರುವ ಪ್ರದೇಶಕ್ಕೆ ಪಿಎಸ್‌ಐ ವಿಶ್ವನಾಥ ಹಿರೇಗೌಡ್ರು, ಗ್ರಾಮ ಲೆಕ್ಕಾಧಿಕಾರಿ ಶರಣಪ್ಪ ದಾಸರ ಭೇಟಿ ನೀಡಿ ಪರಿಶೀಲಿಸಿದರು.

ಪೈಪ್‌ಲೈನ್‌ ವ್ಹಾಲ್ ಯಾರೋ ದುಷ್ಕರ್ಮಿಗಳು ಕಲ್ಲಿನಿಂದ ಧ್ವಂಸಗೊಳಿಸಿದ್ದರಿಂದಲೇ ಈ ರೀತಿಯಾಗಿದೆ ಎಂದು ಸಂತೋಷ ಮೂಲಿಮನಿ ರೆೈತರಿಗೆ ತಿಳಿಸಿದರು, ನಂತರ ಪಿಎಸ್‌ಐ ವಿಶ್ವನಾಥ ಹಿರೇಗೌಡ್ರು ಆಗಮಿಸಿದ್ದ ವೇಳೆ ಪೈಪ್‌ನಲ್ಲಿ ವ್ಹಾಲ್ಗೆ ಪ್ಲಾಸ್ಟಿಕ್‌ ಇತರೇ ತ್ಯಾಜ್ಯ ಕಟ್ಟಿಕೊಂಡಾಗ ವ್ಹಾಲ್ನಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ತಿಳಿಸಿದರು. ಈ ಧ್ವಂದ್ವ ಹೇಳಿಕೆ ಪ್ರಶ್ನಾರ್ಹವಾಗಿದೆ. ಇಲಕಲ್ ಪೈಪ್‌ಲೈನ್‌ ಮೇಲುಸ್ತುವಾರಿ ಸಿಬ್ಬಂದಿ ಸಿದ್ರಾಮಪ್ಪ ಅವರು ವ್ಹಾಲ್ನಿಂದ ನೀರು ಹರಿದು ಜಮೀನು ಹಾಳಾಗಿರುವ ಬಗ್ಗೆ ಮೇಲಾಧಿಕಾರಿಗಳ ಚಿತ್ರ ಸಮೇತ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಜಿಂದಾಲ್ ಕಂಪನಿಯ ಪೈಪ್‌ಲೈನ್‌ ವ್ಹಾಲ್ ಬಿರುಕು ತಾಂತ್ರಿಕ ದೋಷದಿಂದ ನೀರು ಹರಿದು ಬೆಳೆ, ಜಮೀನು ಹಾಳಾಗಿರುವ ಬಗ್ಗೆ ರೆೈತರು ದೂರು ನೀಡಿದರೆ, ಸಂಬಂಧಿಸಿದ ಕಂಪನಿ ಅಧಿಕಾರಿಯನ್ನು ಕರೆಸಿ ವಿಚಾರಿಸಲಾಗುವುದು.•ಕೆ.ಎಂ. ಗುರುಬಸವರಾಜ್‌, ತಹಶೀಲ್ದಾರ್‌

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.