ಆನೆಗೊಂದಿ ಉತ್ಸವ:ಉಳಿದ ಆಹಾರ ಪದಾರ್ಥ ತಿಂದು 30 ಕುರಿ-ಮೇಕೆ ಸಾವು; 180ಕ್ಕೂ ಹೆಚ್ಚು ಅಸ್ವಸ್ಥ
Team Udayavani, Mar 15, 2024, 11:05 AM IST
ಗಂಗಾವತಿ: ತಾಲೂಕಿನ ಆನೆಗೊಂದಿ ಹತ್ತಿರ ಹಳಸಿದ ಅನ್ನ- ಇತರೆ ಪದಾರ್ಥಗಳನ್ನು ತಿಂದು 30 ಕುರಿ-ಮೇಕೆಗಳು ಸಾವನ್ನಪ್ಪಿ, 180ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡ ಘಟನೆ ಆನೆಗೊಂದಿಯ ಕಡೆಬಾಗಿಲು ಗ್ರಾಮದ ಬಳಿ ಮಾ.15ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಾ.11,12 ರಂದು ಜರುಗಿದ ಆನೆಗೊಂದಿ ಉತ್ಸವದ ಸಂದರ್ಭ ಉತ್ಸವಕ್ಕೆ ಆಗಮಿಸಿದವರಿಗೆ ಸಿದ್ದಪಡಿದ್ದ ಅನ್ನ ಹಾಗೂ ಇತರೆ ಆಹಾರ ಪದಾರ್ಥಗಳು ಉಳಿದಿದ್ದು, ಉತ್ಸವದ ನಂತರ ಅಧಿಕಾರಿಗಳು ಸರಿಯಾಗಿ ಅವುಗಳನ್ನು ನಾಶಪಡಿಸದೇ ಉತ್ಸವದ ಮೈದಾನ ಹಾಗೂ ಊಟದ ವ್ಯವಸ್ಥೆ ಮಾಡಿದ್ದ ಜಾಗದಲ್ಲಿ ಚೆಲ್ಲಿದ್ದರಿಂದ ಅವುಗಳನ್ನು ಸಂಚಾರಿ ಕುರಿಗಾರರ ಕುರಿಗಳು, ಮೇಕೆಗಳು ತಿಂದ ಪರಿಣಾಮ 30 ಕುರಿಗಳು, ಮೇಕೆಗಳು ಸಾವನ್ನಪ್ಪಿದ್ದು 180ಕ್ಕೂ ಹೆಚ್ಚು ಕುರಿ-ಮೇಕೆಗಳು ಅಸ್ವಸ್ಥಗೊಂಡಿವೆ.
ಸುದ್ದಿ ತಿಳಿದು ಪಶುವೈದ್ಯಕೀಯ ಇಲಾಖೆಯ ವೈದ್ಯರು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಸ್ವಸ್ಥ ಕುರಿ-ಮೇಕೆಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಪಶು ವೈದ್ಯಕೀಯ ಇಲಾಖೆಯ ಡಾ. ಜಾಕೀರ ಹುಸೇನ್, ಡಾ.ಸೋಮಪ್ಪ ಹಾಗೂ ಸಿಬ್ಬಂದಿ ವರ್ಗದವರು ಚಿಕಿತ್ಸೆ ನೀಡುತ್ತಿದ್ದಾರೆ.
ಪರಿಹಾರಕ್ಕೆ ಆಗ್ರಹ: ಆನೆಗೊಂದಿ ಉತ್ಸವದಲ್ಲಿ ಉಳಿದ ಅನ್ನ ಇತರ ಪದಾರ್ಥಗಳು ಹಳಸಿದ್ದನ್ನು ವಿಲೇವಾರಿ ಮಾಡದೇ ಅಲ್ಲೇ ಬಿಸಾಕಿದ್ದನ್ನು ತಿಂದು 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, 180ಕ್ಕೂ ಹೆಚ್ಚು ಕುರಿಗಳು ಆಸ್ವಸ್ಥಗೊಂಡಿವೆ.
ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಇಂಥ ಅವಘಡ ಸಂಭವಿಸಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಸತ್ತ ಕುರಿ ಮತ್ತು ಮೇಕೆಗಳಿಗೆ ರಾಜ್ಯ ಸರ್ಕಾರ ವೈಜ್ಞಾನಿಕ ಪರಿಹಾರ ನೀಡುವಂತೆ ತಾಲೂಕು ಯಾದವ ಸಂಘದ ಅಧ್ಯಕ್ಷ ನ್ಯಾಯವಾದಿ, ಯಾದವ್ ಮಲ್ಲಾಪುರ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ