Anegundi Utsav ಚಾಲನೆ; ಪೊಲೀಸರ ನಿರ್ಬಂಧ: ಪ್ರೇಕ್ಷಕರ ಕೊರತೆ
Team Udayavani, Mar 12, 2024, 12:07 AM IST
ಗಂಗಾವತಿ: ಪೊಲೀಸರ ನಿರ್ಬಂಧ ದಿಂದಾಗಿ ಆನೆಗೊಂದಿ ಉತ್ಸವದ ರಾಜಾ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಪ್ರೇಕ್ಷಕರ ಕೊರತೆಯಿಂದಾಗಿ ಉತ್ಸವದ ಉದ್ಘಾಟನೆ ಮೂರು ತಾಸು ತಡವಾಗಿ ಆರಂಭವಾಯಿತು.
ಪ್ರೇಕ್ಷಕರು ಕುಳಿತುಕೊಳ್ಳಲು ಸುಮಾರು 20 ಸಾವಿರ ಕುರ್ಚುಗಳನ್ನು ಹಾಕಲಾಯಿತು. ಬಳ್ಳಾರಿ, ರಾಯಚೂರು ಜಿಲ್ಲೆಯಿಂದ ನಿಯೋಜನೆಗೊಂಡಿದ್ದ ಪೊಲೀಸರು, ಇನ್ಸ್ಪೆಕ್ಟರ್ ಗಳು ಪಾಸ್ ಇದ್ದವರನ್ನು ಮಾತ್ರ ಒಳಗೆ ಬಿಟ್ಟು ಪಾಸ್ ಇಲ್ಲದವರನ್ನು ವಾಪಸ್ ಕಳಿಸಿದ್ದರಿಂದ ಜನರು ವೇದಿಕೆ ಮುಂಭಾಗದ ರಸ್ತೆಯಲ್ಲಿ ನಿಂತಿದ್ದರಿಂದ ಪ್ರೇಕ್ಷಕರ ಕೊರತೆಯಾಯಿತು. ಬೆರಳೆಣಿಕೆಯಷ್ಟು ಪ್ರೇಕ್ಷಕರನ್ನು ಕಂಡ ಶಾಸಕ ಗಾಲಿ ಜನಾರ್ದನರೆಡ್ಡಿ ಆಪ್ತರು ಗಲಿಬಿಲಿಗೊಂಡ ಜಿಲ್ಲಾಧಿಕಾರಿ, ಎಸ್ಪಿಯವರ ಮನವರಿಕೆ ಮಾಡಿದರು. ನಂತರ ಮಾಧ್ಯಮ ಹಾಗೂ ಗಣ್ಯರ ಆಸನ ಹೊರತುಪಡಿಸಿ ಉಳಿದ ಕುರ್ಚಿಗಳಲ್ಲಿ ಪ್ರೇಕ್ಷಕರು ಕುಳಿತುಕೊಳ್ಳಲು ಸ್ಥಳೀಯ ಪೊಲೀಸರು ವ್ಯವಸ್ಥೆ ಮಾಡಿದರು. ಮೂರು ತಾಸಿನ ನಂತರ ಪ್ರೇಕ್ಷಕರು ಆಗಮಿಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿ ವೇದಿಕೆ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ